ರಾಮನಗರದಲ್ಲಿ ವಕೀಲೆ ವಾಸುಕಿ ಅನುಮಾನಾಸ್ಪದ ಸಾವು.. ಅಸಲಿಗೆ ಆಗಿದ್ದೇನು?

author-image
admin
Updated On
ರಾಮನಗರದಲ್ಲಿ ವಕೀಲೆ ವಾಸುಕಿ ಅನುಮಾನಾಸ್ಪದ ಸಾವು.. ಅಸಲಿಗೆ ಆಗಿದ್ದೇನು?
Advertisment
  • ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿದ್ದ ವಕೀಲೆ
  • ಅವಿವಾಹಿತೆಯಾಗಿದ್ದ ವಕೀಲೆ ವಾಸುಕಿ ಸಾವಿಗೆ ಅಸಲಿ ಕಾರಣವೇನು?
  • ರಾಮನಗರದ ವಕೀಲೆ ವಾಸುಕಿ ಸಾವಿನ ಸುತ್ತಾ ಹಲವು ಅನುಮಾನಗಳು

ರಾಮನಗರ: ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವಾಸುಕಿ (25) ಮೃತ ದುರ್ದೈವಿ.

ಇದನ್ನೂ ಓದಿ: ಚಿಕ್ಕಪ್ಪನನ್ನೇ ಪ್ರೀತಿಸಿ ಮದುವೆಯಾದ ಯುವತಿ ಕೇಸ್​ಗೆ ಬಿಗ್​ ಟ್ವಿಸ್ಟ್​.. ಆಮೇಲೇನಾಯ್ತು ಗೊತ್ತಾ?

ಇದನ್ನೂ ಓದಿ: ಯೂಟ್ಯೂಬ್ ಇತಿಹಾಸದಲ್ಲೇ ಕ್ರಿಸ್ಟಿಯಾನೋ ರೊನಾಲ್ಡೊ ರೆಕಾರ್ಡ್ ಬ್ರೇಕ್‌; 24 ಗಂಟೆಯಲ್ಲೇ ಡೈಮಂಡ್‌ ಬಟನ್‌! 

ವಾಸುಕಿ ಅವರು ಅವಿವಾಹಿತೆಯಾಗಿದ್ದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ವಕೀಲೆ ವಾಸುಕಿ ಅವರು ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನೆಲೆಸಿದ್ದರು. ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

publive-image

ವಕೀಲೆ ವಾಸುಕಿ ಅವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅವಿವಾಹಿತೆ ಯಾಗಿರೋ ವಕೀಲೆ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment