ವಾಲ್ಮೀಕಿ ನಿಗಮ ಹಗರಣದ ಆರೋಪದಲ್ಲಿ ಬಂಧನದ ಭೀತಿ
ಎರಡು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದರು
ವಿಧಾನಸೌಧಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಜೊತೆ ಚರ್ಚೆ
ವಾಲ್ಮೀಕಿ ನಿಗಮ ಹಗರಣದ ಆರೋಪದಲ್ಲಿ ಇ.ಡಿ ವಿಚಾರಣೆಯನ್ನು ಎದುರಿಸಿರುವ ರಾಯಚೂರು ಗ್ರಾಮೀಣ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರು ಕಳೆದ ಎರಡು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದರು. ಇಂದು ವಿಧಾನಸಭೆ ಅಧಿವೇಶನಕ್ಕೆ ಬಸನಗೌಡ ದದ್ದಲ್ ಅವರು ಹಾಜರಾಗಿ ಅಚ್ಚರಿ ಮೂಡಿಸಿದ್ದಾರೆ.
ಇ.ಡಿ ಬಂಧನದ ಆತಂಕದಲ್ಲಿರುವ ಬಸನಗೌಡ ದದ್ದಲ್ ಅವರು ಎಲ್ಲೂ ಕಾಣಿಸಿಕೊಳ್ಳದೆ ದೂರ ಉಳಿದಿದ್ದರು. ಇದೀಗ ವಿಧಾನಸೌಧಕ್ಕೆ ಆಗಮಿಸಿದ ದದ್ದಲ್ ಅವರು ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಬಸನಗೌಡ ದದ್ದಲ್ ಅವರು ಸ್ಪೀಕರ್ ಯು.ಟಿ ಖಾದರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ.
ಇದನ್ನೂ ಓದಿ: ಪ್ಲೀಸ್ ನನ್ನ ಬಂಧಿಸಿ.. ED ಕಣ್ತಪ್ಪಿಸಿ SITಗೆ ಓಡೋಡಿ ಬಂದ ಶಾಸಕ ಬಸನಗೌಡ ದದ್ದಲ್; ಅಸಲಿ ಕಾರಣವೇನು?
ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಬಸನಗೌಡ ದದ್ದಲ್ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಸನಗೌಡ ದದ್ದಲ್ ಅವರು ನಾನು ಎರಡು ದಿನ ಊರಿಗೆ ಹೋಗಿದ್ದೆ. ನಾನು ಎಲ್ಲೂ ನಾಪತ್ತೆಯಾಗಿಲ್ಲ. ಇವತ್ತು ಕಲಾಪಕ್ಕೆ ಬಂದಿದ್ದೇನೆ. ನನಗೆ ಯಾವುದೇ ಇ.ಡಿ ನೋಟಿಸ್ ತಲುಪಿಲ್ಲ. ನಾನು ಯಾವುದೇ ರೀತಿಯ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಅಧಿವೇಶನಕ್ಕಾಗಿ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗ್ಗೆ ವಿಧಾನಮಂಡಲ ಅಧಿವೇಶನಕ್ಕೆ ಆಗಮಿಸಿದ್ದ ಬಸನಗೌಡ ದದ್ದಲ್ ಅವರು ಮಧ್ಯಾಹ್ನ ವಿಧಾನಸೌಧದಿಂದ ತೆರಳಿರುವ ಸಾಧ್ಯತೆ ಇದೆ. ಅಧಿವೇಶನಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳ ಕಣ್ತಪ್ಪಿಸಿ ಓಡಾಡಲು ಪ್ರಯತ್ನಿಸಿದ್ದರು. ಶಾಸಕರ ಮುಂದೆ ಮಾನಸಿಕ ಹಿಂಸೆ ಆಗಿದೆ ಎಂದು ತಮ್ಮ ನೋವು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಾಲ್ಮೀಕಿ ನಿಗಮ ಹಗರಣದ ಆರೋಪದಲ್ಲಿ ಬಂಧನದ ಭೀತಿ
ಎರಡು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದರು
ವಿಧಾನಸೌಧಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಜೊತೆ ಚರ್ಚೆ
ವಾಲ್ಮೀಕಿ ನಿಗಮ ಹಗರಣದ ಆರೋಪದಲ್ಲಿ ಇ.ಡಿ ವಿಚಾರಣೆಯನ್ನು ಎದುರಿಸಿರುವ ರಾಯಚೂರು ಗ್ರಾಮೀಣ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರು ಕಳೆದ ಎರಡು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿದ್ದರು. ಇಂದು ವಿಧಾನಸಭೆ ಅಧಿವೇಶನಕ್ಕೆ ಬಸನಗೌಡ ದದ್ದಲ್ ಅವರು ಹಾಜರಾಗಿ ಅಚ್ಚರಿ ಮೂಡಿಸಿದ್ದಾರೆ.
ಇ.ಡಿ ಬಂಧನದ ಆತಂಕದಲ್ಲಿರುವ ಬಸನಗೌಡ ದದ್ದಲ್ ಅವರು ಎಲ್ಲೂ ಕಾಣಿಸಿಕೊಳ್ಳದೆ ದೂರ ಉಳಿದಿದ್ದರು. ಇದೀಗ ವಿಧಾನಸೌಧಕ್ಕೆ ಆಗಮಿಸಿದ ದದ್ದಲ್ ಅವರು ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಬಸನಗೌಡ ದದ್ದಲ್ ಅವರು ಸ್ಪೀಕರ್ ಯು.ಟಿ ಖಾದರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ.
ಇದನ್ನೂ ಓದಿ: ಪ್ಲೀಸ್ ನನ್ನ ಬಂಧಿಸಿ.. ED ಕಣ್ತಪ್ಪಿಸಿ SITಗೆ ಓಡೋಡಿ ಬಂದ ಶಾಸಕ ಬಸನಗೌಡ ದದ್ದಲ್; ಅಸಲಿ ಕಾರಣವೇನು?
ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಬಸನಗೌಡ ದದ್ದಲ್ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಸನಗೌಡ ದದ್ದಲ್ ಅವರು ನಾನು ಎರಡು ದಿನ ಊರಿಗೆ ಹೋಗಿದ್ದೆ. ನಾನು ಎಲ್ಲೂ ನಾಪತ್ತೆಯಾಗಿಲ್ಲ. ಇವತ್ತು ಕಲಾಪಕ್ಕೆ ಬಂದಿದ್ದೇನೆ. ನನಗೆ ಯಾವುದೇ ಇ.ಡಿ ನೋಟಿಸ್ ತಲುಪಿಲ್ಲ. ನಾನು ಯಾವುದೇ ರೀತಿಯ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಅಧಿವೇಶನಕ್ಕಾಗಿ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗ್ಗೆ ವಿಧಾನಮಂಡಲ ಅಧಿವೇಶನಕ್ಕೆ ಆಗಮಿಸಿದ್ದ ಬಸನಗೌಡ ದದ್ದಲ್ ಅವರು ಮಧ್ಯಾಹ್ನ ವಿಧಾನಸೌಧದಿಂದ ತೆರಳಿರುವ ಸಾಧ್ಯತೆ ಇದೆ. ಅಧಿವೇಶನಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳ ಕಣ್ತಪ್ಪಿಸಿ ಓಡಾಡಲು ಪ್ರಯತ್ನಿಸಿದ್ದರು. ಶಾಸಕರ ಮುಂದೆ ಮಾನಸಿಕ ಹಿಂಸೆ ಆಗಿದೆ ಎಂದು ತಮ್ಮ ನೋವು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ