/newsfirstlive-kannada/media/post_attachments/wp-content/uploads/2025/01/KL_RAHUL_PANT-1.jpg)
ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾದ ಭಾಗವಾಗಿರೋ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್. ಇವರಿಗೆ ಇನ್ನೂ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ನಲ್ಲಿ ಅವಕಾಶ ಸಿಕ್ಕಿಲ್ಲ. ಕನ್ನಡಿಗ ಕೆ.ಎಲ್ ರಾಹುಲ್ ಮೇಲೆ ಭರವಸೆ ಇಟ್ಟು ಬಿಸಿಸಿಐ ಸೆಲೆಕ್ಷನ್ ಕಮಿಟಿ ಆಯ್ಕೆ ಮಾಡಿದೆ. ಹಾಗೆಯೇ ಮೂರು ಪಂದ್ಯಗಳಲ್ಲೂ ರಾಹುಲ್ ಅವರನ್ನೇ ಕಣಕ್ಕಿಳಿಸಿದೆ.
ಕೆ.ಎಲ್ ರಾಹುಲ್ ಜೊತೆಗೆ 2ನೇ ವಿಕೆಟ್ ಕೀಪರ್ ಆಗಿ ತಂಡಕ್ಕೆ ಆಯ್ಕೆಯಾಗಿದ್ದ ರಿಷಬ್ ಪಂತ್ ಬೆಂಚ್ ಕಾಯಬೇಕಾಗಿತ್ತು. ಈ ನಡುವೆ ಪಂತ್ಗೆ ಒಂದು ಒಳ್ಳೆಯ ಸುದ್ದಿ ಸಿಕ್ಕಿದೆ. ಮುಂದಿನ ಪಂದ್ಯದಲ್ಲಿ ಇವರಿಗೆ ಚಾನ್ಸ್ ಸಿಗೋದು ಪಕ್ಕಾ ಆಗಿದೆ.
ನಾಳೆ ನಡೆಯಲಿರೋ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ. ಹೇಗಾದ್ರೂ ಮಾಡಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಹಳೆಯ ಸೇಡು ತೀರಿಸಿಕೊಳ್ಳಲು ಟೀಮ್ ಇಂಡಿಯಾ ಆಟಗಾರರು ಮುಂದಾಗಿದ್ದಾರೆ.
ಇತ್ತೀಚೆಗೆ ನಡೆದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 44 ರನ್ಗಳಿಂದ ಗೆದ್ದು ಬೀಗಿತ್ತು. ಈ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರ ಸ್ಥಾನದಲ್ಲಿದೆ. ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಲಿದೆ. ಈ ಪಂದ್ಯದಲ್ಲಿ ಆ 2 ಸೋಲುಗಳ ಲೆಕ್ಕಾ ಚುಕ್ತ ಮಾಡಲು ಟೀಮ್ ಇಂಡಿಯಾ ಪ್ಲಾನ್ ಮಾಡಿದೆ.
ರಾಹುಲ್ಗೆ ಗೇಟ್ಪಾಸ್
ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ನಲ್ಲಿ ಸ್ಥಿರ ಪ್ರದರ್ಶನ ನೀಡಿ ಕೆ.ಎಲ್ ರಾಹುಲ್ ಬೆಸ್ಟ್ ಫೀಲ್ಡಿಂಗ್ ಅವಾರ್ಡ್ಗೆ ಭಾಜನರಾದ್ರು. ಇದಾದ ಬಳಿಕ ನಡೆದ 2 ಪಂದ್ಯಗಳಲ್ಲೂ ಕನ್ನಡಿಗ ಕೆ.ಎಲ್ ರಾಹುಲ್ ತಮ್ಮ ಫಾರ್ಮ್ ಕಾಯ್ದುಕೊಳ್ಳುವಲ್ಲಿ ಎಡವಿದರು. ವಿಕೆಟ್ ಕೀಪಿಂಗ್ ಮತ್ತು ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸಿದ್ರು ಎನ್ನುವ ಮಾತುಗಳು ಕೇಳಿ ಬಂದಿವೆ. ಹೀಗಾಗಿ ರಾಹುಲ್ಗೆ ಕೊಕ್ ನೀಡಿ ಪಂತ್ಗೆ ಅವಕಾಶ ನೀಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.
ಪಂತ್ಗೆ ಚಾನ್ಸ್
ಕೆಎಲ್ ರಾಹುಲ್ ನ್ಯೂಜಿಲೆಂಡ್ ವಿರುದ್ಧ ವಿಕೆಟ್ ಕೀಪರ್ ಆಗಿ ಹಲವು ತಪ್ಪುಗಳನ್ನು ಮಾಡಿದ್ರು. ಇದು ಭಾರತ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆದ್ದರಿಂದ ಸೆಮಿಫೈನಲ್ ಪಂದ್ಯಕ್ಕೆ ಕೆ.ಎಲ್ ರಾಹುಲ್ಗೆ ರೆಸ್ಟ್ ನೀಡಿ ಪಂತ್ ಅವರನ್ನು ಆಡಿಸೋ ಸಾಧ್ಯತೆ ಇದೆ.
ಇದನ್ನೂ ಓದಿ:ಸೆಮಿಫೈನಲ್ ಪಂದ್ಯ; ಟೀಮ್ ಇಂಡಿಯಾದಿಂದ ಕೆ.ಎಲ್ ರಾಹುಲ್ಗೆ ಗೇಟ್ಪಾಸ್; ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ