ಹೆಣ್ಮಕ್ಕಳಿಗೆ ಅಶ್ಲೀಲ ಮೆಸೇಜ್‌ ವಿರುದ್ಧ ಶಿವಣ್ಣ ಆಕ್ರೋಶ.. ರಮ್ಯಾ ಪರ ನಿಂತು ಏನಂದ್ರು ಹ್ಯಾಟ್ರಿಕ್ ಹೀರೋ..?

author-image
Ganesh
Updated On
ಹೆಣ್ಮಕ್ಕಳಿಗೆ ಅಶ್ಲೀಲ ಮೆಸೇಜ್‌ ವಿರುದ್ಧ ಶಿವಣ್ಣ ಆಕ್ರೋಶ.. ರಮ್ಯಾ ಪರ ನಿಂತು ಏನಂದ್ರು ಹ್ಯಾಟ್ರಿಕ್ ಹೀರೋ..?
Advertisment
  • ಅಶ್ಲೀಲ ಮೆಸೇಜ್‌ ವಾರ್‌ನಲ್ಲಿ ರಮ್ಯಾ ಪರ ನಿಂತ ಶಿವಣ್ಣ
  • ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ
  • ಯಾವ ಮಹಿಳೆಯ ವಿರುದ್ಧವೂ ಈ ರೀತಿ ಮಾತು ಸರಿಯಲ್ಲ-ಶಿವಣ್ಣ

ಬೆಂಗಳೂರು: ನಟಿ ರಮ್ಯಾ ಬೆಂಬಲಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಂದಿದ್ದಾರೆ. ರಮ್ಯಾ ಪರ ಶಿವಣ್ಣ ಮತ್ತು ಗೀತಾ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಅದನ್ನು ರಮ್ಯಾ ಅವರು ಶೇರ್ ಮಾಡಿದ್ದಾರೆ. ನಿನ್ನೆಯಷ್ಟೇ ಡಾ.ರಾಜ್ ಕುಟುಂಬದ ವಿನಯ್ ರಾಜ್​​ಕುಮಾರ್​​ ರಮ್ಯಾಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದೀಗ ಶಿವಣ್ಣ ದಂಪತಿ ಕೂಡ ರಮ್ಯಾ ಪರ ಬ್ಯಾಟ್ ಬೀಸಿದ್ದಾರೆ.

ಇದನ್ನೂ ಓದಿ: ಐ ಲವ್​ ಯೂ ಹೇಳೋದ್ರಲ್ಲಿ ತಪ್ಪಿಲ್ಲ -ಪೋಕ್ಸೋ ಕೇಸ್​​ಗೆ ಸಂಬಂಧಿಸಿ ಹೈಕೋರ್ಟ್​ನಿಂದ ಮಹತ್ವದ ತೀರ್ಪು

ಶಿವಣ್ಣ ಹೇಳಿದ್ದೇನು..?

ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು.

ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟ ಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ.

ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು.

ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ.

ಇಂತಿ,

ಶಿವರಾಜ್‌ಕುಮಾರ್
ಗೀತಾ ಶಿವರಾಜ್‌ಕುಮಾರ್

ಏನಿದು ಪ್ರಕರಣ..

ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕೋರ್ಟ್, ವಾದ ಪ್ರತಿವಾದವನ್ನು ಪೂರ್ಣಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ವಿಚಾರಣೆ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಿತ್ತು. ಸುಪ್ರೀಂ ಕೋರ್ಟ್​ನ ಅಭಿಪ್ರಾಯ ಪ್ರಸ್ತಾಪಿಸಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು.

ಇದನ್ನೂ ಓದಿ: ಪಂತ್ ಭಾವುಕ ಸಂದೇಶ.. ಟೆಸ್ಟ್​​ನಿಂದ ಹೊರಬಿದ್ದ ಬೆನ್ನಲ್ಲೇ ತಂಡಕ್ಕೆ ಬಿಗ್ ಮೆಸೇಜ್..!

ಅದರಲ್ಲಿ ರಮ್ಯಾ ಅವರು ಹೀಗೆ ಬರೆದಿದ್ದರು, ಏನೆಂದರೆ.. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ಬರೆದುಕೊಂಡಿದ್ದರು. ಆ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳು ಸೋಷಿಯಲ್​ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟದಾಗಿ ಕಾಮೆಂಟ್ಸ್​ ಮಾಡಿದ್ದರು. ಇದರಿಂದ ಕೆರಳಿರುವ ರಮ್ಯಾ, ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದರು. ಅಷ್ಟಕ್ಕೂ ಸುಮ್ಮನಾಗದ ಅವರು, ನಿನ್ನೆ ಬೆಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ನಡೆಸ್ತಿದ್ದಾರೆ.

ಇದನ್ನೂ ಓದಿ: ದರ್ಶನ್ ಅಭಿಮಾನಿಗಳ ವಿರುದ್ಧದ ತನಿಖೆ ಹೇಗೆ ನಡೆಯುತ್ತದೆ? ಕಮಿಷನರ್ ಹೇಳಿದ್ದೇನು..?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment