4 ರಿಂದ 5 ಸಾವಿರ ಹಣ ಪಡೆದುಕೊಂಡಿದ್ದ ವಂಚಕ ಪುಟ್ಟಸ್ವಾಮಿ
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ವಿಚಾರ ತಿಳಿಯುತ್ತಿದ್ದಂತೆ ಚೀಟಿ ಹಾಕಿದ್ದ ಸಾವಿರಾರು ಜನ ಕಂಗಾಲು
ಬೆಂಗಳೂರು: ಯುಗಾದಿ ಹಬ್ಬದ ಹಿನ್ನೆಲೆ ಗುಡ್ಡೆ ಮಾಂಸಕ್ಕಾಗಿ ಚೀಟಿ ಹಾಕಿದ್ದ ಸಾವಿರಾರು ಜನ ಮೋಸ ಹೋಗಿರೋ ಘಟನೆ ಬೆಳಕಿಗೆ ಬಂದಿದೆ. ಯುಗಾದಿ ಹಬ್ಬದ ಮಾಂಸದ ಚೀಟಿ ಹಾಕಿದವರಿಗೆ ಪಂಗನಾಮ ಹಾಕಿ ವ್ಯಕ್ತಿಯೊಬ್ಬ ರಾತ್ರೋರಾತ್ರಿ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಈ ಘಟನೆ ಗಿರಿನಗರದಲ್ಲಿ ನಡೆದಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಒಂದು ವಾರ ಭೀಕರ ಬಿಸಿಲು; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆಯೇನು?
ಪುಟ್ಟಸ್ವಾಮಿ ಎಂಬಾತ ಕಳೆದ ಎರಡು ವರ್ಷಗಳಿಂದ ಯುಗಾದಿ ಚೀಟಿ ನಡೆಸುತ್ತಿದ್ದ. ಈ ಬಾರಿ ಚೀಟಿ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಪ್ರತಿಯೊಬ್ಬರ ಬಳಿ 4 ರಿಂದ 5 ಸಾವಿರ ಹಣ ಪಡೆದುಕೊಂಡಿದ್ದ. ಯುಗಾದಿ ಹಬ್ಬಕ್ಕೆ ದುಡ್ಡು ಒಂದೇ ಸರಿ ಹೊಂದಿಸೋಕೆ ಆಗಲ್ಲ ಅಂತ ಚೀಟಿ ಸಾಕಷ್ಟು ಜನರು ಚೀಟಿ ಹಾಕಿದ್ದರು. ಇನ್ನೇನು ಯುಗಾದಿ ಹತ್ತಿರ ಬರುತ್ತಿದ್ದಂತೆ ಎಲ್ಲರಿಗೂ ಮೋಸ ಮಾಡಿ ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಮೋಸ ಹೋದವರೆಲ್ಲ ಆತನ ಮನೆ ಮುಂದೆ ಜಮಾಯಿಸಿದ್ದಾರೆ. ಚೀಟಿ ಹಾಕಿದ್ದ ಜನರಿಗೆ ಈಗ ದಿಕ್ಕೇ ತೋಚದಂತೆ ಆಗಿದೆ. ಈ ಸಂಬಂಧ ಬ್ಯಾಟರರಾಯನಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
4 ರಿಂದ 5 ಸಾವಿರ ಹಣ ಪಡೆದುಕೊಂಡಿದ್ದ ವಂಚಕ ಪುಟ್ಟಸ್ವಾಮಿ
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ವಿಚಾರ ತಿಳಿಯುತ್ತಿದ್ದಂತೆ ಚೀಟಿ ಹಾಕಿದ್ದ ಸಾವಿರಾರು ಜನ ಕಂಗಾಲು
ಬೆಂಗಳೂರು: ಯುಗಾದಿ ಹಬ್ಬದ ಹಿನ್ನೆಲೆ ಗುಡ್ಡೆ ಮಾಂಸಕ್ಕಾಗಿ ಚೀಟಿ ಹಾಕಿದ್ದ ಸಾವಿರಾರು ಜನ ಮೋಸ ಹೋಗಿರೋ ಘಟನೆ ಬೆಳಕಿಗೆ ಬಂದಿದೆ. ಯುಗಾದಿ ಹಬ್ಬದ ಮಾಂಸದ ಚೀಟಿ ಹಾಕಿದವರಿಗೆ ಪಂಗನಾಮ ಹಾಕಿ ವ್ಯಕ್ತಿಯೊಬ್ಬ ರಾತ್ರೋರಾತ್ರಿ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಈ ಘಟನೆ ಗಿರಿನಗರದಲ್ಲಿ ನಡೆದಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಒಂದು ವಾರ ಭೀಕರ ಬಿಸಿಲು; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆಯೇನು?
ಪುಟ್ಟಸ್ವಾಮಿ ಎಂಬಾತ ಕಳೆದ ಎರಡು ವರ್ಷಗಳಿಂದ ಯುಗಾದಿ ಚೀಟಿ ನಡೆಸುತ್ತಿದ್ದ. ಈ ಬಾರಿ ಚೀಟಿ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಪ್ರತಿಯೊಬ್ಬರ ಬಳಿ 4 ರಿಂದ 5 ಸಾವಿರ ಹಣ ಪಡೆದುಕೊಂಡಿದ್ದ. ಯುಗಾದಿ ಹಬ್ಬಕ್ಕೆ ದುಡ್ಡು ಒಂದೇ ಸರಿ ಹೊಂದಿಸೋಕೆ ಆಗಲ್ಲ ಅಂತ ಚೀಟಿ ಸಾಕಷ್ಟು ಜನರು ಚೀಟಿ ಹಾಕಿದ್ದರು. ಇನ್ನೇನು ಯುಗಾದಿ ಹತ್ತಿರ ಬರುತ್ತಿದ್ದಂತೆ ಎಲ್ಲರಿಗೂ ಮೋಸ ಮಾಡಿ ರಾತ್ರೋ ರಾತ್ರಿ ಮನೆ ಖಾಲಿ ಮಾಡಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಮೋಸ ಹೋದವರೆಲ್ಲ ಆತನ ಮನೆ ಮುಂದೆ ಜಮಾಯಿಸಿದ್ದಾರೆ. ಚೀಟಿ ಹಾಕಿದ್ದ ಜನರಿಗೆ ಈಗ ದಿಕ್ಕೇ ತೋಚದಂತೆ ಆಗಿದೆ. ಈ ಸಂಬಂಧ ಬ್ಯಾಟರರಾಯನಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ