/newsfirstlive-kannada/media/post_attachments/wp-content/uploads/2024/08/KL-RAHUL-1.jpg)
ಸದ್ಯ ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ಮಧ್ಯೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈಗಾಗಲೇ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ.
ಇತ್ತೀಚೆಗೆ ಕಟಕ್ನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿತ್ತು. ಬ್ಯಾಕ್ ಟು ಬ್ಯಾಕ್ 2 ಪಂದ್ಯ ಗೆಲ್ಲೋ ಮೂಲಕ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ನಾಳೆ ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ ಕೊನೆಯ ಏಕದಿನ ಪಂದ್ಯ ನಡೆಯಲಿದ್ದು, ಬಿಗ್ ಅಪ್ಡೇಟ್ ಒಂದಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಟೀಮ್ ಇಂಡಿಯಾದ ಆಲ್ರೌಂಡರ್ ಪ್ರದರ್ಶನವೂ ಅಭಿಮಾನಿಗಳಲ್ಲಿ ಭಾರೀ ಸಂತಸ ತಂದಿದೆ. ಅದರಲ್ಲೂ ತಂಡದ ಬ್ಯಾಟಿಂಗ್ ವಿಭಾಗ ಬಲಿಷ್ಠ ಆಗಿರುವುದು ಬಿಸಿಸಿಐಗೆ ನಿರಾಳ ಮೂಡಿಸಿದೆ. ಇದರ ಮಧ್ಯೆ ಕೆಎಲ್ ರಾಹುಲ್ ಕಳಪೆ ಫಾರ್ಮ್ ತಂಡಕ್ಕೆ ತಲೆನೋವು ತಂದಿರುವುದು ನಿಜ. ಹಾಗಾಗಿ ಇವರಿಗೆ 3ನೇ ಪಂದ್ಯದಿಂದ ಗೇಟ್ಪಾಸ್ ಸಿಗೋ ಸಾಧ್ಯತೆ ಇದೆ.
ಕೆ.ಎಲ್ ರಾಹುಲ್ ಕಳಪೆ ಪ್ರದರ್ಶನ
ಇಂಗ್ಲೆಂಡ್ ವಿರುದ್ಧ ನಡೆದ ಕಳೆದ ಎರಡು ಪಂದ್ಯಗಳಲ್ಲೂ ಕೆ.ಎಲ್ ರಾಹುಲ್ ರನ್ ಕಲೆ ಹಾಕುವಲ್ಲಿ ಎಡವಿದ್ದಾರೆ. ಕಟಕ್ನಲ್ಲಿ 14 ಎಸೆತಗಳಲ್ಲಿ 10 ರನ್ ಗಳಿಸಿದ್ದ ರಾಹುಲ್, ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು.
ಮೊದಲ 2 ಏಕದಿನ ಪಂದ್ಯಗಳಲ್ಲಿ ರಾಹುಲ್ ಗಳಿಸಿದ್ದು ಕೇವಲ 12 ರನ್. ಹೀಗಾಗಿ ರಾಹುಲ್ಗೆ ಮುಂದಿನ ಪಂದ್ಯದಲ್ಲಿ ಅವಕಾಶ ಸಿಗುವ ಬಗ್ಗೆ ಅನುಮಾನ ಮೂಡಿದೆ. ಇದಕ್ಕೆ ಕಾರಣ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್. ಇವರನ್ನು 5ನೇ ಕ್ರಮಾಂಕದ ಬದಲಿಗೆ 6ನೇ ಸ್ಥಾನ ಆಡಿಸಿದ್ದು ಬ್ಯಾಟಿಂಗ್ ವೈಫಲ್ಯಕ್ಕೆ ಕಾರಣ. ಹೀಗಾಗಿ ಕೆ.ಎಲ್ ರಾಹುಲ್ ಅವರನ್ನು ಕೊನೆಯ ಏಕದಿನ ಪಂದ್ಯದಿಂದ ಕೂರಿಸುವ ಬಗ್ಗೆ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ:ಈ ಸಲ ಬಲಿಷ್ಠ RCB ತಂಡ ಕಣಕ್ಕೆ; ಕ್ಯಾಪ್ಟನ್ ಜತೆ ಓಪನಿಂಗ್ ಮಾಡೋರು ಯಾರು?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ