/newsfirstlive-kannada/media/post_attachments/wp-content/uploads/2024/11/KL-Rahul_Gambhir_1.jpg)
ಇತ್ತೀಚೆಗೆ ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಗೆದ್ದು ಬೀಗಿದೆ. ಅದ್ಭುತ ಪ್ರದರ್ಶನ ನೀಡಿರೋ ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿ ಟೀಮ್ ಇಂಡಿಯಾ 249 ರನ್ಗಳ ಗುರಿ ನೀಡಿತ್ತು. 249 ರನ್ಗಳ ಗುರಿ ಬೆನ್ನಟ್ಟಿದ ಭಾರತ ತಂಡ 6 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.
ಶ್ರೇಯಸ್ ಅಯ್ಯರ್, ಗಿಲ್ ಅಬ್ಬರ
ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಅಕ್ಸರ್ ಪಟೇಲ್ ಅಬ್ಬರಿಸಿದರು. ಮೂವರು ಅರ್ಧಶತಕ ಸಿಡಿಸಿ ಮಿಂಚಿದರು. ಹೀಗಾಗಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿದೆ.
ಕೈ ಕೊಟ್ಟ ಕೆ.ಎಲ್ ರಾಹುಲ್, ರೋಹಿತ್
ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿದರು. ಹಿಟ್ಮ್ಯಾನ್ (2) ತಮ್ಮ ಕಳಪೆ ಪ್ರದರ್ಶನವನ್ನು ಮುಂದುವರಿಸಿದರು. 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆ.ಎಲ್ ರಾಹುಲ್ ಅವರು ಕೇವಲ 2 ರನ್ಗೆ ವಿಕೆಟ್ ಒಪ್ಪಿಸಿದ್ರು.
ಕೆ.ಎಲ್ ರಾಹುಲ್ಗೆ ಮತ್ತೆ ಮೋಸ
ಭಾರತ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್ ರಾಹುಲ್. ಇವರು 5ನೇ ಕ್ರಮಾಂಕದಲ್ಲಿ ಬೆಸ್ಟ್ ಬ್ಯಾಟರ್. ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಇವರ ಬದಲಿಗೆ ಅಕ್ಷರ್ ಪಟೇಲ್ ಅವರನ್ನು ಕಣಕ್ಕಿಳಿಸಿದ್ರು. ಇದರ ಪರಿಣಾಮ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಕೆ.ಎಲ್ ರಾಹುಲ್ ಮೇಲೆ ಒತ್ತಡ ಇತ್ತು. ಹಾಗಾಗಿ ಇವರು ಕ್ರೀಸ್ನಲ್ಲಿ ನಿಂತು ಸೆಟ್ ಆಗೋ ಮುನ್ನವೇ ಔಟ್ ಆದ್ರು. ಹೀಗಾಗಿ ಇವರನ್ನು ಬೇರೆ ಕ್ರಮಾಂಕದಲ್ಲಿ ಕಣಕ್ಕಿಳಿಸಿ ಕೆ.ಎಲ್ ರಾಹುಲ್ ಬಾಳಲ್ಲಿ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಚೆಲ್ಲಾಟ ಆಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಇದನ್ನೂ ಓದಿ:2ನೇ ಏಕದಿನ ಪಂದ್ಯಕ್ಕೆ ಮುನ್ನ ಭಾರತಕ್ಕೆ ಭರ್ಜರಿ ಗುಡ್ನ್ಯೂಸ್; ಸ್ಟಾರ್ ಪ್ಲೇಯರ್ ಎಂಟ್ರಿಯಿಂದ ಆನೆಬಲ
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ