ಟೀಮ್​ ಇಂಡಿಯಾದಲ್ಲಿ ಭಾರೀ ಬದಲಾವಣೆ; KL ರಾಹುಲ್​ಗೆ ತನ್ನ ಸ್ಥಾನವನ್ನೇ ಬಿಟ್ಟುಕೊಟ್ಟ ರೋಹಿತ್​​

author-image
Ganesh Nachikethu
Updated On
‘ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ರು’- ನಿವೃತ್ತಿ ಸುದ್ದಿ ಬೆನ್ನಲ್ಲೇ ಅಸಲಿ ಸತ್ಯ ಬಿಚ್ಚಿಟ್ಟ KL ರಾಹುಲ್​​
Advertisment
  • ಟೀಮ್​ ಇಂಡಿಯಾ, ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್​​ ಪಂದ್ಯ!
  • 2ನೇ ಟೆಸ್ಟ್​ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ ಭಾರೀ ಬದಲಾವಣೆ
  • ಕನ್ನಡಿಗ ಕೆ.ಎಲ್​ ರಾಹುಲ್​ ತನ್ನ ಸ್ಥಾನವನ್ನೇ ಬಿಟ್ಟುಕೊಟ್ಟ ರೋಹಿತ್

ಪರ್ತ್​​​ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆಸ್ಟೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಡಿಸೆಂಬರ್​​ 6ನೇ ತಾರೀಕಿನಿಂದ ಟೀಮ್​ ಇಂಡಿಯಾ, ಆಸ್ಟ್ರೇಲಿಯಾ ಮಧ್ಯೆ 2ನೇ ಟೆಸ್ಟ್​​ ಪಂದ್ಯ ನಡೆಯಲಿದೆ.

2ನೇ ಪಂದ್ಯಕ್ಕೆ ರೋಹಿತ್ ಶರ್ಮಾ ಕ್ಯಾಪ್ಟನ್​​

ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯಕ್ಕೆ ಟೀಮ್​ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಭಾರೀ ಬದಲಾವಣೆ ಆಗಿತ್ತು. ಇದಕ್ಕೆ ಕಾರಣ ಕ್ಯಾಪ್ಟನ್​ ರೋಹಿತ್​ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿದಿದ್ದು. ರೋಹಿತ್​​ ಮತ್ತು ರಿತಿಕಾ ಜೋಡಿ 2ನೇ ಮಗುವಿಗೆ ಜನ್ಮ ನೀಡಿದ ಕಾರಣ ಇವರು ಮೊದಲ ಟೆಸ್ಟ್​ಗೆ ಲಭ್ಯರಾಗಿಲ್ಲ. ಈಗ 2ನೇ ಟೆಸ್ಟ್​ ಪಂದ್ಯಕ್ಕೆ ಮುನ್ನ ರೋಹಿತ್​ ಶರ್ಮಾ ಟೀಮ್​ ಇಂಡಿಯಾ ಸೇರಿಕೊಂಡಿದ್ದಾರೆ. ಹೀಗಾಗಿ ಇವರೇ ಟೀಮ್​ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

ರೋಹಿತ್​​ ಅಲಭ್ಯತೆಯಲ್ಲಿ ಟೀಮ್​ ಇಂಡಿಯಾವನ್ನು ಬುಮ್ರಾ ​​ಮುನ್ನಡೆಸುತ್ತಿದ್ದರು. ಇವರ ನಾಯಕತ್ವದಲ್ಲಿ ಟೀಮ್​ ಇಂಡಿಯಾ ಐತಿಹಾಸಿಕ ಜಯ ದಾಖಲಿಸಿತ್ತು. ಸದ್ಯ ಜಸ್​ಪ್ರಿತ್​ ಬುಮ್ರಾ ಭಾರತ ಟೆಸ್ಟ್​ ತಂಡದ ಉಪನಾಯಕ. ರೋಹಿತ್​​ ಇಲ್ಲದಿದ್ದಾಗ ಇವರೇ ತಂಡವನ್ನು ಲೀಡ್​ ಮಾಡಲಿದ್ದಾರೆ ಎಂದು ಟೀಮ್​ ಇಂಡಿಯಾ ಮ್ಯಾನೇಜ್ಮೆಂಟ್​ ಘೋಷಿಸಿತ್ತು. 2ನೇ ಟೆಸ್ಟ್​ ಪಂದ್ಯಕ್ಕೆ ರೋಹಿತ್​ ಬಂದಿರೋ ಕಾರಣ ಬುಮ್ರಾ ಅವರಿಗೆ ಕ್ಯಾಪ್ಟನ್ಸಿಯಿಂದ ಕೊಕ್​ ನೀಡಲಾಗಿದೆ.

ಕೆ.ಎಲ್​​ ರಾಹುಲ್​ಗೆ ತನ್ನ ಸ್ಥಾನ ಬಿಟ್ಟುಕೊಟ್ಟ ರೋಹಿತ್​​

ಮೊದಲ ಟೆಸ್ಟ್​ ಪಂದ್ಯದಲ್ಲಿ ಟೀಮ್​ ಇಂಡಿಯಾ ಗೆಲುವು ಸಾಧಿಸಿದೆ. ಮೊದಲ ಇನ್ನಿಂಗ್ಸ್​​ನಲ್ಲಿ 24 ರನ್​​ ಸಿಡಿಸಿದ್ದ ರಾಹುಲ್​​ 2ನೇ ಇನ್ನಿಂಗ್ಸ್​ನಲ್ಲಿ 77 ರನ್​ ಚಚ್ಚಿ ತಂಡಕ್ಕೆ ನೆರವಾದ್ರು. ಈ ಮೂಲಕ ಟೀಮ್​ ಇಂಡಿಯಾ ಗೆಲುವಲ್ಲಿ ಪ್ರಮುಖ ಪಾತ್ರವಹಿಸಿದ್ರು. ಈಗ ಕೆ.ಎಲ್​ ರಾಹುಲ್​ಗೆ ಮತ್ತೆ ಸುವರ್ಣಾವಕಾಶ ಸಿಕ್ಕಿದೆ. ರೋಹಿತ್​ ಶರ್ಮಾ ತನ್ನ ಸ್ಥಾನ ಬಿಟ್ಟುಕೊಟ್ಟಿದ್ದು, ಟೀಮ್​ ಇಂಡಿಯಾ ಪರ 2ನೇ ಟೆಸ್ಟ್​ ಪಂದ್ಯದಲ್ಲೂ ಕೆ.ಎಲ್​ ರಾಹುಲ್​​ ಓಪನಿಂಗ್​ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಯಶಸ್ವಿ ಜೈಸ್ವಾಲ್​​, ರಾಹುಲ್​ ಓಪನಿಂಗ್​​ ಪೇರ್​​​ ವರ್ಕೌಟ್​ ಆಗಿದ್ದು, ರೋಹಿತ್​ ಶರ್ಮಾ ಮಿಡಲ್​ ಆರ್ಡರ್​ನಲ್ಲಿ ಬ್ಯಾಟಿಂಗ್​ ಮಾಡುವ ಸಾಧ್ಯತೆ ಇದೆ.

ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತ ಟ್ರೋಪಿ ಗೆದ್ದಿತ್ತು. 2016 ರಿಂದಲೂ ಟೀಮ್​ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲ್ಲುತ್ತಲೇ ಬಂದಿದೆ. ಟೀಮ್​ ಇಂಡಿಯಾ ಈಗಿರೋ ಪರಿಸ್ಥಿತಿ ನೋಡಿದ್ರೆ ಗೆಲ್ಲೋದು ಕಷ್ಟವಾಗಿದೆ. ಎಷ್ಟೇ ಕಷ್ಟ ಆದ್ರೂ ಪರ್ವಾಗಿಲ್ಲ ಆಸೀಸ್ ಸರಣಿ ಗೆಲ್ಲಲೇಬೇಕು ಎಂದು ಟೀಮ್​ ಇಂಡಿಯಾ ಸಜ್ಜಾಗಿದೆ.

ಇದನ್ನೂ ಓದಿ:ಕೆ.ಎಲ್​ ರಾಹುಲ್​ಗೆ ಸುವರ್ಣಾವಕಾಶ; ಟೀಮ್​ ಇಂಡಿಯಾದಲ್ಲಿ ಮಹತ್ವದ ಜವಾಬ್ದಾರಿ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment