/newsfirstlive-kannada/media/post_attachments/wp-content/uploads/2025/01/Team-India-vs-England.jpg)
ಇತ್ತೀಚೆಗೆ ರಾಜ್ಕೋಟ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಕಳೆದ 2 ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಬ್ಯಾಟರ್ಗಳು 3ನೇ ಟಿ20ಯಲ್ಲಿ ಕೈ ಕೊಟ್ಟರು. ರನ್ ಕಲೆ ಹಾಕಲು ಪರದಾಡಿದರು.
2ನೇ ಟಿ20 ಪಂದ್ಯದಲ್ಲಿ ಟಾಪ್ ಆರ್ಡರ್ ಬ್ಯಾಟರ್ಗಳು ಕೈ ಕೊಟ್ಟಾಗ ತಿಲಕ್ ವರ್ಮಾ ಭಾರತ ತಂಡವನ್ನು ಸೋಲಿನಿಂದ ಪಾರು ಮಾಡಿದ್ರು. ಮೂರನೇ ಟಿ20 ಪಂದ್ಯದಲ್ಲಿ ಭಾರತಕ್ಕೆ ಸರಣಿ ಗೆಲ್ಲುವ ಉತ್ತಮ ಅವಕಾಶವಿತ್ತು. ಆದರೆ ಅದು ಸಾಧ್ಯವಾಗಲಿಲ್ಲ.
ಗೆಲ್ಲಲೇಬೇಕಾದ ಒತ್ತಡದಲ್ಲಿ ಭಾರತ
ಟೀಮ್ ಇಂಡಿಯಾ 4ನೇ ಟಿ20 ಪಂದ್ಯ ಗೆಲ್ಲಲೇಬೇಕಾಗಿದೆ. ಜನವರಿ 31ನೇ ತಾರೀಕಿನಂದು ಟೀಮ್ ಇಂಡಿಯಾ ಪುಣೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಇದಕ್ಕಾಗಿ ಟೀಮ್ ಇಂಡಿಯಾದಲ್ಲಿ ಮೇಜರ್ ಸರ್ಜರಿ ಆಗಲಿದೆ.
ಹಾರ್ದಿಕ್ ಪಾಂಡ್ಯಗೆ ಕೊಕ್
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ. ಇವರು ಬಹಳ ಅಪಾಯಕಾರಿ ಬ್ಯಾಟರ್ ಕೂಡ ಹೌದು. ಹಾಗೆಯೇ ತಂಡದ ಮೂರನೇ ಆಲ್ರೌಂಡರ್ ಬೌಲರ್ ಪಾತ್ರ ಕೂಡ ನಿರ್ವಹಿಸಲಿದ್ದಾರೆ. ಈಗಾಗಲೇ ಇಂಗ್ಲೆಂಡ್ ವಿರುದ್ಧ 3 ಟಿ20 ಪಂದ್ಯ ಆಡಿರೋ ಹಾರ್ದಿಕ್ ಪಾಂಡ್ಯಗೆ 4ನೇ ಪಂದ್ಯದಿಂದ ರೆಸ್ಟ್ ನೀಡಬಹುದು.
ಟೀಮ್ ಇಂಡಿಯಾ ಆಟಗಾರರು ಮುಂಬರೋ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗೆ ಸಿದ್ಧರಾಗಬೇಕಿದೆ. ಹಾರ್ದಿಕ್ ಪಾಂಡ್ಯ ಅವರಿಗೂ ರೆಸ್ಟ್ ಬೇಕಿದೆ. ಹೀಗಾಗಿ ಹಾರ್ದಿಕ್ ಬದಲಿಗೆ ಶಿವಂ ದುಬೆ ಅವರನ್ನು ಪ್ಲೇಯಿಂಗ್-11 ರಲ್ಲಿ ಅವಕಾಶ ಪಡೆಯಬಹುದು.
4ನೇ ಟಿ20ಗೆ ಭಾರತದ ಸಂಭಾವ್ಯ ಪ್ಲೇಯಿಂಗ್-11
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಇದನ್ನೂ ಓದಿ:4ನೇ ಟಿ20 ಪಂದ್ಯಕ್ಕೆ ಬಲಿಷ್ಠ ಟೀಮ್ ಇಂಡಿಯಾ ಕಣಕ್ಕೆ; ಸ್ಟಾರ್ ಆಟಗಾರರಿಗೆ ತಂಡದಿಂದ ಗೇಟ್ಪಾಸ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ