/newsfirstlive-kannada/media/post_attachments/wp-content/uploads/2024/07/SURYAKUMAR-YADAV-4.jpg)
2025ರ ಇಂಡಿಯನ್​ ಪ್ರೀಮಿಯರ್​ ಲೀಗ್​ಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಯುತ್ತಿದೆ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹೇಗಾದ್ರೂ ಮಾಡಿ ಕಪ್​ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿದೆ. ಹಾಗಾಗಿ ಆರ್​​ಸಿಬಿ ತಂಡದ ಮೆಂಟರ್​ ಮತ್ತು ಬ್ಯಾಟಿಂಗ್​ ಕೋಚ್​ ಆಗಿ ದಿನೇಶ್​ ಕಾರ್ತಿಕ್​ ಅವರನ್ನು ನೇಮಿಸಿದೆ. ಈ ಮಧ್ಯೆ ಟೀಮ್​ ಇಂಡಿಯಾದ ಟಿ20 ಕ್ಯಾಪ್ಟನ್​ ಸೂರ್ಯಕುಮಾರ್​ ಯಾದವ್​​ಗೆ ಆರ್​ಸಿಬಿ ಬಿಗ್​ ಆಫರ್​ ನೀಡಿ ಎಂದು ವರದಿಯಾಗಿದೆ.
ವರ್ಷದ ಕೊನೆ ಡಿಸೆಂಬರ್​ನಲ್ಲಿ 2025ರ ಐಪಿಎಲ್​​​​ ಮೆಗಾ ಆಕ್ಷನ್​ ನಡೆಯಲಿದೆ. ಮೆಗಾ ಆಕ್ಷನ್​ನಲ್ಲಿ ತಮಗೆ ಬೇಕಾದ ಆಟಗಾರರನ್ನು ಖರೀದಿ ಮಾಡಲು ಆರ್​​ಸಿಬಿ ಮುಂದಾಗಿದೆ. ಕ್ವಾಲಿಟಿ ಆಟಾಗರರ ಖರೀದಿ ಮಾಡಿ ಬಲಿಷ್ಠ ತಂಡ ಕಟ್ಟು ಪ್ಲಾನ್​ ಆರ್​​ಸಿಬಿಯದ್ದು. ಹಾಗಾಗಿ ಈಗ ಟಿ20 ಕ್ಯಾಪ್ಟನ್​​​ ಸೂರ್ಯಕುಮಾರ್​​ ಯಾದವ್​ ಮೇಲೆ ಆರ್​​ಸಿಬಿ ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ.
/newsfirstlive-kannada/media/post_attachments/wp-content/uploads/2024/07/KL-Rahul_Surya.jpg)
ಇನ್ನು, ಸ್ಫೋಟಕ ಬ್ಯಾಟರ್​ ಸೂರ್ಯಕುಮಾರ್​​ ಯಾದವ್​ಗೆ ಮೆಗಾ ಆಕ್ಷನ್​ಗೆ ಮುನ್ನವೇ ಆರ್​​ಸಿಬಿಯಿಂದ ಬಿಗ್​ ಆಫರ್​ ಬಂದಿದೆಯಂತೆ​​. ಮುಂದಿನ ಸೀಸನ್​ ವೇಳೆಗೆ ಮುಂಬೈ ತಂಡವನ್ನು ಸೂರ್ಯಕುಮಾರ್​ ಯಾದವ್​​ ಬಿಡೋದು ಪಕ್ಕಾ ಆಗಿದೆ. ಹಾಗಾಗಿ ಸೂರ್ಯ ಅವರನ್ನು ಆರ್​​ಸಿಬಿ ಖರೀದಿ ಮಾಡಬಹುದು.
ಸೂರ್ಯಗೆ ಆರ್​ಸಿಬಿ ಕ್ಯಾಪ್ಟನ್ಸಿ
ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಕ್ಯಾಪ್ಟನ್​​ ಫಾಫ್​ ಡುಪ್ಲೆಸಿಸ್​​. ಇವರು ಇದೇ ತಿಂಗಳು 13ನೇ ತಾರೀಕು 40 ವರ್ಷಕ್ಕೆ ಕಾಲಿಟ್ಟರು. ಹಾಗಾಗಿ ಫಾಫ್​​ಗೆ ಕೊಕ್​ ಕೊಟ್ಟು, ಸೂರ್ಯಕುಮಾರ್​​ ಯಾದವ್​​ ಅವರನ್ನು ಕ್ಯಾಪ್ಟನ್​ ಮಾಡಲು ಆರ್​​ಸಿಬಿ ಪ್ಲಾನ್​ ಮಾಡಿಕೊಂಡಿದೆ ಎನ್ನಲಾಗುತ್ತಿದೆ.
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us