/newsfirstlive-kannada/media/post_attachments/wp-content/uploads/2024/07/SURYAKUMAR-YADAV-4.jpg)
ಇತ್ತೀಚೆಗೆ ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಕೊನೆಯ ಟಿ20 ಪಂದ್ಯ ಗೆದ್ದು ಟೀಮ್ ಇಂಡಿಯಾ 4-1 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದೆ. ಇಂಗ್ಲೆಂಡ್ ತಂಡದ ವಿರುದ್ಧ ಟಿ20 ಸರಣಿ ಗೆದ್ರೂ ಟೀಮ್ ಇಂಡಿಯಾಗೆ ಒಂದು ಆತಂಕ ಕಾಡುತ್ತಲೇ ಇದೆ.
ಈಗಾಗಲೇ ಟೀಮ್ ಇಂಡಿಯಾ ಸರಣಿ ಗೆದ್ದಾಗಿದೆ. ಆದ್ರೂ, ತಂಡದಲ್ಲಿ ಟೆನ್ಶನ್ ತಪ್ಪಿಲ್ಲ. ಆಟಗಾರರ ಕಳಪೆ ಪರ್ಫಾಮೆನ್ಸ್ ಟೀಮ್ ಮ್ಯಾನೇಜ್ಮೆಂಟ್ ಟೆನ್ಶನ್ ಹೆಚ್ಚಿಸಿದೆ. ಈ ಟಿ20 ಸರಣಿ ಹಲವು ಆಟಗಾರರ ಭವಿಷ್ಯವನ್ನು ಬಹಿರಂಗಗೊಳಿಸಿದೆ.
ಟೀಮ್ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ನ ಅಧಿಪತಿ ಅನ್ನಿಸಿಕೊಂಡಿದ್ದ ಆಟಗಾರ. ಆದ್ರೆ, ನಾಯಕನ ಪಟ್ಟಕ್ಕೇರಿದ ಬಳಿಕ ಸೂರ್ಯ ಶೈನ್ ಆಗ್ತಿಲ್ಲ. ಆಫ್ರಿಕಾದಲ್ಲಿ ಫ್ಲಾಪ್ ಆದ ಸೂರ್ಯ, ಇದೀಗ ಇಂಗ್ಲೆಂಡ್ ಸರಣಿಯಲ್ಲೂ ವೈಫಲ್ಯ ಅನುಭವಿಸಿದ್ದಾರೆ. ಕೇವಲ 6.50ರ ಹೀನಾಯ ಸರಾಸರಿಯಲ್ಲಿ ರನ್ಗಳಿಸಿರೋ ಸೂರ್ಯನ ಸಾಮರ್ಥ್ಯದ ಬಗ್ಗೆ ಪ್ರಶ್ನೆ ಎದ್ದಿದೆ. ಇವರು ಹೀಗೆ ಮುಂದಿನ ದಿನಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ರೆ ಸೂರ್ಯಕುಮಾರ್ ಯಾದವ್ ನಾಯಕತ್ವದಿಂದ ಕಣಕ್ಕಿಳಿಯೋ ಸಾಧ್ಯತೆ ಇದೆ.
ಸೂರ್ಯ ಪರ್ಫಾಮೆನ್ಸ್ ನೀಡುವಲ್ಲಿ ಫೇಲ್ ಆಗಿದ್ದಾರೆ. ಕ್ಯಾಪ್ಟನ್ಸಿ ಹೊರತುಪಡಿಸಿ ಬ್ಯಾಟಿಂಗ್ನಲ್ಲಿ ಫ್ಲಾಪ್ ಆಗಿದ್ದಾರೆ. ಹೀಗಾಗಿ ಇವರ ಬದಲಿಗೆ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ಸಿ ಪಟ್ಟ ಕಟ್ಟಬೇಕು ಎನ್ನುವ ಮಾತುಗಳು ಕೇಳಿ ಬಂದಿವೆ.
ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ಸಿ
ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ. ಇವರು ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಆಲ್ರೌಂಡರ್ ಪರ್ಫಾಮೆನ್ಸ್ ನೀಡಿದ್ರು. ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲೂ ಅಪಾರವಾದ ಕೊಡುಗೆ ನೀಡಿದ ಇವರು ಒಬ್ಬ ಲೀಡರ್ ಕೂಡ ಹೌದು. ಹಾಗಾಗಿ ಇವರಿಗೆ ನಾಯಕತ್ವ ಪಟ್ಟ ಕಟ್ಟಲು ಬಿಸಿಸಿಐ ಪ್ಲ್ಯಾನ್ ಮಾಡಿಕೊಂಡಿದೆ.
ಇದನ್ನೂ ಓದಿ:ದೇಶಕ್ಕಾಗಿ ಆಡುವುದು ಗ್ರೇಟ್ ಫೀಲಿಂಗ್.. 37 ಎಸೆತದಲ್ಲಿ ಸೆಂಚುರಿ ಸಿಡಿಸಿ ಅಭಿಷೇಕ್ ಶರ್ಮಾ ಏನ್ ಹೇಳಿದರು?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ