/newsfirstlive-kannada/media/post_attachments/wp-content/uploads/2024/06/car-Fire-1.jpg)
ಚಿಕ್ಕಮಗಳೂರು: ಕಾರೊಂದು ಶಾರ್ಟ್ ಸರ್ಕ್ಯೂಟ್​​​ನಿಂದ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಬೆಳಕಿಗೆ ಬಂದಿದೆ. ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಈ ಘಟನೆ ನಡೆದಿದೆ.
ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಭಸ್ಮವಾಗಿದೆ. ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
/newsfirstlive-kannada/media/post_attachments/wp-content/uploads/2024/06/car-Fire.webp)
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ತಿದ್ದಂತೆ ನಾಲ್ವರು ಪ್ರಯಾಣಿಕರು ಕೆಳಗಿಳಿದು ಜೀವ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/06/car-Fire-2.jpg)
ಇದನ್ನೂ ಓದಿ: ‘ಅನ್ನದಾತ’ ರಾಮೋಜಿ ರಾವ್​.. ಕೃಷಿ ಕುಟುಂಬದಿಂದ ಬಂದು ಬಡವರ ಹಸಿವು ನೀಗಿಸಿದ ಪುಣ್ಯಾತ್ಮ
ತಕ್ಷಣವೇ ಸ್ಥಳಕ್ಕೆ ಬಂದ ಕಡೂರು ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us