/newsfirstlive-kannada/media/post_attachments/wp-content/uploads/2024/04/Prajwal-Revanna-1-1.jpg)
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ (ಜುಲೈ 30) ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಲಿದೆ.
ಈ ತೀರ್ಪು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧರಿಸುವುದರಿಂದ ಭಾರಿ ಮಹತ್ವ ಪಡೆದುಕೊಂಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು 4 ಕೇಸ್ಗಳಿವೆ. ಈ ನಾಲ್ಕು ಕೇಸ್ಗಳ ಪೈಕಿ ಈಗ ಮೊದಲ ಕೇಸ್ ತೀರ್ಪು ಪ್ರಕಟವಾಗುತ್ತಿದೆ. ಈ ಕೇಸ್ನಲ್ಲಿ ಈಗಾಗಲೇ ವಾದ- ಪ್ರತಿವಾದ ಮುಗಿದಿದ್ದು, ಸಾಕ್ಷ್ಯಗಳ ವಿಚಾರಣೆ ಕೂಡ ಮುಗಿದಿದೆ.
ಹೀಗಾಗಿ ಕಾಯ್ದಿರಿಸಿರುವ ಕೇಸ್ ತೀರ್ಪು ಅನ್ನು ನಾಳೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಲಿದೆ. ನಾಳೆ ಪ್ರಜ್ವಲ್ ಈ ಕೇಸ್ನಲ್ಲಿ ಅಪರಾಧಿಯೋ ಅಥವಾ ಅಲ್ಲವೋ ಎಂದು ಕೋರ್ಟ್ ಮೊದಲಿಗೆ ತೀರ್ಪು ನೀಡಲಿದೆ. ಒಂದು ವೇಳೆ ಅಪರಾಧಿ ಎಂದು ತೀರ್ಪು ನೀಡಿದರೇ, ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುತ್ತೆ. ಶಿಕ್ಷೆಯ ಪ್ರಮಾಣದ ಬಗ್ಗೆ ವಾದ- ಪ್ರತಿವಾದ ನಡೆಯಲಿದೆ. ಗರಿಷ್ಠ ಶಿಕ್ಷೆಯನ್ನು ವಿಧಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ವಾದ ಮಂಡಿಸಲಿದ್ದಾರೆ. ಕಡಿಮೆ ಶಿಕ್ಷೆ ವಿಧಿಸಬೇಕೆಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಪ್ರತಿವಾದ ಮಂಡಿಸುವರು.
ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಮೇಲೆ ಎಷ್ಟು ಕೇಸ್ಗಳಿವೆ.. ಬೇಲ್ ಅರ್ಜಿ ವಜಾಕ್ಕೆ ಕೋರ್ಟ್ ಕೊಟ್ಟ ಕಾರಣವೇನು?
ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆ ಕೊಟ್ಟ ಹೇಳಿಕೆ ನೀಡಿದ್ದಾರೆ. ಜೊತೆಗೆ ಪ್ರಜ್ವಲ್ ತಾನೇ ಚಿತ್ರೀಕರಿಸಿಕೊಂಡಿದ್ದ ವಿಡಿಯೋ, ಪೋಟೋಗಳು ಕೂಡ ಸಾಕ್ಷ್ಯಗಳಾಗಿವೆ. ಪ್ರಜ್ವಲ್ ಮಾಜಿ ಕಾರ್ ಚಾಲಕ ಕಾರ್ತಿಕ್ ಕೂಡ ಈ ಕೇಸ್ನಲ್ಲಿ ಸಾಕ್ಷಿ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಕುಡಿಯೊಂದು ಕ್ರಿಮಿನಲ್ ರೇಪ್ ಕೇಸ್ನಲ್ಲಿ ಅಪರಾಧಿಯಾಗುತ್ತೋ, ಇಲ್ಲವೋ ಅನ್ನೋದು ನಾಳೆ ನಿರ್ಧಾರವಾಗಲಿದೆ.
ಪ್ರಜ್ವಲ್ ರೇವಣ್ಣಗೆ ನಾಲ್ಕು ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲುಶಿಕ್ಷೆಯಾದರೇ, ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ, ಆದಾದ ನಂತರ 6 ವರ್ಷಗಳವರೆಗೂ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಹೀಗಾಗಿ ನಾಳೆ ಪ್ರಜ್ವಲ್ ಅಪರಾಧಿಯಾಗ್ತಾರೋ, ಖುಲಾಸೆಯಾಗ್ತಾರೋ ಎಂಬುದರ ಮೇಲೆ ಅವರ ರಾಜಕೀಯ ಭವಿಷ್ಯ ನಿಂತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ