/newsfirstlive-kannada/media/post_attachments/wp-content/uploads/2024/08/Team-India_-News.jpg)
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆರಂಭಕ್ಕೆ ಒಂದೂವರೆ ತಿಂಗಳು ಮಾತ್ರ ಬಾಕಿ ಇದೆ. ಈ ಮೆಗಾ ಟೂರ್ನಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಶುರುವಾಗಿವೆ. ಇನ್ನೂ 3 ದಿನದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಎಲ್ಲಾ ತಂಡಗಳು ಪ್ರಕಟಿಸಬೇಕು ಎಂದು ಐಸಿಸಿ ಗಡುವು ನೀಡಿದೆ.
ಇನ್ನು, ಬಿಸಿಸಿಐ ಕೂಡ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಮಾಡಬೇಕಿದೆ. ಇದರ ಭಾಗವಾಗಿ ಶನಿವಾರ ಬಿಸಿಸಿಐ ಸೆಲೆಕ್ಷನ್ ಕಮಿಟಿ ಸಭೆ ನಡೆಸಲಿದೆ. ಟೀಮ್ ಇಂಡಿಯಾದಲ್ಲಿ ಸ್ಥಾನಕ್ಕಾಗಿ ಸಾಕಷ್ಟು ಆಟಗಾರರ ಮಧ್ಯೆ ಪೈಪೋಟಿ ನಡೆಯುತ್ತಿದೆ. ಮುಖ್ಯ ಕೋಚ್ ಗಂಭೀರ್ ಕೃಪೆ ಯಾರ ಮೇಲಿದೆ? ಅನ್ನೋ ಚರ್ಚೆ ಶುರುವಾಗಿದೆ.
ಪ್ಲೇಯಿಂಗ್ ಎಲೆವೆನ್ ಆಯ್ಕೆ ಸವಾಲ್
ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ ಆಯ್ಕೆ ಮಾಡೋದು ಅಷ್ಟು ಸುಲಭವಲ್ಲ. ಇದಕ್ಕಾಗಿ ಬಿಸಿಸಿಐ ಸೆಲೆಕ್ಷನ್ ಕಮಿಟಿ ಮತ್ತು ಗೌತಮ್ ಗಂಭೀರ್ ಮಹತ್ವದ ನಿರ್ಧಾರ ಕೈಗೊಳ್ಳಬೇಕಿದೆ.
ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಹೊರತಾಗಿ ಮತ್ಯಾರಿಗೂ ಟೀಮ್ ಇಂಡಿಯಾದಲ್ಲಿ ಸ್ಥಾನ ಖಾತ್ರಿಯಿಲ್ಲ. ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಚಾಂಪಿಯನ್ಸ್ ಟ್ರೋಫಿ ಆಡೋದು ಡೌಟ್ ಆಗಿದೆ.
ಜಡೇಜಾಗೆ ಕೊಕ್
ರವೀಂದ್ರ ಜಡೇಜಾ ಸೀಮಿತ ಓವರ್ಗಳಲ್ಲಿ ಚಾರ್ಮ್ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಬಿಸಿಸಿಐ ಸೆಲೆಕ್ಷನ್ ಕಮಿಟಿ ಅಕ್ಷರ್ ಪಟೇಲ್ ಮೇಲೆ ಗಮನ ಹರಿಸಿದೆ. ಏಕದಿನ ಪಂದ್ಯಗಳಲ್ಲಿ ಅಕ್ಷರ್ ಪರಿಣಾಮಕಾರಿ ಆಟ ಆಡಬಲ್ಲರು. ಜಡೇಜಾ ಸ್ಥಾನವನ್ನು ತುಂಬಬಲ್ಲ ಆಟಗಾರ ಅಕ್ಷರ್ ಪಟೇಲ್. ಇವರು ಕೇವಲ ಬೌಲಿಂಗ್ ಮಾತ್ರವಲ್ಲ ಬ್ಯಾಟಿಂಗ್ನಲ್ಲೂ ಸೈ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕನ್ನಡಿಗನಿಗೆ ಬಿಸಿಸಿಐ ಬಿಗ್ ಶಾಕ್; ಮೆಗಾ ಟೂರ್ನಿಯಿಂದ ಕೆ.ಎಲ್ ರಾಹುಲ್ ಔಟ್; ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ