ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪ
ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ SG ಸೂರ್ಯ ಅರೆಸ್ಟ್
CM ಸ್ಟಾಲಿನ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕಿಡಿ..!
ಚೆನ್ನೈ: ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇರೆಗೆ ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಜಿ ಸೂರ್ಯ ಅವರನ್ನು ಅರೆಸ್ಟ್ ಮಾಡಲಾಗಿದೆ.
ಚರಂಡಿ ಸ್ವಚ್ಛಗೊಳಿಸುವಾಗ ನೈರ್ಮಲ್ಯ ಕಾರ್ಯಕರ್ತೆ ಒಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸಂಸದ ವೆಂಕಟೇಶನ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸೂರ್ಯ ಟ್ವೀಟ್ ಮಾಡಿದ್ದರು. ಈ ರೀತಿಯ ಯಾವುದೇ ಘಟನೆ ನಡೆದಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಪೋಸ್ಟ್ ಹಾಕಿದ್ದಾರೆ ಎಂದು ಕೇಸ್ ದಾಖಲಿಸಿ ಸೂರ್ಯ ಅವರನ್ನು ಅರೆಸ್ಟ್ ಮಾಡಿದ್ದೇವೆ ಎಂದು ಮಧುರೈ ಪೊಲೀಷ್ ಕಮೀಷನರ್ ನರೇನ್ತಿರನ್ ನಾಯರ್ ಹೇಳಿದ್ದಾರೆ.
ಇನ್ನು, ಬಿಜೆಪಿ ಮುಖಂಡನನ್ನು ಬಂಧಿಸಿರೋ ತಮಿಳುನಾಡು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಮೂಲಕ ಬಿಜೆಪಿ ಕಾರ್ಯಕರ್ತರ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ. ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಸಿಎಂ ಸ್ಟಾಲಿನ್ಗೆ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಕೂಡ ಸೂರ್ಯ ಬಂಧನವನ್ನು ಖಂಡಿಸಿದ್ದಾರೆ.
I strongly condemn the arrest of @BJP4TamilNadu State Secretary Thiru @SuryahSG by Tamil Nadu police for raising questions against the incompetent DMK government.
If CM @mkstalin thinks that he can put down the true voice of Tamil Makkal through such arrests, then he should come…
— C T Ravi 🇮🇳 ಸಿ ಟಿ ರವಿ (@CTRavi_BJP) June 17, 2023
ಸೂರ್ಯ ಪೋಸ್ಟ್ನಲ್ಲಿ ಏನಿತ್ತು..?
ಪೌರ ಕಾರ್ಮಿಕರನ್ನು ಚರಂಡಿಗೆ ಇಳಿಸುವುದು ಅಮಾನವೀಯ. ಇದು ಕಾನೂನಿಗೆ ವಿರುದ್ಧವೂ ಹೌದು. ಚರಂಡಿ ಸ್ವಚ್ಛ ಮಾಡುವಾಗ ನೈರ್ಮಲ್ಯ ಕಾರ್ಯಕರ್ತೆಯೊಬ್ಬರು ಪ್ರಾಣ ಕಳೆದುಕೊಂಡರೂ ಸಂಸದ ವೆಂಕಟೇಶನ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನಿಮ್ಮ ಪ್ರತ್ಯೇಕತಾವಾದದ ನಕಲಿ ರಾಜಕೀಯ ಮೋರಿಗಿಂತಲೂ ಕೆಟ್ಟದಾಗಿ ಗಬ್ಬು ನಾರುತ್ತಿದೆ. ಮನುಷ್ಯರಾಗಿ ಬದುಕುವ ಮಾರ್ಗ ಕಂಡುಕೊಳ್ಳಿ ಎಂದು ಪೋಸ್ಟ್ ಹಾಕಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪ
ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ SG ಸೂರ್ಯ ಅರೆಸ್ಟ್
CM ಸ್ಟಾಲಿನ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕಿಡಿ..!
ಚೆನ್ನೈ: ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇರೆಗೆ ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಜಿ ಸೂರ್ಯ ಅವರನ್ನು ಅರೆಸ್ಟ್ ಮಾಡಲಾಗಿದೆ.
ಚರಂಡಿ ಸ್ವಚ್ಛಗೊಳಿಸುವಾಗ ನೈರ್ಮಲ್ಯ ಕಾರ್ಯಕರ್ತೆ ಒಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸಂಸದ ವೆಂಕಟೇಶನ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸೂರ್ಯ ಟ್ವೀಟ್ ಮಾಡಿದ್ದರು. ಈ ರೀತಿಯ ಯಾವುದೇ ಘಟನೆ ನಡೆದಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಪೋಸ್ಟ್ ಹಾಕಿದ್ದಾರೆ ಎಂದು ಕೇಸ್ ದಾಖಲಿಸಿ ಸೂರ್ಯ ಅವರನ್ನು ಅರೆಸ್ಟ್ ಮಾಡಿದ್ದೇವೆ ಎಂದು ಮಧುರೈ ಪೊಲೀಷ್ ಕಮೀಷನರ್ ನರೇನ್ತಿರನ್ ನಾಯರ್ ಹೇಳಿದ್ದಾರೆ.
ಇನ್ನು, ಬಿಜೆಪಿ ಮುಖಂಡನನ್ನು ಬಂಧಿಸಿರೋ ತಮಿಳುನಾಡು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಮೂಲಕ ಬಿಜೆಪಿ ಕಾರ್ಯಕರ್ತರ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ. ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಸಿಎಂ ಸ್ಟಾಲಿನ್ಗೆ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಕೂಡ ಸೂರ್ಯ ಬಂಧನವನ್ನು ಖಂಡಿಸಿದ್ದಾರೆ.
I strongly condemn the arrest of @BJP4TamilNadu State Secretary Thiru @SuryahSG by Tamil Nadu police for raising questions against the incompetent DMK government.
If CM @mkstalin thinks that he can put down the true voice of Tamil Makkal through such arrests, then he should come…
— C T Ravi 🇮🇳 ಸಿ ಟಿ ರವಿ (@CTRavi_BJP) June 17, 2023
ಸೂರ್ಯ ಪೋಸ್ಟ್ನಲ್ಲಿ ಏನಿತ್ತು..?
ಪೌರ ಕಾರ್ಮಿಕರನ್ನು ಚರಂಡಿಗೆ ಇಳಿಸುವುದು ಅಮಾನವೀಯ. ಇದು ಕಾನೂನಿಗೆ ವಿರುದ್ಧವೂ ಹೌದು. ಚರಂಡಿ ಸ್ವಚ್ಛ ಮಾಡುವಾಗ ನೈರ್ಮಲ್ಯ ಕಾರ್ಯಕರ್ತೆಯೊಬ್ಬರು ಪ್ರಾಣ ಕಳೆದುಕೊಂಡರೂ ಸಂಸದ ವೆಂಕಟೇಶನ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನಿಮ್ಮ ಪ್ರತ್ಯೇಕತಾವಾದದ ನಕಲಿ ರಾಜಕೀಯ ಮೋರಿಗಿಂತಲೂ ಕೆಟ್ಟದಾಗಿ ಗಬ್ಬು ನಾರುತ್ತಿದೆ. ಮನುಷ್ಯರಾಗಿ ಬದುಕುವ ಮಾರ್ಗ ಕಂಡುಕೊಳ್ಳಿ ಎಂದು ಪೋಸ್ಟ್ ಹಾಕಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ