/newsfirstlive-kannada/media/post_attachments/wp-content/uploads/2024/10/ROHIT_SHARMA-2.jpg)
ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮುನ್ನ ನಡೆದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್​​ ವಿರುದ್ಧ ಟೀಮ್​ ಇಂಡಿಯಾ ಹೀನಾಯ ಸೋಲು ಕಂಡಿತ್ತು. 20 ವರ್ಷಗಳ ನಂತರ ತವರಿನಲ್ಲಿ ಟೀಮ್​ ಇಂಡಿಯಾ ನ್ಯೂಜಿಲೆಂಡ್​ ವಿರುದ್ಧ 3-0 ಅಂತರದಿಂದ ಟೆಸ್ಟ್​ ಸೀರೀಸ್​ನಲ್ಲಿ ವೈಟ್​ ವಾಶ್​ ಆಗಿತ್ತು. ಈ ಬೆನ್ನಲ್ಲೇ ಟೀಮ್​ ಇಂಡಿಯಾ 3-1 ಅಂತರದಲ್ಲಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್​ ಸರಣಿ ಸೋತಿದೆ.
ಇನ್ನು, ಈ ಸೋಲಿನೊಂದಿಗೆ ಟೀಮ್​ ಇಂಡಿಯಾದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​​ ಫೈನಲ್ ಹಾದಿ ಕ್ಲೋಸ್​ ಆಗಿದೆ. ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಾಲ್ಕು ಗೆದ್ದರಷ್ಟೇ ಫೈನಲ್​ಗೆ ಸುಗಮವಾಗಿ ಅರ್ಹತೆ ಪಡೆಯಲು ಟೀಮ್​ ಇಂಡಿಯಾಗೆ ಅವಕಾಶ ಇತ್ತು. ಈಗ ಟೆಸ್ಟ್​ ಸರಣಿ ಸೋತಿದ್ದು, 3ನೇ ಬಾರಿಗೆ ಫೈನಲ್ ಆಡುವ ಟೀಮ್​ ಇಂಡಿಯಾ ಕನಸು ಭಗ್ನಗೊಂಡಿದೆ.
ರೋಹಿತ್​​ ನಾಯಕತ್ವದ ಬಗ್ಗೆ ಪ್ರಶ್ನೆ
ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡವನ್ನು ಜಸ್ಪ್ರೀತ್ ಬುಮ್ರಾ ಲೀಡ್​ ಮಾಡಿದ್ರು. ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಟೀಮ್​ ಇಂಡಿಯಾ ಐತಿಹಾಸಿಕ ಗೆಲುವು ಸಾಧಿಸಿ ದಾಖಲೆ ಬರೆದಿತ್ತು. 2ನೇ ಟೆಸ್ಟ್​​ ಪಂದ್ಯದಲ್ಲಿ ಕ್ಯಾಪ್ಟನ್​​ ರೋಹಿತ್​​ ನೇತೃತ್ವದಲ್ಲಿ ಟೀಮ್​ ಇಂಡಿಯಾ ಸೋತಿದೆ. ಇಷ್ಟೇ ಅಲ್ಲ 3 ಮತ್ತು 4ನೇ ಟೆಸ್ಟ್​ ಪಂದ್ಯದಲ್ಲೂ ಟೀಮ್​ ಇಂಡಿಯಾಗೆ ಭಾರೀ ಹಿನ್ನಡೆ ಆಗಿತ್ತು. ಇದರ ಪರಿಣಾಮ 5ನೇ ಟೆಸ್ಟ್​ನಿಂದ ರೋಹಿತ್​ ದೂರ ಉಳಿದಿದ್ರು. ಬುಮ್ರಾ ನಾಯಕತ್ವದಲ್ಲೂ ಟೀಮ್​ ಇಂಡಿಯಾ ಕೊನೆ ಟೆಸ್ಟ್​ ಸೋತಿದೆ.
ನಾಯಕತ್ವದಿಂದ ಕೆಳಗಿಳಿಸುವಂತೆ ಆಗ್ರಹ
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕ್ಯಾಪ್ಟನ್​ ರೋಹಿತ್​ ಶರ್ಮಾ ಬ್ಯಾಟ್​​ ಸಾಕಷ್ಟು ಮೌನವಾಗಿತ್ತು. ಯಾವ ಪಂದ್ಯದಲ್ಲೂ ರೋಹಿತ್​ ಹೇಳಿಕೊಳ್ಳುವ ಪ್ರದರ್ಶನ ನೀಡಲಿಲ್ಲ. ಹೀಗಾಗಿ ರೋಹಿತ್ ಶರ್ಮಾ​ರನ್ನು ಟೆಸ್ಟ್​ ನಾಯಕತ್ವದಿಂದ ಕೆಳಗಿಳಿಸಬೇಕು ಎಂಬ ಕೂಗು ಜೋರಾಗಿದೆ.
ಈ ಬಾರಿ ಟೀಮ್​ ಇಂಡಿಯಾ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​​ ಫೈನಲ್ ಹೋಗುವ ದಾರಿ ಕ್ಲೋಸ್​ ಆಗಿದೆ. ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋತಿದ್ದು, ರೋಹಿತ್​ ಅವರಿಗೆ ಕ್ಯಾಪ್ಟನ್ಸಿಯಿಂದ ಕೊಕ್​ ನೀಡಬೇಕು ಎನ್ನುವ ಮಾತುಗಳು ಕೇಳಿಬಂದಿವೆ. ಬಿಸಿಸಿಐ ಈ ವಿಚಾರದಲ್ಲಿ ಯಾವುದೇ ಅಚ್ಚರಿ ನಿರ್ಧಾರ ಕೈಗೊಳ್ಳಬಹುದು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us