ಬಿಸಿಸಿಐ ಮಹತ್ವದ ನಿರ್ಧಾರ; ಭಾರತ 3ನೇ ಟೆಸ್ಟ್​​ ಸೋತರೆ ರೋಹಿತ್​​ಗೆ ಕ್ಯಾಪ್ಟನ್ಸಿಯಿಂದ ಕೊಕ್​​

author-image
Ganesh Nachikethu
Updated On
ಬಿಸಿಸಿಐ ಮಹತ್ವದ ನಿರ್ಧಾರ; ಭಾರತ 3ನೇ ಟೆಸ್ಟ್​​ ಸೋತರೆ ರೋಹಿತ್​​ಗೆ ಕ್ಯಾಪ್ಟನ್ಸಿಯಿಂದ ಕೊಕ್​​
Advertisment
  • ಬಹುನಿರೀಕ್ಷಿತ 2025ರ ಬಾರ್ಡರ್-ಗವಾಸ್ಕರ್ ಟ್ರೋಫಿ..!
  • 3ನೇ ಟೆಸ್ಟ್​ ಪಂದ್ಯದ ಸೋಲಿನ ಹೊಸ್ತಿಲಲ್ಲಿ ಟೀಮ್​ ಇಂಡಿಯಾ
  • ಪಂದ್ಯದ ಬಳಿಕ ಕ್ಯಾಪ್ಟನ್ಸಿಯಿಂದ ರೋಹಿತ್​ ಶರ್ಮಾಗೆ ಗೇಟ್​ಪಾಸ್​​?

ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮುನ್ನ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್​​ ವಿರುದ್ಧ ಟೀಮ್​ ಇಂಡಿಯಾ ಹೀನಾಯ ಸೋಲು ಕಂಡಿತ್ತು. 20 ವರ್ಷಗಳ ನಂತರ ತವರಿನಲ್ಲಿ ಟೀಮ್​ ಇಂಡಿಯಾ ನ್ಯೂಜಿಲೆಂಡ್​ ವಿರುದ್ಧ 3-0 ಅಂತರದಿಂದ ಟೆಸ್ಟ್​ ಸೀರೀಸ್​ನಲ್ಲಿ ವೈಟ್​ ವಾಶ್​ ಆಗಿತ್ತು.

ಇನ್ನು, ಈ ಸೋಲಿನೊಂದಿಗೆ ಟೀಮ್​ ಇಂಡಿಯಾದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​​ ಫೈನಲ್ ಹಾದಿ ಮತ್ತಷ್ಟು ಕಠಿಣಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ 4 ಪಂದ್ಯ ಗೆಲ್ಲಲೇಬೇಕಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಾಲ್ಕು ಗೆದ್ದರಷ್ಟೇ ಫೈನಲ್​ಗೆ ಸುಗಮವಾಗಿ ಅರ್ಹತೆ ಪಡೆಯಲ್ಲಿದೆ. ಇಲ್ಲದಿದ್ದರೆ, ಮೂರನೇ ಬಾರಿಗೆ ಫೈನಲ್ ಆಡುವ ಟೀಮ್​ ಇಂಡಿಯಾ ಕನಸು ಭಗ್ನಗೊಳ್ಳಲಿದೆ.

ರೋಹಿತ್​​ ನಾಯಕತ್ವದ ಬಗ್ಗೆ ಪ್ರಶ್ನೆ

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡವನ್ನು ಜಸ್‌ಪ್ರೀತ್ ಬುಮ್ರಾ ಲೀಡ್​ ಮಾಡಿದ್ರು. ಜಸ್‌ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಟೀಮ್​ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿ ದಾಖಲೆ ಬರೆದಿತ್ತು. 2ನೇ ಟೆಸ್ಟ್​​ ಪಂದ್ಯದಲ್ಲಿ ಕ್ಯಾಪ್ಟನ್​​ ರೋಹಿತ್​​ ನೇತೃತ್ವದಲ್ಲಿ ಟೀಮ್​ ಇಂಡಿಯಾ ಸೋತಿದೆ. ಇಷ್ಟೇ ಅಲ್ಲ 3ನೇ ಟೆಸ್ಟ್​ ಪಂದ್ಯದಲ್ಲೂ ಟೀಮ್​ ಇಂಡಿಯಾಗೆ ಭಾರೀ ಹಿನ್ನಡೆ ಆಗಿದೆ. ಹಾಗಾಗಿ ರೋಹಿತ್ ಶರ್ಮಾ ಕ್ಯಾಪ್ಟನ್ಸಿ ಮೇಲೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ.

ನಾಯಕತ್ವದಿಂದ ಕೆಳಗಿಳಿಸುವಂತೆ ಆಗ್ರಹ

ಆಸ್ಟ್ರೇಲಿಯಾ ವಿರುದ್ಧದ 2ನೇ ಪಂದ್ಯದಲ್ಲಿ ಕ್ಯಾಪ್ಟನ್​ ರೋಹಿತ್​ ಶರ್ಮಾ ಬ್ಯಾಟ್​​ ಸಾಕಷ್ಟು ಮೌನವಾಗಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ 3 ರನ್​ ಮತ್ತು 2ನೇ ಇನ್ನಿಂಗ್ಸ್​ನಲ್ಲಿ 6 ರನ್​​​ ಮಾತ್ರ ಕಲೆ ಹಾಕಿದ್ರು. ಹಾಗೆಯೇ 3ನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಕೇವಲ 10 ರನ್​ಗಳಿಗೆ ವಿಕೆಟ್​ ಒಪ್ಪಿಸಿದ್ರು. ಹೀಗಾಗಿ ರೋಹಿತ್ ಶರ್ಮಾ​ರನ್ನು ಟೆಸ್ಟ್​ ನಾಯಕತ್ವದಿಂದ ಕೆಳಗಿಳಿಸಬೇಕು ಎಂಬ ಕೂಗು ಜೋರಾಗಿದೆ.

ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಸಾಧನೆ ವಿಶೇಷವೇನಿಲ್ಲ. ಕಳೆದ 12 ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಕೇವಲ 13ರ ಸರಾಸರಿಯಲ್ಲಿ 152 ರನ್ ಗಳಿಸಿದ್ದಾರೆ. ಇದರ ಜೊತೆಗೆ ಈ ಬಾರಿ ಟೀಮ್​ ಇಂಡಿಯಾ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​​ ಫೈನಲ್ ತಲುಪುವುದು ಕಷ್ಟಕರವಾಗಿದೆ. ಈ ಸರಣಿ ಸೋತಲ್ಲಿ ರೋಹಿತ್​ ಅವರಿಗೆ ಕ್ಯಾಪ್ಟನ್ಸಿ ಸ್ಥಾನದಿಂದ ಕೊಕ್​ ನೀಡಬೇಕು ಎನ್ನುವ ಮಾತುಗಳು ಕೇಳಿಬಂದಿವೆ. ಬಿಸಿಸಿಐ ಈ ವಿಚಾರದಲ್ಲಿ ಯಾವುದೇ ಅಚ್ಚರಿ ನಿರ್ಧಾರ ಕೈಗೊಳ್ಳಬಹುದು.

ಇದನ್ನೂ ಓದಿ:ಆರ್​​ಸಿಬಿ ತಂಡದಿಂದ ಮಹತ್ವದ ನಿರ್ಧಾರ; ಕನ್ನಡಿಗ ದೇವದತ್​ ಪಡಿಕ್ಕಲ್​ಗೆ ಬಿಗ್​ ಶಾಕ್​​

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment