ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಗೆದ್ದು ಬೀಗಿದ ಟೀಮ್ ಇಂಡಿಯಾ
ಕ್ಯಾಪ್ಟನ್ ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡಕ್ಕೆ ಭರ್ಜರಿ ಜಯ
ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ಗೆ ಶುಭಾರಂಭ..!
ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಜೋಡಿ ಶುಭಾರಂಭ ಮಾಡಿದೆ.
ಒಂದೆಡೆ ಹಲವು ಸ್ಟಾರ್ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ರೆ, ಇನ್ನೂ ಕೆಲವು ಕ್ರಿಕೆಟರ್ಸ್ ಮುಖ್ಯ ಕೋಚ್ ಗೌತಮ್ ಗಂಭೀರ್ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಡಕ್ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಸತತ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಡಕ್ಗೆ ವಿಕೆಟ್ ಒಪ್ಪಿಸುವ ಮೂಲಕ ಕೋಚ್ ಗಂಭೀರ್ ನಂಬಿಕೆ ಕಳೆದುಕೊಂಡರು.
ಶ್ರೀಲಂಕಾ ವಿರುದ್ಧ ಮತ್ತೆ ಸಂಜು ಫೇಲ್ಯೂರ್!
ಇನ್ನು, 3ನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ ಮಾಡಲಾಗಿತ್ತು. ರಿಷಬ್ ಪಂತ್ ಬದಲಿಗೆ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿತ್ತು. ಮೊದಲ 2 ಪಂದ್ಯಗಳಲ್ಲಿ ಅವಕಾಶ ನೀಡಿದ್ರೂ ಪಂತ್ ಸರಿಯಾಗಿ ಬಳಸಿಕೊಳ್ಳಲಿಲ್ಲ ಅನ್ನೋ ಆರೋಪ ಕೇಳಿ ಬಂದಿತ್ತು. ಹಾಗಾಗಿ ಸಂಜು ಅವರನ್ನೇ ಆಡಿಸಲಾಯ್ತು. ಕಳೆದ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿದ್ದ ಸಂಜು ಸ್ಯಾಮ್ಸನ್ ಈ ಸಲ ಡಕೌಟ್ ಆಗಿದ್ದಾರೆ. ಹಾಗಾಗಿ ಫ್ಯಾನ್ಸ್ ನಿನಗೆ ಎಷ್ಟು ಅವಕಾಶ ಕೊಟ್ರೂ ವೇಸ್ಟ್. ಅದೇ ರಾಗ ಅದೇ ಹಾಡು, ಚೂರಾದ್ರೂ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಗೆದ್ದು ಬೀಗಿದ ಟೀಮ್ ಇಂಡಿಯಾ
ಕ್ಯಾಪ್ಟನ್ ಸೂರ್ಯಕುಮಾರ್ ನೇತೃತ್ವದಲ್ಲಿ ಭಾರತ ತಂಡಕ್ಕೆ ಭರ್ಜರಿ ಜಯ
ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ಗೆ ಶುಭಾರಂಭ..!
ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಜೋಡಿ ಶುಭಾರಂಭ ಮಾಡಿದೆ.
ಒಂದೆಡೆ ಹಲವು ಸ್ಟಾರ್ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ರೆ, ಇನ್ನೂ ಕೆಲವು ಕ್ರಿಕೆಟರ್ಸ್ ಮುಖ್ಯ ಕೋಚ್ ಗೌತಮ್ ಗಂಭೀರ್ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಡಕ್ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಸತತ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಡಕ್ಗೆ ವಿಕೆಟ್ ಒಪ್ಪಿಸುವ ಮೂಲಕ ಕೋಚ್ ಗಂಭೀರ್ ನಂಬಿಕೆ ಕಳೆದುಕೊಂಡರು.
ಶ್ರೀಲಂಕಾ ವಿರುದ್ಧ ಮತ್ತೆ ಸಂಜು ಫೇಲ್ಯೂರ್!
ಇನ್ನು, 3ನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ ಮಾಡಲಾಗಿತ್ತು. ರಿಷಬ್ ಪಂತ್ ಬದಲಿಗೆ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿತ್ತು. ಮೊದಲ 2 ಪಂದ್ಯಗಳಲ್ಲಿ ಅವಕಾಶ ನೀಡಿದ್ರೂ ಪಂತ್ ಸರಿಯಾಗಿ ಬಳಸಿಕೊಳ್ಳಲಿಲ್ಲ ಅನ್ನೋ ಆರೋಪ ಕೇಳಿ ಬಂದಿತ್ತು. ಹಾಗಾಗಿ ಸಂಜು ಅವರನ್ನೇ ಆಡಿಸಲಾಯ್ತು. ಕಳೆದ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿದ್ದ ಸಂಜು ಸ್ಯಾಮ್ಸನ್ ಈ ಸಲ ಡಕೌಟ್ ಆಗಿದ್ದಾರೆ. ಹಾಗಾಗಿ ಫ್ಯಾನ್ಸ್ ನಿನಗೆ ಎಷ್ಟು ಅವಕಾಶ ಕೊಟ್ರೂ ವೇಸ್ಟ್. ಅದೇ ರಾಗ ಅದೇ ಹಾಡು, ಚೂರಾದ್ರೂ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್