ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ ರೋಹಿತ್ ಶರ್ಮಾ
ಭಾರತದ ಟಿ20 ಕ್ಯಾಪ್ಟನ್ಸಿಗಾಗಿ ಹಾರ್ದಿಕ್, ಸೂರ್ಯ ಮಧ್ಯೆ ಪೈಪೋಟಿ!
ಟಿ20 ಕ್ಯಾಪ್ಟನ್ ಬಗ್ಗೆ ಕೋಚ್ ಗೌತಮ್ ಗಂಭೀರ್ ಹೇಳಿದ್ದೇನು ಗೊತ್ತಾ?
2024ರ ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಸದ್ಯ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಟಿ20 ಸರಣಿ ಆಡಲಿದ್ದು, ಹೊಸ ನಾಯಕನ ಹುಡುಕಾಟದಲ್ಲಿದೆ.
ಜೂನ್ 27ನೇ ತಾರೀಕಿನಿಂದ ನಡೆಯಲಿರೋ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಕ್ಯಾಪ್ಟನ್ ಆಗಲು ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಮಧ್ಯೆ ನೇರ ಪೈಪೋಟಿ ಇದೆ. ಈ ಮಧ್ಯೆ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಕ್ಯಾಪ್ಟನ್ ಯಾರು ಆಗಬೇಕು? ಎಂಬ ಬಗ್ಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಸೆಲೆಕ್ಷನ್ ಕಮಿಟಿ ಜೊತೆ ಚರ್ಚಿಸಿದ್ದಾರೆ. ಈ ಬಗ್ಗೆ ಬಿಸಿಸಿಐ ಅಧಿಕಾರಿಗಳು ಮತ್ತು ಆಯ್ಕೆ ಸಮಿತಿ ಜೊತೆ ಚರ್ಚಿಸಿರೋ ಗಂಭೀರ್, ಇವರೇ ನಾಯಕ ಆಗಬೇಕು ಎಂದು ನಾನು ಯಾರ ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದಾರೆ.
ಟಿ20 ಕ್ಯಾಪ್ಟನ್ ಬಗ್ಗೆ ಗಂಭೀರ್ ಹೇಳಿದ್ದೇನು?
ಈ ಬಗ್ಗೆ ಮಾತಾಡಿರೋ ಬಿಸಿಸಿಐ ಅಧಿಕಾರಿ ಒಬ್ಬರು, ಗೌತಮ್ ಗಂಭೀರ್ ನೇರವಾಗಿ ಸೂರ್ಯಕುಮಾರ್ ಯಾದವ್ ಹೆಸರು ಹೇಳಿಲ್ಲ. ಬದಲಿಗೆ ಕೆಲಸದ ಹೊರೆ ಅಡ್ಡಿಯಾಗದ ನಾಯಕನ ಜೊತೆ ಕೆಲಸ ಮಾಡುವೆ ಎಂದು ಸ್ಪಷ್ಟಪಡಿಸಿದ್ದಾರೆ. ಈಗ ಟೀಮ್ ಇಂಡಿಯಾ ಕ್ಯಾಪ್ಟನ್ ಯಾರು ಎಂಬುದು ಅಜಿತ್ ಅಗರ್ಕರ್ ಕೈಯಲ್ಲಿದೆ ಎಂದರು.
ಇನ್ನು, ರೋಹಿತ್ ಶರ್ಮಾ ಉತ್ತರಾಧಿಕಾರಿಯಾಗಿ ಉಪನಾಯಕ ಹಾರ್ದಿಕ್ ಪಾಂಡ್ಯ ನೆಚ್ಚಿನ ಆಟಗಾರ ಆಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ.
ಇದನ್ನೂ ಓದಿ: ಶ್ರೀಲಂಕಾ ಪ್ರವಾಸ.. ಟೀಮ್ ಇಂಡಿಯಾಗೆ ಗುಡ್ನ್ಯೂಸ್ ಕೊಟ್ಟ ವಿರಾಟ್ ಕೊಹ್ಲಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ ರೋಹಿತ್ ಶರ್ಮಾ
ಭಾರತದ ಟಿ20 ಕ್ಯಾಪ್ಟನ್ಸಿಗಾಗಿ ಹಾರ್ದಿಕ್, ಸೂರ್ಯ ಮಧ್ಯೆ ಪೈಪೋಟಿ!
ಟಿ20 ಕ್ಯಾಪ್ಟನ್ ಬಗ್ಗೆ ಕೋಚ್ ಗೌತಮ್ ಗಂಭೀರ್ ಹೇಳಿದ್ದೇನು ಗೊತ್ತಾ?
2024ರ ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಸದ್ಯ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಟಿ20 ಸರಣಿ ಆಡಲಿದ್ದು, ಹೊಸ ನಾಯಕನ ಹುಡುಕಾಟದಲ್ಲಿದೆ.
ಜೂನ್ 27ನೇ ತಾರೀಕಿನಿಂದ ನಡೆಯಲಿರೋ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಕ್ಯಾಪ್ಟನ್ ಆಗಲು ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಮಧ್ಯೆ ನೇರ ಪೈಪೋಟಿ ಇದೆ. ಈ ಮಧ್ಯೆ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಕ್ಯಾಪ್ಟನ್ ಯಾರು ಆಗಬೇಕು? ಎಂಬ ಬಗ್ಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಸೆಲೆಕ್ಷನ್ ಕಮಿಟಿ ಜೊತೆ ಚರ್ಚಿಸಿದ್ದಾರೆ. ಈ ಬಗ್ಗೆ ಬಿಸಿಸಿಐ ಅಧಿಕಾರಿಗಳು ಮತ್ತು ಆಯ್ಕೆ ಸಮಿತಿ ಜೊತೆ ಚರ್ಚಿಸಿರೋ ಗಂಭೀರ್, ಇವರೇ ನಾಯಕ ಆಗಬೇಕು ಎಂದು ನಾನು ಯಾರ ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದಾರೆ.
ಟಿ20 ಕ್ಯಾಪ್ಟನ್ ಬಗ್ಗೆ ಗಂಭೀರ್ ಹೇಳಿದ್ದೇನು?
ಈ ಬಗ್ಗೆ ಮಾತಾಡಿರೋ ಬಿಸಿಸಿಐ ಅಧಿಕಾರಿ ಒಬ್ಬರು, ಗೌತಮ್ ಗಂಭೀರ್ ನೇರವಾಗಿ ಸೂರ್ಯಕುಮಾರ್ ಯಾದವ್ ಹೆಸರು ಹೇಳಿಲ್ಲ. ಬದಲಿಗೆ ಕೆಲಸದ ಹೊರೆ ಅಡ್ಡಿಯಾಗದ ನಾಯಕನ ಜೊತೆ ಕೆಲಸ ಮಾಡುವೆ ಎಂದು ಸ್ಪಷ್ಟಪಡಿಸಿದ್ದಾರೆ. ಈಗ ಟೀಮ್ ಇಂಡಿಯಾ ಕ್ಯಾಪ್ಟನ್ ಯಾರು ಎಂಬುದು ಅಜಿತ್ ಅಗರ್ಕರ್ ಕೈಯಲ್ಲಿದೆ ಎಂದರು.
ಇನ್ನು, ರೋಹಿತ್ ಶರ್ಮಾ ಉತ್ತರಾಧಿಕಾರಿಯಾಗಿ ಉಪನಾಯಕ ಹಾರ್ದಿಕ್ ಪಾಂಡ್ಯ ನೆಚ್ಚಿನ ಆಟಗಾರ ಆಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ.
ಇದನ್ನೂ ಓದಿ: ಶ್ರೀಲಂಕಾ ಪ್ರವಾಸ.. ಟೀಮ್ ಇಂಡಿಯಾಗೆ ಗುಡ್ನ್ಯೂಸ್ ಕೊಟ್ಟ ವಿರಾಟ್ ಕೊಹ್ಲಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ