/newsfirstlive-kannada/media/post_attachments/wp-content/uploads/2024/11/KL-Rahul-Test-1.jpg)
ಟೀಮ್​ ಇಂಡಿಯಾ, ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಶುರುವಾಗಲು ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಮಹತ್ವದ ಸರಣಿಗಾಗಿ ಸದ್ಯದಲ್ಲೇ ಟೀಮ್​ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಬೆಳೆಸಲಿದೆ. ವಿಶ್ವ ಟೆಸ್ಟ್​ ಚಾಂಪಿಯನ್​ಶೀಪ್​​ ದೃಷ್ಟಿಯಿಂದ ಹೇಗಾದ್ರೂ ಮಾಡಿ ಈ ಸರಣಿ ಗೆಲ್ಲಲೇಬೇಕು ಎಂದು ಟೀಮ್​ ಇಂಡಿಯಾ ಭರ್ಜರಿ ಪ್ಲ್ಯಾನ್​ ಮಾಡಿಕೊಂಡಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯಕ್ಕೆ ಟೀಮ್​ ಇಂಡಿಯಾ ಮ್ಯಾನೇಜ್ಮೆಂಟ್ಗೆ ದೊಡ್ಡ ತಲೆನೋವು ಎದುರಾಗಿದೆ. ಗಾಯಕ್ಕೆ ತುತ್ತಾಗಿರುವ ಆಟಗಾರರು ಮೊದಲ ಟೆಸ್ಟ್ ಪಂದ್ಯ ಆಡುವುದು ಡೌಟ್ ಎನ್ನಲಾಗುತ್ತಿದೆ. ಶುಭ್ಮನ್​​ ಗಿಲ್​​, ಕೆ.ಎಲ್ ರಾಹುಲ್ ಮತ್ತು ಸರ್ಫರಾಜ್ ಖಾನ್ ಗಾಯಕ್ಕೆ ತುತ್ತಾಗಿದ್ದಾರೆ. ಈಗ ಈ ಪೈಕಿ ಕೆ.ಎಲ್​ ರಾಹುಲ್​ ಸಂಪೂರ್ಣ ಫಿಟ್​ ಆಗಿದ್ದು, ಮೈದಾನಕ್ಕೆ ಇಳಿಯೋದು ಪಕ್ಕಾ ಆಗಿದೆ.
ಭರ್ಜರಿ ಗುಡ್​ನ್ಯೂಸ್​ ಕೊಟ್ಟ ಕೆ.ಎಲ್ ರಾಹುಲ್
ಬಾರ್ಡರ್ ಗವಾಸ್ಕರ್ ಟ್ರೋಫಿ ಟೀಮ್ ಇಂಡಿಯಾಗೆ ಮಹತ್ವದ ಸರಣಿ. ಈ ಮಹತ್ವದ ಟೂರ್ನಿ ಗೆದ್ದರೆ ಮಾತ್ರ ಟೀಮ್​ ಇಂಡಿಯಾ ನೇರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶ ಮಾಡಲಿದೆ. ಇತ್ತೀಚೆಗೆ ನ್ಯೂಜಿಲೆಂಡ್​ ವಿರುದ್ಧದ ಮೂರು ಟೆಸ್ಟ್​​ಗಳ ಸರಣಿಯಲ್ಲಿ ಹೀನಾಯ ಸೋಲು ಕಂಡ ಟೀಮ್​ ಇಂಡಿಯಾಗೆ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಕೆ.ಎಲ್​ ರಾಹುಲ್​ಗೆ ಹೊಸ ಜವಾಬ್ದಾರಿ
ಪರ್ತ್ನಲ್ಲಿ ನಡೆಯಲಿರೋ ಮೊದಲ ಟೆಸ್ಟ್​ ಪಂದ್ಯದಲ್ಲಿ ಕ್ಯಾಪ್ಟನ್​ ರೋಹಿತ್​ ಶರ್ಮಾ ಆಡೋದು ಡೌಟ್​​. ಹೀಗಾಗಿ ಟೀಮ್ ಇಂಡಿಯಾ ಆರಂಭಿಕ ಆಟಗಾರನ ಹುಡುಕಾಟದಲ್ಲಿದೆ. ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವ ಹೊಣೆ ಕೆಎಲ್ ರಾಹುಲ್​ಗೆ ನೀಡಲಾಗಿದೆ.
ನವೆಂಬರ್ 22ರಿಂದ ಆಸ್ಟ್ರೇಲಿಯಾದಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್​ ಪಂದ್ಯ ನಡೆಯಲಿದೆ. ಕೌಟುಂಬಿಕ ಕಾರಣ ಕ್ಯಾಪ್ಟನ್ ರೋಹಿತ್ ಅವರು ಇನ್ನೂ ಪರ್ತ್​​ಗೆ ಹೋಗಿಲ್ಲ. ಮೊದಲ ಪಂದ್ಯವನ್ನು ರೋಹಿತ್ ಅವರೇ ಮುನ್ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಶೀಘ್ರದಲ್ಲಿ ಶರ್ಮಾ ಆಸ್ಟ್ರೇಲಿಯಾಗೆ ಪ್ರಯಾಣ ಬೆಳಸಲಿದ್ದಾರೆ.
ಇದನ್ನೂ ಓದಿ: RCB ಕೈ ಬಿಟ್ಟ ಈ ಮೂವರಿಗೆ ಭಾರೀ ಡಿಮ್ಯಾಂಡ್​; 10 ಕೋಟಿಗೂ ಹೆಚ್ಚು ಸೇಲಾಗೋ ಆಟಗಾರರು ಇವ್ರೇ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us