/newsfirstlive-kannada/media/post_attachments/wp-content/uploads/2024/10/TEAM-INDIA-1.jpg)
ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 290ಕ್ಕೂ ಹೆಚ್ಚು ರನ್ಗಳಿಂದ ಗೆದ್ದು ವಿಶ್ವದಾಖಲೆ ಬರೆದಿದ್ದ ಟೀಮ್ ಇಂಡಿಯಾ 2ನೇ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಮುಗ್ಗರಿಸಿದೆ. ಅಡಿಲೇಡ್ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮುನ್ನ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಬರೋಬ್ಬರಿ 20 ವರ್ಷಗಳ ನಂತರ ತವರಿನಲ್ಲೇ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 3-0 ಅಂತರದಿಂದ ಟೆಸ್ಟ್ ಸೀರೀಸ್ನಲ್ಲಿ ವೈಟ್ ವಾಶ್ ಆಗಿದೆ.
ಇನ್ನು, ಈ ಸೋಲಿನೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 4 ಪಂದ್ಯ ಗೆಲ್ಲಲೇಬೇಕಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಾಲ್ಕು ಗೆದ್ದರಷ್ಟೇ ಫೈನಲ್ಗೆ ಸುಗಮವಾಗಿ ಅರ್ಹತೆ ಪಡೆಯಲ್ಲಿದೆ. ಇಲ್ಲದಿದ್ದರೆ, ಮೂರನೇ ಬಾರಿಗೆ ಫೈನಲ್ ಆಡುವ ಟೀಮ್ ಇಂಡಿಯಾ ಕನಸು ಭಗ್ನಗೊಳ್ಳಲಿದೆ. ಇದರ ಮಧ್ಯೆ ಟೀಮ್ ಇಂಡಿಯಾಗೆ ಗುಡ್ನ್ಯೂಸ್ ಒಂದಿದೆ.
3ನೇ ಪಂದ್ಯಕ್ಕೆ ಸ್ಟಾರ್ ಆಲ್ರೌಂಡರ್ ಎಂಟ್ರಿ
ಡಿಸೆಂಬರ್ 14ನೇ ತಾರೀಕಿನಿಂದ ಬ್ರಿಸ್ಬೇನ್ನಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಮಧ್ಯೆ 3ನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಮಹತ್ವದ ಟೆಸ್ಟ್ನಿಂದ ಟೀಮ್ ಇಂಡಿಯಾ ಅನುಭವಿ ಆಫ್ ಸ್ಪಿನ್ ಬೌಲರ್ ಅಶ್ವಿನ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವರಿಗೆ ಚಾನ್ಸ್ ನೀಡುವ ಸಾಧ್ಯತೆ ಇದೆ.
ವಾಷಿಂಗ್ಟನ್ ಸುಂದರ್ ಏಕೆ?
ಗಬ್ಬಾ ಪಿಚ್ನಲ್ಲಿ ಸ್ಪಿನ್ ಬೌಲರ್ಗಳಿಗೆ ಹೆಚ್ಚಿನ ನೆರವು ಇಲ್ಲ. ಅಶ್ವಿನ್ಗೆ ಹೋಲಿಸಿದರೆ ವಾಷಿಂಗ್ಟನ್ ಈ ಪಿಚ್ನಲ್ಲಿ ಪರಿಣಾಮಕಾರಿ ಆಗಿ ಆಡಬಲ್ಲರು. ಈ ಪಿಚ್ನಲ್ಲಿ ಹೆಚ್ಚಿನ ಬೌನ್ಸ್ ಇದ್ದು, ವಾಷಿಂಗ್ಟನ್ ಸುಂದರ್ ಇದರ ಲಾಭವನ್ನು ಪಡೆಯಬಹುದು. ಇವರು ಒಬ್ಬ ಉತ್ತಮ ಆಲ್ರೌಂಡರ್. ಮಧ್ಯಮ ಕೆಳಕ್ರಮಾಂಕದಲ್ಲಿ ಪರಿಣಾಮಕಾರಿ ಬ್ಯಾಟಿಂಗ್ ನಡೆಸಬಲ್ಲರು.
ಇದನ್ನೂ ಓದಿ:ಫ್ಯಾನ್ಸ್ಗೆ ಭರ್ಜರಿ ಗುಡ್ನ್ಯೂಸ್; ಸ್ಟಾರ್ ಪ್ಲೇಯರ್ ಎಂಟ್ರಿ; ಟೀಮ್ ಇಂಡಿಯಾಗೆ ಬಂತು ಆನೆಬಲ
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ