ಉಗ್ರರ ಪೈಶಾಚಿಕ ಕೃತ್ಯ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ.. ಗಾಬರಿಯಿಂದ ಠಾಣೆಗೆ ಬಂದ ಗಂಭೀರ್​..!

author-image
Veena Gangani
Updated On
ಗಂಭೀರ್​​ಗೆ ಪಟ್ಟದ ಪರೀಕ್ಷೆ.. ಪಾಸ್​ ಆಗಿಲ್ಲ ಅಂದ್ರೆ ನೋ ಎಕ್ಸ್​​ಕ್ಯೂಸ್..!
Advertisment
  • ಪಹಲ್ಗಾಮ್​​ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ಪೈಶಾಚಿಕ ಕೃತ್ಯ
  • ಗೌತಮ್ ಗಂಭೀರ್​​ಗೆ ಆತಂಕ ಸೃಷ್ಟಿಸಿದ ISIS ಉಗ್ರರು
  • ಗೌತಮ್ ಗಂಭೀರ್ ಟೀಂ ಇಂಡಿಯಾದ ಮುಖ್ಯ ಕೋಚ್

ಪೆಹಲ್ಗಾಮ್ ದಾಳಿ ಬೆನ್ನಲ್ಲೇ ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್​ ಘೋಷಣೆ ಮಾಡಲಾಗಿದೆ. ಈ ಆತಂಕದ ನಡುವೆಯೇ ಟೀಮ್ ಇಂಡಿಯಾದ ಹೆಡ್​ ಕೋಚ್ ಗೌತಮ್ ಗಂಭೀರ್​ಗೆ ಜೀವ ಬೆದರಿಕೆ ಬಂದಿದೆ.

ಇದನ್ನೂ ಓದಿ:ಪಾಕ್​ಗೆ ಹೋದವರು ಮೇ 1ರೊಳಗೆ ಬರ್ಬೇಕು; ಭಾರತದಲ್ಲಿರೋ ಪಾಕಿಸ್ತಾನಿಯರಿಗೆ ತೊಲಗಲು ಡೆಡ್​ಲೈನ್​..!

ಗೌತಮ್ ಗಂಭೀರ್ ಅವರಿಗೆ ಐಸಿಸ್ (Islamic State) ಸಂಘಟನೆಯಿಂದ ಕೊಲೆ ಬೆದರಿಕೆ ಬಂದಿದೆ. ಇ-ಮೇಲ್ ಸಂದೇಶದ ಮೂಲಕ ಜೀವ ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ. ಅಲ್ಲದೇ ತಮ್ಮ ಕುಟುಂಬದ ಭದ್ರತೆ ಕೈಗೊಳ್ಳುವಂತೆ ಪೊಲೀಸರಿಗೆ ಗೌತಮ್ ಗಂಭೀರ್ ಮನವಿ ಮಾಡಿಕೊಂಡಿದ್ದಾರೆ.

publive-image

ಮಾಹಿತಿಗಳ ಪ್ರಕಾರ, ಏಪ್ರಿಲ್ 22ರಂದು ಗೌತಮ್ ಗಂಭೀರ್‌ಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದೆ. Islamic State ಕಾಶ್ಮೀರ ಘಟಕ ಎಂಬ ಹೆಸರಿನಡಿ ಮೇಲ್ ಬಂದಿವೆ.  ಒಂದು ಇ ಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿದೆ. ಎರಡೂ ಸಂದೇಶಗಳಲ್ಲೂ ಮೂರು ಪದ ಬಳಸಲಾಗಿದೆ. ಐ ಕಿಲ್ ಯು ಅಂತಾ ಮೇಲ್​ನಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment