/newsfirstlive-kannada/media/post_attachments/wp-content/uploads/2024/08/tharun-sudir.jpg)
ಮೊನ್ನೆ ಮೊನ್ನೆಯಷ್ಟೇ ಸ್ಯಾಂಡಲ್ವುಡ್ನ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದರು. ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ನನ್ನ ಜೀವನದ ರಿಯಲ್ ಹೀರೋಯಿನ್ ಯಾರು ಅಧಿಕೃತವಾಗಿ ಅನೌನ್ಸ್ ಮಾಡಿದ್ದರು.
ಇದನ್ನೂ ಓದಿ:ತರುಣ್ ಸುಧೀರ್-ಸೋನಲ್ ಮದ್ವೆ ಕಾಗದ ವೈರಲ್.. ಪರಿಸರ ಸ್ನೇಹಿ ಜಾಗೃತಿಯ ಮೊರೆ ಹೋದ ಡೈರೆಕ್ಟರ್!
ಹೌದು, ರಾಬರ್ಟ್, ಕಾಟೇರ ಸಿನಿಮಾ ನಿರ್ದೇಶಕ ತರುಣ್ ಸುಧೀರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅದು ಕೂಡ ತಮ್ಮ ರಾಬರ್ಟ್ ಸಿನಿಮಾ ನಟಿ ಸೋನಾಲ್ ಮಂಥೆರೊ ಅವರ ಜೊತೆ. ಈ ಹಿಂದೆ ಬಗ್ಗೆ ನಟ ತರುಣ್ ಸುಧೀರ್ ತಾಯಿ ಮಾಲತಿ ಅವರು ಖಚಿತಪಡಿಸಿದ್ದರು. ಇದಾದ ಬಳಿಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮಂಥೆರೊ ಅವರು ಅಧಿಕೃತವಾಗಿ ಹಂಚಿಕೊಂಡಿದ್ದರು. ಸದ್ಯ ಈ ಸ್ಟಾರ್ ಜೋಡಿಯೂ ಮದುವೆ ತಯಾರಿಯಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.
ಇದೇ ಆಗಸ್ಟ್ 10 ಹಾಗೂ 11ರಂದು ಬೆಂಗಳೂರಿನ ಬಸವೇಶ್ವರ ನಗರದ ಶಂಕರ್ ಮಠದ ಬಳಿಯ ಹಾಲ್ನಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮಂಥೆರೊ ವಿವಾಹವಾಗಲಿದ್ದಾರೆ. ಅದಕ್ಕೂ ಮುನ್ನ ನಟಿ ಸೋನಾಲ್ ಅವರ ಸ್ನೇಹಿತರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ. ಮೂವರು ಸ್ನೇಹಿತರು ನಟಿ ಸೋನಾಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಸರ್ಪ್ರೈಸ್ ನೀಡಿದ ಬ್ಯಾಚುಲರ್ ಪಾರ್ಟಿಯಲ್ಲಿ ನಿರ್ದೇಶಕ ತರುಣ್ ಸುಧೀರ್ ಅವರ ಫೋಟೋವನ್ನು ಸಹ ಹಾಕಿ ಮಸ್ತ್ ಮಜಾ ಮಾಡಿದ್ದಾರೆ. ಸದ್ಯ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
View this post on Instagram
ಆಮಂತ್ರಣ ಪತ್ರಿಕೆಯ ವಿಶೇಷವೇನು ಗೊತ್ತಾ?
ಸಾಮಾನ್ಯವಾಗಿ ಬೇಡವಾದ ಕಾಗದಗಳನ್ನು ಬಿಸಾಕುವವರೇ ಜಾಸ್ತಿ. ಇದೇ ನಿಟ್ಟಿನಲ್ಲಿ ತರುಣ್ ಮತ್ತು ಸೋನಲ್ ಪರಿಸರ ಸ್ನೇಹಿ ವಿವಾಹದ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿದ್ದಾರೆ. ಇದನ್ನು ನೆಲದ ಮೇಲೆ ಬಿಸಾಡಿದ್ರೆ ಗಿಡವಾಗಿ ಬೆಳೆಯುತ್ತದೆ.
ತರುಣ್ ಕೈ ಹಿಡಿಯುತ್ತಿರುವ ಈ ನಟಿ ಯಾರು?
ಸೋನಲ್ ಮೊಂತೆರೊ ಮೂಲತಃ ಮಂಗಳೂರಿನವರು. ತುಳು ಚಿತ್ರದಲ್ಲಿ ಅಭಿನಯಿಸುವ ಮೂಲಕ ಬಣ್ಣದ ಜಗತ್ತಿಗೆ ಕಾಲಿಟ್ಟರು. 2015ರಲ್ಲಿ ತುಳು ಭಾಷೆಯ ‘ಎಕ್ಕ ಸಕ’ ಚಿತ್ರದಲ್ಲಿ ಮೊದಲ ಬಾರಿಗೆ ನಟಿಸಿದರು. ಸೋನಲ್ ಅವರು, ‘ಜೈ ತುಳುನಾಡು’, ‘ಪಿಲಿಬೈಲ್ ಯಮುನಕ್ಕ’ ತುಳು ಚಿತ್ರದಲ್ಲೂ ಅಭಿನಯಿಸಿದ್ದಾರೆ. ಬಳಿಕ 2018ರಲ್ಲಿ ‘ಅಭಿಸಾರಿಕೆ’ ಚಿತ್ರದ ಮೂಲಕ ಸ್ಯಾಂಡಲ್ವುಡ್ ಪ್ರವೇಶ ಪಡೆದರು. ಅದೇ ವರ್ಷ ಒಳ್ಳೇ ಹುಡುಗ ಪ್ರಥಮ್ ಜೊತೆ ‘ಎಂಎಲ್ಎ’ ಚಿತ್ರದಲ್ಲಿ ನಟಿಸಿದರು. ಇದಾದ ಬಳಿಕ ‘ಮದುವೆ ದಿಬ್ಬಣ’ ಚಿತ್ರದಲ್ಲಿ ನಾಯಕಿಯಾಗಿ ಸೋನೆಲ್ ಕಾಣಿಸಿಕೊಂಡರು. 2019ರಲ್ಲಿ ಯೋಗರಾಜ್ ಭಟ್ ನಿರ್ದೇಶನದ ‘ಪಂಚತಂತ್ರ’ ಚಿತ್ರಕ್ಕೆ ಸೋನೆಲ್ ನಾಯಕಿಯಾಗಿ ಮಿಂಚಿದರು. 2021ರಲ್ಲಿ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದಲ್ಲಿ ಕಾಣಸಿಕೊಂಡರು.
ಇದನ್ನೂ ಓದಿ:ಡಿವೋರ್ಸ್ ಬಳಿಕ ನನ್ನ ಬಳಿ ಹಣ, ಮನೆ ಏನೂ ಇರಲಿಲ್ಲ; ಬಿಗ್ಬಾಸ್ ಮಾಜಿ ಸ್ಪರ್ಧಿ ಶಾಕಿಂಗ್ ಹೇಳಿಕೆ!
‘ರಾಬರ್ಟ್’ ಚಿತ್ರದಲ್ಲಿ ವಿನೋದ್ ಪ್ರಭಾಕರ್ಗೆ ಸೋನಲ್ ಜೋಡಿಯಾಗಿ ಕಾಣಿಸಿಕೊಂಡರು. ಅಂದಹಾಗೆಯೇ ಈ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದರು. ‘ರಾಬರ್ಟ್’ ಚಿತ್ರದಿಂದಲೇ ತರುಣ್ ಮತ್ತು ಸೋನಲ್ ನಡುವೆ ಆತ್ಮೀಯತೆ ಹೆಚ್ಚಾಗಿ ಕೊನೆಗೆ ಪ್ರೀತಿ ಹುಟ್ಟಿಕೊಂಡಿತು. ರಾಬರ್ಟ್ ಸಿನಿಮಾ ತರುಣ್ ಸುಧೀರ್ ಹಾಗೂ ಸೋನಲ್ಗೆ ಬ್ರೇಕ್ ಕೊಟ್ಟ ಚಿತ್ರ. ಈ ಸಿನಿಮಾದಲ್ಲಿ ನಟಿಸಿದ ಬಳಿಕ ದರ್ಶನ್ ಬಳಗದಲ್ಲಿ ಸೋನಲ್ ಹೆಚ್ಚಾಗಿ ಕಾಣಿಸಿಕೊಂಡರು. ‘ರಾಬರ್ಟ್’ ನಂತರ ‘ಗರಡಿ’ ಚಿತ್ರದಲ್ಲಿ ಸೋನಲ್ ನಾಯಕಿಯಾದರು. ದರ್ಶನ್ ಆಪ್ತ ಯಶಸ್ ಸೂರ್ಯ ‘ಗರಡಿ’ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದರು. ದರ್ಶನ್ ಆಪ್ತರಾಗಿರುವ ಬಿಸಿ ಪಾಟೀಲ್ ಈ ಚಿತ್ರವನ್ನು ನಿರ್ದೇಶಿಸಿದ್ದರು. ಸದ್ಯ ಸೋನಲ್ ನಟನೆಯ ಎರಡು ಚಿತ್ರಗಳು ರಿಲೀಸ್ ಆಗಬೇಕಿದೆ. ಉಪೇಂದ್ರ ನಟನೆಯ ‘ಬುದ್ದಿವಂತ 2’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ‘ಮಾರ್ಗರೆಟ್ ಲವ್ ಆಫ್ ರಾಮಾಚಾರಿ’ ಚಿತ್ರದಲ್ಲೂ ಸೋನಲ್ ಅಭಿನಯಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ