/newsfirstlive-kannada/media/post_attachments/wp-content/uploads/2024/10/Team-India-2-1.jpg)
ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್. ಇವರು ಭಾರತ ಕ್ರಿಕೆಟ್ ತಂಡದ ಬೌಲಿಂಗ್ ವಿಭಾಗದ ಆಧಾರಸ್ತಂಭ ಎಂದು ಹೇಳಬಹುದು. ಇತ್ತೀಚೆಗೆ ಬೆಂಗಳೂರಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಉತ್ತಮ ಪ್ರದರ್ಶನ ನೀಡಲಿಲ್ಲ. ತಂಡ ತನ್ನ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಲಿಲ್ಲ. ಹಾಗಾಗಿ ಟೀಮ್ ಇಂಡಿಯಾ ಸೋಲಿನ ಬೆನ್ನಲ್ಲೇ ಅತೀಹೆಚ್ಚು ಟೀಕೆಗೆ ಒಳಗಾದವರು ಸಿರಾಜ್.
2ನೇ ಇನ್ನಿಂಗ್ಸ್ನಲ್ಲಿ ಶೂನ್ಯ ವಿಕೆಟ್
ಬೆಂಗಳೂರು ಟೆಸ್ಟ್ನಲ್ಲಿ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಸಾಕಷ್ಟು ನಿರಾಸೆ ಮೂಡಿಸಿದ್ರು. ತನ್ನ ತವರು ಪಿಚ್ನಲ್ಲಿಯೂ ಸಿರಾಜ್ ವಿಕೆಟ್ ಪಡೆಯಲು ಪರದಾಡಿದ್ರು. ಮೊದಲ ಇನ್ನಿಂಗ್ಸ್ನಲ್ಲಿ 2 ವಿಕೆಟ್ ಪಡೆದ ಇವರು, 2ನೇ ಇನ್ನಿಂಗ್ಸ್ನಲ್ಲಿ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಇವರ ಬದಲಿಗೆ ಆಕಾಶ್ ದೀಪ್ಗೆ ಚಾನ್ಸ್ ನೀಡುವ ಸಾಧ್ಯತೆ ಇದೆ.
ಸಿರಾಜ್ ಬದಲಿಗೆ ಆರ್ಸಿಬಿ ಸ್ಟಾರ್ಗೆ ಮಣೆ
ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ನಿಂದ ಮೊಹಮ್ಮದ್ ಸಿರಾಜ್ ಬಹುತೇಕ ಹೊರಬೀಳುವುದು ಖಚಿತವಾಗಿದೆ. ಇವರ ಬದಲಿಗೆ ಆರ್ಸಿಬಿ ತಂಡದ ಸ್ಟಾರ್ ಬೌಲರ್ ಆಕಾಶ್ ದೀಪ್ಗೆ ಅವಕಾಶ ನೀಡಲಾಗುವುದು. ಇತ್ತೀಚೆಗೆ ನಡೆದ ಬಾಂಗ್ಲಾದೇಶದ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸೀರೀಸ್ನಲ್ಲಿ ಆಕಾಶ್ ದೀಪ್ ಒಟ್ಟು 5 ವಿಕೆಟ್ ಪಡೆದು ಮೋಡಿ ಮಾಡಿದ್ರು.
ಇತ್ತೀಚೆಗೆ ಬೆಂಗಳೂರಿನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ ಬರೋಬ್ಬರಿ 8 ವಿಕೆಟ್ಗಳಿಂದ ಗೆದ್ದು ಬೀಗಿದೆ. ಈ ಮೂಲಕ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ 1-0 ಅಂತರದ ಮುನ್ನಡೆ ಸಾಧಿಸಿದೆ.
24ನೇ ತಾರೀಕಿನಿಂದ 2ನೇ ಟೆಸ್ಟ್ ಶುರು
ಇನ್ನು, 2ನೇ ಟೆಸ್ಟ್ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಮ್ನಲ್ಲಿ ನಡೆಯಲಿದೆ. ಇದಕ್ಕೆ ಟೀಮ್ ಇಂಡಿಯಾ ಭರ್ಜರಿ ತಯಾರಿ ಮಾಡಿಕೊಂಡಿದೆ. ಅಕ್ಟೋಬರ್ 24ನೇ ತಾರೀಕಿನಿಂದ ಶುರುವಾಗೋ ಈ ಟೆಸ್ಟ್ ಪಂದ್ಯ 28ರ ವರೆಗೆ ನಡೆಯಲಿದೆ. ಈ ಪಂದ್ಯಕ್ಕೆ ಮುನ್ನವೇ ಟೀಮ್ ಇಂಡಿಯಾದಲ್ಲಿ ಮೇಜರ್ ಸರ್ಜರಿ ಆಗಲಿದೆ.
ಇದನ್ನೂ ಓದಿ: 2ನೇ ಟೆಸ್ಟ್ಗೆ ಮುನ್ನ ಟೀಮ್ ಇಂಡಿಯಾಗೆ ಬಿಗ್ ಶಾಕ್; ಪಂದ್ಯದಿಂದ ಸ್ಟಾರ್ ಪ್ಲೇಯರ್ ಔಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ