/newsfirstlive-kannada/media/post_attachments/wp-content/uploads/2025/01/Shubhman-Gill_Axar-Patel.jpg)
ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಈ ಬೆನ್ನಲ್ಲೀಗ ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಆಡಲು ಮುಂದಾಗಿರೋ ಟೀಮ್ ಇಂಡಿಯಾ ಗೆಲುವಿನ ನಿರೀಕ್ಷೆಯಲ್ಲಿದೆ.
ಇನ್ನು, ಟೀಮ್ ಇಂಡಿಯಾವನ್ನು ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಲೀಡ್ ಮಾಡಲಿದ್ದಾರೆ. ಶುಭ್ಮನ್ ಗಿಲ್ ಬದಲಿಗೆ ಅಕ್ಷರ್ ಪಟೇಲ್ಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ. ಅಕ್ಷರ್ ಪಟೇಲ್ ವೈಸ್ ಕ್ಯಾಪ್ಟನ್ ಆಗಿ ಮಿಂಚುವ ಸಾಧ್ಯತೆ ಇದೆ.
ಅಕ್ಷರ್ ಪಟೇಲ್ ಏನಂದ್ರು?
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಮ್ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಮುನ್ನ ಮಾತಾಡಿರೋ ಉಪನಾಯಕ ಅಕ್ಷರ್ ಪಟೇಲ್ ಅವರು, ಭಾರತ ತಂಡ ಟಿ20 ಕ್ರಿಕೆಟ್ನಲ್ಲಿ ಭವಿಷ್ಯದ ಗುರಿಗಳನ್ನು ಹೊಂದಿದೆ. ಮುಂದಿನ ವರ್ಷ ಟಿ20 ವಿಶ್ವಕಪ್ ನಡೆಯಲಿದೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಬಹಳ ಮುಖ್ಯವಾಗಿದೆ ಎಂದರು.
ನಾಳೆಯ ಪಂದ್ಯ ಹೇಗೆ ಗೆಲ್ಲೋದು ಎಂದು ರಣತಂತ್ರ ರೂಪಿಸಬೇಕಿದೆ. ಪಂದ್ಯಗಳನ್ನು ಗೆಲ್ಲಲು ಏನು ಮಾಡಬೇಕು? ಏನು ಮಾಡಬಾರದು? ಎಂಬುದನ್ನು ಯೋಚನೆ ಮಾಡುವುದು ಮುಖ್ಯ. ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಅವರೊಂದಿಗೆ ಮಾತನಾಡಿದ್ದೇನೆ. ಜವಾಬ್ದಾರಿ ತುಂಬಾ ಹೆಚ್ಚಾಗಿದೆ. ಸೂರ್ಯ ಮೇಲೆ ನನಗೆ ವಿಶ್ವಾಸ ಹೆಚ್ಚಿದೆ ಎಂದರು.
ನನ್ನ ಕೈಲಾದಷ್ಟು ಮಾಡುತ್ತೇನೆ ಎಂದ ಅಕ್ಷರ್ ಪಟೇಲ್
ನನಗೆ ಅವಕಾಶ ಸಿಗುತ್ತಾ ಇಲ್ಲವಾ? ಅನ್ನೋದರ ಬಗ್ಗೆ ಯೋಚನೆ ಮಾಡುವುದಿಲ್ಲ. ಯಾರಿಗೂ ನನ್ನ ಸಾಮರ್ಥ್ಯ ಸಾಬಿತು ಮಾಡಬೇಕಾದ ಅಗತ್ಯ ಇಲ್ಲ. ಅವಕಾಶ ಸಿಕ್ಕಾಗ ನನ್ನ ಕೈಲಾದಷ್ಟು ಮಾಡುತ್ತೇನೆ. ನಾನು ತಂಡಕ್ಕೆ ಹೇಗೆ ಕೊಡುಗೆ ನೀಡಬೇಕು ಎಂದು ಯೋಚಿಸುತ್ತೇನೆ ಎಂದರು.
ಇದನ್ನೂ ಓದಿ:ರೋಹಿತ್ ಶರ್ಮಾಗೆ ಬಿಗ್ ಶಾಕ್; ಸ್ಟಾರ್ ಪ್ಲೇಯರ್ ಅಜಿಂಕ್ಯ ರಹಾನೆಗೆ ಕ್ಯಾಪ್ಟನ್ಸಿ ಪಟ್ಟ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ