ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಟಿ20 ಪಂದ್ಯ
ಶ್ರೀಲಂಕಾ, ಟೀಮ್ ಇಂಡಿಯಾ ನಡುವೆ ನಡೆಯುತ್ತಿರೋ ಬಹುನಿರೀಕ್ಷಿತ ಟಿ20 ಮ್ಯಾಚ್!
ಟೀಮ್ ಇಂಡಿಯಾದ ಸ್ಟಾರ್ ಆಟಗಾರನಿಗೆ ಗುಡ್ನ್ಯೂಸ್ ಕೊಟ್ಟ ಕೋಚ್ ಗಂಭೀರ್
ಶ್ರೀಲಂಕಾ ವಿರುದ್ಧದ 3 ಟಿ20 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಇಂದು 2ನೇ ಟಿ20 ಪಂದ್ಯ ನಡೆಯುತ್ತಿದ್ದು, ಟೀಮ್ ಇಂಡಿಯಾ ವಿರುದ್ಧ ಹೇಗಾದ್ರೂ ಗೆಲ್ಲಲೇಬೇಕು ಎಂದು ಶ್ರೀಲಂಕಾ ಜಿದ್ದಿಗೆ ಬಿದ್ದಿದೆ.
ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶ್ರೀಲಂಕಾ, ಟೀಮ್ ಇಂಡಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಈಗ ಮಳೆ ನಿಂತಿದ್ದು, ಟಾಸ್ ಹಾಕಲಾಗಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಶ್ರೀಲಂಕಾ ಫೀಲ್ಡಿಂಗ್ ಮಾಡುತ್ತಿದೆ.
ಸಂಜು ಸ್ಯಾಮ್ಸನ್ಗೆ ಅವಕಾಶ!
ಇನ್ನು, ಶ್ರೀಲಂಕಾ ಮತ್ತು ಭಾರತ ತಂಡಗಳಲ್ಲಿ ತಲಾ ಒಂದು ಬದಲಾವಣೆ ಮಾಡಲಾಗಿದೆ. ಗಿಲ್ ಅವರಿಗೆ ಬ್ಯಾಕ್ ಬೋನ್ ಪೇನ್ ಇದ್ದು, ಇವರ ಬದಲಿಗೆ ಸಂಜು ಸ್ಯಾಮ್ಸನ್ಗೆ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ಸಿಕ್ಕಿದೆ. ದಿಲ್ಶಾನ್ ಮಧುಶನಕ ಬದಲಿಗೆ ರಮೇಶ್ ಮೆಂಡೀಸ್ಗೆ ತಂಡದಲ್ಲಿ ಅವಕಾಶ ಸಿಕ್ಕಿದೆ.
ಮೊದಲ ಟಿ20 ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಅವರಿಗೆ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ನೀಡಿರಲಿಲ್ಲ. ಇವರ ಬದಲಿಗೆ ರಿಷಬ್ ಪಂತ್ಗೆ ಅವಕಾಶ ನೀಡಿದ್ರು. ಪಂತ್ ತನಗೆ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಕೊನೆವರೆಗೂ ಕ್ರೀಸ್ನಲ್ಲಿ ನಿಂತು ಕಳಪೆ ಬ್ಯಾಟಿಂಗ್ ಮಾಡಿದ್ರು. ಆದ್ದರಿಂದ ಎಷ್ಟು ಸಲ ಸಂಜುಗೆ ಮೋಸ ಮಾಡ್ತೀರಾ? ಗಂಭೀರ್ ಮತ್ತು ಬಿಸಿಸಿಐಗೆ ನಾಚಿಕೆ ಆಗಬೇಕು ಎಂದು ಟ್ವೀಟ್ ಮಾಡಿ ಟೀಮ್ ಇಂಡಿಯಾ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ರು.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಟಿ20 ಪಂದ್ಯ
ಶ್ರೀಲಂಕಾ, ಟೀಮ್ ಇಂಡಿಯಾ ನಡುವೆ ನಡೆಯುತ್ತಿರೋ ಬಹುನಿರೀಕ್ಷಿತ ಟಿ20 ಮ್ಯಾಚ್!
ಟೀಮ್ ಇಂಡಿಯಾದ ಸ್ಟಾರ್ ಆಟಗಾರನಿಗೆ ಗುಡ್ನ್ಯೂಸ್ ಕೊಟ್ಟ ಕೋಚ್ ಗಂಭೀರ್
ಶ್ರೀಲಂಕಾ ವಿರುದ್ಧದ 3 ಟಿ20 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಇಂದು 2ನೇ ಟಿ20 ಪಂದ್ಯ ನಡೆಯುತ್ತಿದ್ದು, ಟೀಮ್ ಇಂಡಿಯಾ ವಿರುದ್ಧ ಹೇಗಾದ್ರೂ ಗೆಲ್ಲಲೇಬೇಕು ಎಂದು ಶ್ರೀಲಂಕಾ ಜಿದ್ದಿಗೆ ಬಿದ್ದಿದೆ.
ಪಲ್ಲೆಕೆಲೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಶ್ರೀಲಂಕಾ, ಟೀಮ್ ಇಂಡಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಈಗ ಮಳೆ ನಿಂತಿದ್ದು, ಟಾಸ್ ಹಾಕಲಾಗಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಶ್ರೀಲಂಕಾ ಫೀಲ್ಡಿಂಗ್ ಮಾಡುತ್ತಿದೆ.
ಸಂಜು ಸ್ಯಾಮ್ಸನ್ಗೆ ಅವಕಾಶ!
ಇನ್ನು, ಶ್ರೀಲಂಕಾ ಮತ್ತು ಭಾರತ ತಂಡಗಳಲ್ಲಿ ತಲಾ ಒಂದು ಬದಲಾವಣೆ ಮಾಡಲಾಗಿದೆ. ಗಿಲ್ ಅವರಿಗೆ ಬ್ಯಾಕ್ ಬೋನ್ ಪೇನ್ ಇದ್ದು, ಇವರ ಬದಲಿಗೆ ಸಂಜು ಸ್ಯಾಮ್ಸನ್ಗೆ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ಸಿಕ್ಕಿದೆ. ದಿಲ್ಶಾನ್ ಮಧುಶನಕ ಬದಲಿಗೆ ರಮೇಶ್ ಮೆಂಡೀಸ್ಗೆ ತಂಡದಲ್ಲಿ ಅವಕಾಶ ಸಿಕ್ಕಿದೆ.
ಮೊದಲ ಟಿ20 ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಅವರಿಗೆ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ನೀಡಿರಲಿಲ್ಲ. ಇವರ ಬದಲಿಗೆ ರಿಷಬ್ ಪಂತ್ಗೆ ಅವಕಾಶ ನೀಡಿದ್ರು. ಪಂತ್ ತನಗೆ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ. ಕೊನೆವರೆಗೂ ಕ್ರೀಸ್ನಲ್ಲಿ ನಿಂತು ಕಳಪೆ ಬ್ಯಾಟಿಂಗ್ ಮಾಡಿದ್ರು. ಆದ್ದರಿಂದ ಎಷ್ಟು ಸಲ ಸಂಜುಗೆ ಮೋಸ ಮಾಡ್ತೀರಾ? ಗಂಭೀರ್ ಮತ್ತು ಬಿಸಿಸಿಐಗೆ ನಾಚಿಕೆ ಆಗಬೇಕು ಎಂದು ಟ್ವೀಟ್ ಮಾಡಿ ಟೀಮ್ ಇಂಡಿಯಾ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ರು.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್