ಕಾಲೇಜು ಗ್ರೂಪ್ಗೆ ಹೋಗಿರುವ ಮೆಸ್ಸೇಜ್ನಲ್ಲಿ ಏನಿದೆ..?
knownGhost ಎಂಬ ಟ್ವಿಟರ್ನಲ್ಲಿ ಹಂಚಿಕೊಂಡ ಮಾಹಿತಿ ಏನು?
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಇಂದು ಉಮೇದುವಾರಿಕೆ ಸಲ್ಲಿಸ್ತಿದ್ದಾರೆ. ಇದೇ ಹೊತ್ತಲ್ಲಿ, ಅವರ ಕುರಿತ ವಾಟ್ಸ್ಆ್ಯಪ್ ಚಾಟ್ವೊಂದು ವಿವಾದ ಎಬ್ಬಿಸಿದೆ.
ಏನಿದು ವಿವಾದ..?
ನಿನ್ನೆ ರಾತ್ರಿ 9 ಗಂಟೆ 6 ನಿಮಿಷಕ್ಕೆ knownGhost ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ವಾಟ್ಸ್ಆ್ಯಪ್ ಚಾಟ್ಗಳನ್ನು ಹೊಂದಿರುವ ನಾಲ್ಕು ಫೋಟೋಗಳನ್ನು ಅಪ್ಲೋಡ್ ಮಾಡಲಾಗಿದೆ. ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಜಯನಗರದ ಮೈಯಾಸ್ ಹೋಟೆಲ್ ಬಳಿ ಸೇರಬೇಕು. ಅಲ್ಲಿ ನಿಮಗೆ ಟಿ-ಶರ್ಟ್ ನೀಡಲಾಗುವುದು, ತಡ ಮಾಡಬಾರದು. ಕಡ್ಡಾಯವಾಗಿ ಇದರಲ್ಲಿ ಭಾಗವಹಿಸಬೇಕು. ಯಾವುದೇ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಇದಕ್ಕಾಗಿ ನೀವು ಹಾಜರಾತಿ ಪಡೆಯುತ್ತೀರಿ ಎಂದಿರುವ ಮೆಸೇಜ್ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ: 10, 20 ಕೋಟಿ ಅಲ್ಲವೇ ಅಲ್ಲ.. ಕರ್ನಾಟಕದ ಈ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 98.52 ಕೋಟಿ ಮೌಲ್ಯದ ಮದ್ಯ ಜಪ್ತಿ..!
ಈ ವಿಚಾರಗಳನ್ನು ಪೋಸ್ಟ್ ಮಾಡಿರುವ knownGhost, ಹಾಯ್, ಇದು ಬೆಂಗಳೂರಿನ ವಿವಿರಂನ ಜೈನ್ ಕಾಲೇಜಿನ ವಿದ್ಯಾರ್ಥಿ. ನಮಗೆ ತೇಜಸ್ವಿ ಸೂರ್ಯ ಅವರ ನಾಮಿನೇಷನ್ ಱಲಿಯಲ್ಲಿ ಭಾಗಿಯಾಗುವಂತೆ ಕೇಳಿಕೊಳ್ಳಲಾಗುತ್ತಿದೆ. ಇವು ನಮ್ಮ ಕಾಲೇಜಿನ ವಾಟ್ಸ್ಆ್ಯಪ್ ಗ್ರೂಪ್ಗೆ ಕಳುಹಿಸಿರುವ ಸ್ಕ್ರೀನ್ಶಾಟ್ಸ್ಗಳಾಗಿವೆ. ವಿದ್ಯಾರ್ಥಿ ಪರಿಷತ್ ಅಧ್ಯಕ್ಷರು, ಱಲಿಗೆ ಬರದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೆದರಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಆರೋಪ ಏನು..?
ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ವೈರಲ್ ಆಗ್ತಿದ್ದಂತೆಯೇ, ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಕಡ್ಡಾವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದ್ಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ವಾಟ್ಸ್ಆ್ಯಪ್ ಸಂದೇಶ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.
ಇದನ್ನೂ ಓದಿ: ತೆಲಂಗಾಣದಲ್ಲಿ ಮತ್ತೊಂದು ದುರಂತ; ತೀವ್ರ ಸ್ಫೋಟಕ್ಕೆ ಐವರು ಸ್ಥಳದಲ್ಲೇ ಸಾವು
Hii , this is Jain college student from vv puram Bengaluru. We are being asked to attend tejaswi surya's nomination rally tomorrow. These are the screenshots of messages sent in our college group. The student council president is threatening the consequences if absent. pic.twitter.com/GP5wR2ra1g
— knownGhost (@uniqexplorer99) April 3, 2024
ಇದನ್ನೂ ಓದಿ: RCB ಹುಡುಗರ ಅತೀ ದೊಡ್ಡ ದಾಖಲೆ ಧೂಳಿಪಟ ಮಾಡಿದ ಕೆಕೆಆರ್; ಏನದು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾಲೇಜು ಗ್ರೂಪ್ಗೆ ಹೋಗಿರುವ ಮೆಸ್ಸೇಜ್ನಲ್ಲಿ ಏನಿದೆ..?
knownGhost ಎಂಬ ಟ್ವಿಟರ್ನಲ್ಲಿ ಹಂಚಿಕೊಂಡ ಮಾಹಿತಿ ಏನು?
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಇಂದು ಉಮೇದುವಾರಿಕೆ ಸಲ್ಲಿಸ್ತಿದ್ದಾರೆ. ಇದೇ ಹೊತ್ತಲ್ಲಿ, ಅವರ ಕುರಿತ ವಾಟ್ಸ್ಆ್ಯಪ್ ಚಾಟ್ವೊಂದು ವಿವಾದ ಎಬ್ಬಿಸಿದೆ.
ಏನಿದು ವಿವಾದ..?
ನಿನ್ನೆ ರಾತ್ರಿ 9 ಗಂಟೆ 6 ನಿಮಿಷಕ್ಕೆ knownGhost ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ವಾಟ್ಸ್ಆ್ಯಪ್ ಚಾಟ್ಗಳನ್ನು ಹೊಂದಿರುವ ನಾಲ್ಕು ಫೋಟೋಗಳನ್ನು ಅಪ್ಲೋಡ್ ಮಾಡಲಾಗಿದೆ. ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಜಯನಗರದ ಮೈಯಾಸ್ ಹೋಟೆಲ್ ಬಳಿ ಸೇರಬೇಕು. ಅಲ್ಲಿ ನಿಮಗೆ ಟಿ-ಶರ್ಟ್ ನೀಡಲಾಗುವುದು, ತಡ ಮಾಡಬಾರದು. ಕಡ್ಡಾಯವಾಗಿ ಇದರಲ್ಲಿ ಭಾಗವಹಿಸಬೇಕು. ಯಾವುದೇ ವಿನಾಯಿತಿಯನ್ನು ನೀಡಲಾಗುವುದಿಲ್ಲ. ಇದಕ್ಕಾಗಿ ನೀವು ಹಾಜರಾತಿ ಪಡೆಯುತ್ತೀರಿ ಎಂದಿರುವ ಮೆಸೇಜ್ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ: 10, 20 ಕೋಟಿ ಅಲ್ಲವೇ ಅಲ್ಲ.. ಕರ್ನಾಟಕದ ಈ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 98.52 ಕೋಟಿ ಮೌಲ್ಯದ ಮದ್ಯ ಜಪ್ತಿ..!
ಈ ವಿಚಾರಗಳನ್ನು ಪೋಸ್ಟ್ ಮಾಡಿರುವ knownGhost, ಹಾಯ್, ಇದು ಬೆಂಗಳೂರಿನ ವಿವಿರಂನ ಜೈನ್ ಕಾಲೇಜಿನ ವಿದ್ಯಾರ್ಥಿ. ನಮಗೆ ತೇಜಸ್ವಿ ಸೂರ್ಯ ಅವರ ನಾಮಿನೇಷನ್ ಱಲಿಯಲ್ಲಿ ಭಾಗಿಯಾಗುವಂತೆ ಕೇಳಿಕೊಳ್ಳಲಾಗುತ್ತಿದೆ. ಇವು ನಮ್ಮ ಕಾಲೇಜಿನ ವಾಟ್ಸ್ಆ್ಯಪ್ ಗ್ರೂಪ್ಗೆ ಕಳುಹಿಸಿರುವ ಸ್ಕ್ರೀನ್ಶಾಟ್ಸ್ಗಳಾಗಿವೆ. ವಿದ್ಯಾರ್ಥಿ ಪರಿಷತ್ ಅಧ್ಯಕ್ಷರು, ಱಲಿಗೆ ಬರದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೆದರಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಆರೋಪ ಏನು..?
ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ವೈರಲ್ ಆಗ್ತಿದ್ದಂತೆಯೇ, ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಕಡ್ಡಾವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದ್ಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ವಾಟ್ಸ್ಆ್ಯಪ್ ಸಂದೇಶ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.
ಇದನ್ನೂ ಓದಿ: ತೆಲಂಗಾಣದಲ್ಲಿ ಮತ್ತೊಂದು ದುರಂತ; ತೀವ್ರ ಸ್ಫೋಟಕ್ಕೆ ಐವರು ಸ್ಥಳದಲ್ಲೇ ಸಾವು
Hii , this is Jain college student from vv puram Bengaluru. We are being asked to attend tejaswi surya's nomination rally tomorrow. These are the screenshots of messages sent in our college group. The student council president is threatening the consequences if absent. pic.twitter.com/GP5wR2ra1g
— knownGhost (@uniqexplorer99) April 3, 2024
ಇದನ್ನೂ ಓದಿ: RCB ಹುಡುಗರ ಅತೀ ದೊಡ್ಡ ದಾಖಲೆ ಧೂಳಿಪಟ ಮಾಡಿದ ಕೆಕೆಆರ್; ಏನದು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ