/newsfirstlive-kannada/media/post_attachments/wp-content/uploads/2025/02/Rohit-Sharma_Tears.jpg)
ಕಟಕ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಬ್ಯಾಕ್ ಟು ಬ್ಯಾಕ್ 2 ಪಂದ್ಯ ಗೆಲ್ಲೋ ಮೂಲಕ ಏಕದಿನ ಸರಣಿಯನ್ನು ಗೆದ್ದುಕೊಂಡಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಟೀಮ್ ಇಂಡಿಯಾದ ಆಲ್ರೌಂಡರ್ ಪ್ರದರ್ಶನವೂ ಅಭಿಮಾನಿಗಳಲ್ಲಿ ಭಾರೀ ಸಂತಸ ತಂದಿದೆ. ಅದರಲ್ಲೂ ತಂಡದ ಬ್ಯಾಟಿಂಗ್ ವಿಭಾಗ ಬಲಿಷ್ಠ ಆಗಿರುವುದು ಬಿಸಿಸಿಐಗೆ ನಿರಾಳ ಮೂಡಿಸಿದೆ.
ರೋಹಿತ್ ಶರ್ಮಾ ಸ್ಫೋಟಕ ಶತಕ
ಇನ್ನೇನು ಕೆಲವೇ ದಿನಗಳಲ್ಲಿ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಶುರುವಾಗಲಿದೆ. ಈ ಹೊತ್ತಲ್ಲೇ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಫಾರ್ಮ್ಗೆ ಬಂದಿದ್ದಾರೆ. ರೋಹಿತ್ ಶರ್ಮಾ ತಮ್ಮ ಅಮೋಘ ಬ್ಯಾಟಿಂಗ್ನಿಂದ 90 ಎಸೆತಗಳಲ್ಲಿ 12 ಬೌಂಡರಿ, 7 ಸಿಕ್ಸರ್ ಸಹಾಯದಿಂದ 119 ರನ್ ಚಚ್ಚಿದ್ರು. ಇದು ಇವರ ವೃತ್ತಿ ಜೀವನದ 32ನೇ ಶತಕ ಆಗಿದ್ದು, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.
ಕಣ್ಣೀರಿಟ್ಟ ರೋಹಿತ್ ಏನಂದ್ರು?
ಪಂದ್ಯದ ಬಳಿಕ ಮಾತಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ, ಇಷ್ಟು ದಿನ ನಾನು ಇದರ ಬಗ್ಗೆಯೇ ಮಾತನಾಡುತ್ತಿದ್ದೆ. ಒಬ್ಬ ಕ್ರಿಕೆಟಿಗ ಹಲವು ವರ್ಷಗಳ ಕಾಲ ಕ್ರಿಕೆಟ್ ಆಡಿದ್ದಾನೆ. ಹತ್ತಾರು ಸಾವಿರ ರನ್ ಗಳಿಸಿದ್ದಾನೆ ಎಂದರೆ ಅವನಲ್ಲಿ ಏನೋ ಇದೆ ಎಂದರ್ಥ ಎಂದರು.
ನಾನು ಆಟವನ್ನು ಸಮಯದಿಂದ ಆಡುತ್ತಿದ್ದೇನೆ. ನನ್ನ ರೋಲ್ ಬಗ್ಗೆ ನನಗೆ ಗೊತ್ತಿದೆ. ನನ್ನ ಕೆಲಸವನ್ನು ನಾನು ಮಾಡಿದ್ದೇನೆ. ಈ ರೀತಿ ಬ್ಯಾಟಿಂಗ್ ಮಾಡಲು ಯಾವಾಗಲೂ ಪ್ರಯತ್ನಿಸುತ್ತೇನೆ. ಒಂದು ಅಥವಾ ಎರಡು ಇನ್ನಿಂಗ್ಸ್ಗಳು ನನ್ನ ಸಾಮರ್ಥ್ಯ ತೋರಿಸಲ್ಲ ಎಂದು ಗಳಗಳನೇ ಕಣ್ಣೀರಿಟ್ಟರು.
ಇದನ್ನೂ ಓದಿ:ಟೀಮ್ ಇಂಡಿಯಾ ಗೆಲುವಿಗೆ ಕಾರಣ ಯಾರು? ಸ್ಫೋಟಕ ಸತ್ಯ ಬಿಚ್ಚಿಟ್ಟ ಕ್ಯಾಪ್ಟನ್ ರೋಹಿತ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ