Advertisment

ನಾಳೆ ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

author-image
Ganesh Nachikethu
Updated On
ಬೆಂಗಳೂರಲ್ಲಿ ಮತ್ತೆ ವರುಣನ ಅಬ್ಬರ.. ನಾಳೆಯಿಂದ 5 ದಿನ ಮಳೆಯ ಎಚ್ಚರಿಕೆ; ಹವಾಮಾನ ಇಲಾಖೆ ಹೇಳಿದ್ದೇನು?
Advertisment
  • ಕಳೆದೊಂದು ವಾರದಿಂದ ರಾಜ್ಯದಲ್ಲಿ ಚಳಿ ಪ್ರಮಾಣ ಕಡಿಮೆ
  • ಫೆಬ್ರವರಿ ಮೊದಲ ವಾರದಲ್ಲೇ ಭರ್ಜರಿ ಮಳೆ ಮುನ್ಸೂಚನೆ!
  • ನಾಳೆಯೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ಚಳಿ ಪ್ರಮಾಣ ಕಡಿಮೆ ಆಗುತ್ತಿದೆ. ಇದರ ಮಧ್ಯೆ ಫೆಬ್ರವರಿ ಮೊದಲ ವಾರದಲ್ಲೇ ಭರ್ಜರಿ ಮಳೆ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

Advertisment

ಇಷ್ಟೇ ಅಲ್ಲ, ನಾಳೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಚಳಿ ಜತೆಗೆ ತೀವ್ರವಾಗಿ ಮಳೆ ಆಗಲಿದೆ. ಹಾಗೆಯೇ ಫೆಬ್ರವರಿ 1 ಮತ್ತು 2ನೇ ತಾರೀಖು ರಾಜ್ಯದ ಹಲವು ಭಾಗಗಳಲ್ಲಿ ಮಳೆ ಬೀಳಲಿದೆ ಎಂದು ಹವಮಾನ ಇಲಾಖೆ ಭವಿಷ್ಯ ನುಡಿದಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?

ನಾಳೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಇರಲಿದೆ. ಹಾಗೆಯೇ ಮಳೆಯೊಂದಿಗೆ ಭೀಕರ ಚಳಿ ಇರಲಿದೆ. ಕರ್ನಾಟಕದ ಹಲವೆಡೆ ಫೆಬ್ರವರಿ 1ರಂದು ಭಾರೀ ಮಳೆ ಬೀಳುವ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಲ್ಲಿ ಭರ್ಜರಿ ಮಳೆ

ಇನ್ನು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಭಾಗಗಳಲ್ಲಿ ಮಳೆ ಜೋರಾಗಿರಲಿದೆ. ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆಯಲ್ಲೂ ಮಳೆ ಹೆಚ್ಚಾಗಿರಲಿದೆ.

Advertisment

ರಾಮನಗರ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆ ಆಗಲಿದೆ.

ಇದನ್ನೂ ಓದಿ:ಹಾರ್ದಿಕ್​​ ಪಾಂಡ್ಯಗೆ ಬಿಗ್​ ಶಾಕ್​ ಕೊಟ್ಟ ಬಿಸಿಸಿಐ; ಟೀಮ್​ ಇಂಡಿಯಾದಿಂದಲೇ ಔಟ್​

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment
Advertisment
Advertisment
Advertisment