ಮನೆಗೆ ನುಗ್ಗಿ ಮಾಜಿ ಸಚಿವನ ಕಾರು ಕದ್ದ ಕಳ್ಳರು
ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳರ ಕರಾಮತ್ತು
ಇನ್ನೋವಾ ಕರು ಎಗರಿಸಿ ಪರಾರಿಯಾದ ಕಳ್ಳರು
ಮೈಸೂರು: ಮಾಜಿ ಸಚಿವ ಕೋಟೆ ಶಿವಣ್ಣ ಅವರ ಐಷಾರಾಮಿ ಕಾರನ್ನ ಕಳ್ಳರು ಕಳ್ಳತನ ಮಾಡಿದ ಘಟನೆ ಮೈಸೂರಿನ ವಿಜಯನಗರ ಮೂರನೇ ಹಂತದಲ್ಲಿ ನಡೆದಿದೆ. ಮುಸುಕು ಹಾಕಿಕೊಂಡು ಬಂದು ಕಳ್ಳರು ಕಾರನ್ನು ಎಗರಿಸಿದ್ದಾರೆ
ಜೂನ್ 6ರಂದು ಕಳ್ಳರು ಕೋಟೆ ಶಿವಣ್ಣ ಅವರ ಮನೆಗೆ ನುಗ್ಗಿದ್ದು, ಇನ್ನೋವಾ ಕಾರನ್ನ ಖದೀಮರು ಕದ್ದೊಯ್ದಿದ್ದಾರೆ. ಮಧ್ಯರಾತ್ರಿ 1 ಗಂಟೆಗೆ ಬಂದು ಕಳ್ಳತನ ಮಾಡಿದ್ದಾರೆ.
ಕಳ್ಳರು ಕಾಂಪೌಂಡ್ ಹಾರಿ ಬಂದು ಬಳಿಕ ಮನೆಯಲ್ಲಿ ಕೀ ಎಗರಿಸಿ ಕಾರು ಕದ್ದಿದ್ದಾರೆ. ಕಳ್ಳರು ಶಿವಣ್ಣ ಅವರ ಮನೆಗೆ ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಕಳ್ಳತನ ದ ಬಳಿಕ ಕೋಟೆ ಶಿವಣ್ಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಾಜಿ ಸಚಿವ ಕೋಟೆ ಶಿವಣ್ಣ ಅವರು ಕಾರು ಕಳ್ಳತನದ ಬಗ್ಗೆ ಮಾತನಾಡಿದ್ದು, ‘ಕಾರು ಕದ್ದವನು ಮತ್ತೆ ಬಂದು ಫೈಲ್ ಬಿಟ್ಟು ಹೋಗಿದ್ದಾನೆ. 20 ವರ್ಷದಲ್ಲಿ ಇಂತಹ ಘಟನೆ ನನಗೆ ಆಗಿರಲಿಲ್ಲ. ಜೂನ್ 5 ರಂದು ಹೆಚ್ಡಿ.ಕೋಟೆಗೆ ಹೋಗಿ ಬಂದು ರಾತ್ರಿ 8 ಗಂಟೆಗೆ ಕಾರು ನಿಲ್ಲಿಸಿದ್ದೆ. ಈ ರಸ್ತೆಯಲ್ಲಿ ನೂರಾರು ಕಾರುಗಳು ನಿಲ್ಲುತ್ತವೆ‘ ಎಂದಿದ್ದಾರೆ.
ನಂತರ ಮಾತು ಮುಂದುವರಿಸಿದ ಅವರು ‘ಜೂನ್ 5 ಸಂಜೆ ಕಾರು ನಿಲ್ಲಿಸಿ ಡ್ರೈವರ್ ಕೀ ಕೊಟ್ಟು ಹೋಗಿದ್ದ. ಮಾರನೇ ದಿನ ಬೆಳಿಗ್ಗೆ ಕಾರು ನೋಡಿದರೆ ಕಾಣಲಿಲ್ಲ. ಮನೆಯವರನ್ನು ವಿಚಾರಿಸಿದೆ. ಯಾರೂ ತೆಗೆದುಕೊಂಡು ಹೋಗಿರಲಿಲ್ಲ. ತಕ್ಷಣ ಪೊಲೀಸ್ ಕಮೀಷನರ್ ಗೆ ಹೇಳಿದೆ. ತಕ್ಷಣ ಪೊಲೀರು ಬಂದು ಪರಿಶೀಲನೆ ಮಾಡಿದರು. ಸಿಸಿ.ಟಿವಿ ನೋಡಿದಾಗ ಮಧ್ಯರಾತ್ರಿ 1 ಗಂಟೆಗೆ ಕಾರು ಕಳ್ಳತನ ಆಗಿರೋದು ಗೊತ್ತಾಗಿದೆ. ಆತ ಕಾಂಪೌಂಡ್ ಹಾರಿ ಬಂದಿದ್ದಾನೆ. ಆತನ ಹಿಂದೆ ಯಾರೋ ಸೇರಿಕೊಂಡು ವ್ಯವಸ್ಥಿತಿವಾಗಿ ಕಳ್ಳತನ ಮಾಡಿದ್ದಾರೆ. ಕಾರು ಕದ್ದವನು ಮತ್ತೆ ಬಂದು ಫೈಲ್ ಗಳು ಹಾಗೂ ಗಣಪತಿ ವಿಗ್ರಹ ಇಟ್ಟು ಹೋಗಿದ್ದಾನೆ. ಕೆಲವು ದಿನಗಳ ಹಿಂದೆ ಇದೇ ರೀತಿ ಕಾರು ಕಳ್ಳತನ ಆಗಿದೆ. ಮಾಜಿ ಮಂತ್ರಿಗೆ ಈ ರೀತಿ ಆದರೆ ಜನ ಸಾಮಾನ್ಯರ ಗತಿ ಏನು?’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮನೆಗೆ ನುಗ್ಗಿ ಮಾಜಿ ಸಚಿವನ ಕಾರು ಕದ್ದ ಕಳ್ಳರು
ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳರ ಕರಾಮತ್ತು
ಇನ್ನೋವಾ ಕರು ಎಗರಿಸಿ ಪರಾರಿಯಾದ ಕಳ್ಳರು
ಮೈಸೂರು: ಮಾಜಿ ಸಚಿವ ಕೋಟೆ ಶಿವಣ್ಣ ಅವರ ಐಷಾರಾಮಿ ಕಾರನ್ನ ಕಳ್ಳರು ಕಳ್ಳತನ ಮಾಡಿದ ಘಟನೆ ಮೈಸೂರಿನ ವಿಜಯನಗರ ಮೂರನೇ ಹಂತದಲ್ಲಿ ನಡೆದಿದೆ. ಮುಸುಕು ಹಾಕಿಕೊಂಡು ಬಂದು ಕಳ್ಳರು ಕಾರನ್ನು ಎಗರಿಸಿದ್ದಾರೆ
ಜೂನ್ 6ರಂದು ಕಳ್ಳರು ಕೋಟೆ ಶಿವಣ್ಣ ಅವರ ಮನೆಗೆ ನುಗ್ಗಿದ್ದು, ಇನ್ನೋವಾ ಕಾರನ್ನ ಖದೀಮರು ಕದ್ದೊಯ್ದಿದ್ದಾರೆ. ಮಧ್ಯರಾತ್ರಿ 1 ಗಂಟೆಗೆ ಬಂದು ಕಳ್ಳತನ ಮಾಡಿದ್ದಾರೆ.
ಕಳ್ಳರು ಕಾಂಪೌಂಡ್ ಹಾರಿ ಬಂದು ಬಳಿಕ ಮನೆಯಲ್ಲಿ ಕೀ ಎಗರಿಸಿ ಕಾರು ಕದ್ದಿದ್ದಾರೆ. ಕಳ್ಳರು ಶಿವಣ್ಣ ಅವರ ಮನೆಗೆ ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಕಳ್ಳತನ ದ ಬಳಿಕ ಕೋಟೆ ಶಿವಣ್ಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಾಜಿ ಸಚಿವ ಕೋಟೆ ಶಿವಣ್ಣ ಅವರು ಕಾರು ಕಳ್ಳತನದ ಬಗ್ಗೆ ಮಾತನಾಡಿದ್ದು, ‘ಕಾರು ಕದ್ದವನು ಮತ್ತೆ ಬಂದು ಫೈಲ್ ಬಿಟ್ಟು ಹೋಗಿದ್ದಾನೆ. 20 ವರ್ಷದಲ್ಲಿ ಇಂತಹ ಘಟನೆ ನನಗೆ ಆಗಿರಲಿಲ್ಲ. ಜೂನ್ 5 ರಂದು ಹೆಚ್ಡಿ.ಕೋಟೆಗೆ ಹೋಗಿ ಬಂದು ರಾತ್ರಿ 8 ಗಂಟೆಗೆ ಕಾರು ನಿಲ್ಲಿಸಿದ್ದೆ. ಈ ರಸ್ತೆಯಲ್ಲಿ ನೂರಾರು ಕಾರುಗಳು ನಿಲ್ಲುತ್ತವೆ‘ ಎಂದಿದ್ದಾರೆ.
ನಂತರ ಮಾತು ಮುಂದುವರಿಸಿದ ಅವರು ‘ಜೂನ್ 5 ಸಂಜೆ ಕಾರು ನಿಲ್ಲಿಸಿ ಡ್ರೈವರ್ ಕೀ ಕೊಟ್ಟು ಹೋಗಿದ್ದ. ಮಾರನೇ ದಿನ ಬೆಳಿಗ್ಗೆ ಕಾರು ನೋಡಿದರೆ ಕಾಣಲಿಲ್ಲ. ಮನೆಯವರನ್ನು ವಿಚಾರಿಸಿದೆ. ಯಾರೂ ತೆಗೆದುಕೊಂಡು ಹೋಗಿರಲಿಲ್ಲ. ತಕ್ಷಣ ಪೊಲೀಸ್ ಕಮೀಷನರ್ ಗೆ ಹೇಳಿದೆ. ತಕ್ಷಣ ಪೊಲೀರು ಬಂದು ಪರಿಶೀಲನೆ ಮಾಡಿದರು. ಸಿಸಿ.ಟಿವಿ ನೋಡಿದಾಗ ಮಧ್ಯರಾತ್ರಿ 1 ಗಂಟೆಗೆ ಕಾರು ಕಳ್ಳತನ ಆಗಿರೋದು ಗೊತ್ತಾಗಿದೆ. ಆತ ಕಾಂಪೌಂಡ್ ಹಾರಿ ಬಂದಿದ್ದಾನೆ. ಆತನ ಹಿಂದೆ ಯಾರೋ ಸೇರಿಕೊಂಡು ವ್ಯವಸ್ಥಿತಿವಾಗಿ ಕಳ್ಳತನ ಮಾಡಿದ್ದಾರೆ. ಕಾರು ಕದ್ದವನು ಮತ್ತೆ ಬಂದು ಫೈಲ್ ಗಳು ಹಾಗೂ ಗಣಪತಿ ವಿಗ್ರಹ ಇಟ್ಟು ಹೋಗಿದ್ದಾನೆ. ಕೆಲವು ದಿನಗಳ ಹಿಂದೆ ಇದೇ ರೀತಿ ಕಾರು ಕಳ್ಳತನ ಆಗಿದೆ. ಮಾಜಿ ಮಂತ್ರಿಗೆ ಈ ರೀತಿ ಆದರೆ ಜನ ಸಾಮಾನ್ಯರ ಗತಿ ಏನು?’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ