/newsfirstlive-kannada/media/post_attachments/wp-content/uploads/2024/07/Rahul_Gambhir.jpg)
ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ20 ಸರಣಿ ಬೆನ್ನಲ್ಲೇ ಟೀಮ್ ಇಂಡಿಯಾ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಶ್ರೀಲಂಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿಗೆ ರೋಹಿತ್ ಶರ್ಮಾ ಅಲಭ್ಯರಾಗಿದ್ದು, ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್ ರಾಹುಲ್ ಕ್ಯಾಪ್ಟನ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು, ಜುಲೈ 27ನೇ ತಾರೀಕಿನಿಂದ ಶುರುವಾಗಲಿರೋ ಪ್ರವಾಸಕ್ಕೆ ಇನ್ನಷ್ಟೇ ತಂಡವನ್ನು ಪ್ರಕಟಿಸಬೇಕಿದೆ. ಈಗಾಗಲೇ ಟೀಮ್ ಇಂಡಿಯಾ ಹೊಸ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ರೆಸ್ಟ್ ನೀಡಿರೋ ಕಾರಣ ತಂಡದ ಆಯ್ಕೆಯಲ್ಲಿ ಹೆಚ್ಚು ಬದಲಾವಣೆ ಇರಲಿದೆ.
ಸದ್ಯದ ಮಾಹಿತಿ ಪ್ರಕಾರ ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಏಕದಿನ ಫಾರ್ಮೆಟ್ನಲ್ಲಿ ಟೀಮ್ ಇಂಡಿಯಾದ ಕ್ಯಾಪ್ಟನ್ ಕೆ.ಎಲ್ ರಾಹುಲ್ ಆಗಲಿದ್ದಾರೆ. ಹಾರ್ದಿಕ್, ರಾಹುಲ್ ಇಬ್ಬರು ಬಿಸಿಸಿಐ ಮೊದಲ ಆಯ್ಕೆಯಾಗಿದ್ದಾರೆ. ಇನ್ನೊಂದೆಡೆ ಉಪ ನಾಯಕ ಹಾರ್ದಿಕ್ ಪಾಂಡ್ಯ ಅವರೇ ಎರಡು ಫಾರ್ಮೇಟ್ಗಳಲ್ಲಿ ಕ್ಯಾಪ್ಟನ್ ಆಗಲಿ ಅನ್ನೋ ಚರ್ಚೆ ಕೂಡ ಇದೆ. ಹಾಗಾಗಿ ಈ ವಿಚಾರವಾಗಿ ಟೀಮ್ ಇಂಡಿಯಾದ ಹೊಸ ಕೋಚ್ ಗೌತಮ್ ಗಂಭೀರ್ ವೀಕೆಂಡ್ ಮೀಟಿಂಗ್ ಕರೆದಿದ್ದಾರೆ.
ಯಾರ ಪರ ಗಂಭೀರ್ ಒಲವು..!
ಕೆ.ಎಲ್ ರಾಹುಲ್ ಮತ್ತು ಗೌತಮ್ ಗಂಭೀರ್ ಮಧ್ಯೆ ಆರಂಭದಿಂದಲೂ ಒಳ್ಳೆ ಟೆಂಪೋ ಇದೆ. ಇಬ್ಬರು ಒಟ್ಟಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕೆಲಸ ಮಾಡಿದ್ದಾರೆ. ಗಂಭೀರ್ ಲಕ್ನೋ ತಂಡದ ಮೆಂಟರ್ ಆಗಿದ್ದಾಗ ಕ್ಯಾಪ್ಟನ್ ರಾಹುಲ್ ನೇತೃತ್ವದಲ್ಲಿ ತಂಡ ಸೆಮಿ ಫೈನಲ್ ಹೋಗಿತ್ತು. ರಾಹುಲ್ ಅವರೇ ಲಕ್ನೋ ತಂಡದ ಕ್ಯಾಪ್ಟನ್ ಆಗಲಿ ಎಂದು ಪಂಜಾಬ್ ತಂಡದಿಂದ ಕರೆದುಕೊಂಡು ಬಂದಿದ್ರು. ಹಾಗಾಗಿ ಗಂಭೀರ್ ಒಲವು ರಾಹುಲ್ ಪರವಾಗಿ ಇರುತ್ತದೆ ಎಂಬುದು ತಜ್ಞರ ಅಭಿಪ್ರಾಯ. ಹಾರ್ದಿಕ್ ಪಾಂಡ್ಯ ಈ ಹಿಂದೆ ಎಲ್ಲೂ ಗಂಭೀರ್ ಜೊತೆ ಕೆಲಸ ಮಾಡಿಲ್ಲ ಅನ್ನೋದು ಕೂಡ ವಾಸ್ತವ.
ಇದನ್ನೂ ಓದಿ:ಕ್ಯಾಪ್ಟನ್ ಆಗಲು ಹಾರ್ದಿಕ್, ರಾಹುಲ್ ಮಧ್ಯೆ ಫೈಟ್.. ಗಂಭೀರ್ ಬಂದ್ಮೇಲೆ ಎಲ್ಲಾ ಚೇಂಜ್!
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ