ಜಾನುವಾರುಗಳನ್ನ ಕೆರೆಯ ಬಳಿ ಕಟ್ಟಿ ಆಟವಾಡಲು ನೀರಿನಲ್ಲಿ ಇಳಿದಿದ್ದರು
ಆಟವಾಡುತ್ತಿದ್ದಾಗ ಕೆರೆಯಲ್ಲಿ ಮೂವರು ಮುಳುಗಿ ಸಾವನ್ನಪ್ಪಿರುವ ಘಟನೆ
ಮೂವರು ಮಕ್ಕಳನ್ನ ಕಳೆದುಕೊಂಡು ಕಣ್ಣೀರಿಡುತ್ತಿರುವ ಪೋಷಕರು
ಹಾಸನ: ಈ ಬೇಸಿಗೆ ರಜೆಯಲ್ಲಿ ಮಕ್ಕಳು ಈಜಲು ಹೋಗಿ ಸಾವನ್ನಪ್ಪಿದ ಅನೇಕ ಘಟನೆಗಳು ನಡೆದಿದೆ. ರಾಜ್ಯದ ಹಲವೆಡೆ ಪೋಷಕರ ತಮ್ಮ ಮಕ್ಕಳನ್ನ ಕಳೆದುಕೊಂಡು ಕಣ್ಣೀರು ಹಾಕಿದ್ದಾರೆ. ಈ ಸಾಲು, ಸಾಲು ದುರಂತ ಕಣ್ಮುಂದೆ ಇರುವಾಗಲೇ ಮತ್ತೊಂದು ಘೋರ ದುರಂತ ನಡೆದಿದೆ.
ಇದನ್ನೂ ಓದಿ: ದುರಂತ.. ಸ್ನಾನ ಮಾಡಲು ಹೋದ ಇಬ್ಬರು ಬಾಲಕಿಯರು ದಾರುಣ ಸಾವು
ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೇಲೂರು ತಾಲ್ಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ದೀಕ್ಷಿತ್ (10), ನಿತ್ಯಶ್ರೀ (12), ಕುಸುಮ (6) ಮೃತ ಮಕ್ಕಳಾಗಿದ್ದಾರೆ.
ಈ ಮೂರು ಮಕ್ಕಳು ಜಾನುವಾರುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡಲು ನೀರಿನಲ್ಲಿ ಇಳಿದಿದ್ದರು. ಆಟವಾಡುತ್ತಿದ್ದಾಗ ಕೆರೆಯಲ್ಲಿ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜಾನುವಾರುಗಳನ್ನ ಕೆರೆಯ ಬಳಿ ಕಟ್ಟಿ ಆಟವಾಡಲು ನೀರಿನಲ್ಲಿ ಇಳಿದಿದ್ದರು
ಆಟವಾಡುತ್ತಿದ್ದಾಗ ಕೆರೆಯಲ್ಲಿ ಮೂವರು ಮುಳುಗಿ ಸಾವನ್ನಪ್ಪಿರುವ ಘಟನೆ
ಮೂವರು ಮಕ್ಕಳನ್ನ ಕಳೆದುಕೊಂಡು ಕಣ್ಣೀರಿಡುತ್ತಿರುವ ಪೋಷಕರು
ಹಾಸನ: ಈ ಬೇಸಿಗೆ ರಜೆಯಲ್ಲಿ ಮಕ್ಕಳು ಈಜಲು ಹೋಗಿ ಸಾವನ್ನಪ್ಪಿದ ಅನೇಕ ಘಟನೆಗಳು ನಡೆದಿದೆ. ರಾಜ್ಯದ ಹಲವೆಡೆ ಪೋಷಕರ ತಮ್ಮ ಮಕ್ಕಳನ್ನ ಕಳೆದುಕೊಂಡು ಕಣ್ಣೀರು ಹಾಕಿದ್ದಾರೆ. ಈ ಸಾಲು, ಸಾಲು ದುರಂತ ಕಣ್ಮುಂದೆ ಇರುವಾಗಲೇ ಮತ್ತೊಂದು ಘೋರ ದುರಂತ ನಡೆದಿದೆ.
ಇದನ್ನೂ ಓದಿ: ದುರಂತ.. ಸ್ನಾನ ಮಾಡಲು ಹೋದ ಇಬ್ಬರು ಬಾಲಕಿಯರು ದಾರುಣ ಸಾವು
ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೇಲೂರು ತಾಲ್ಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ದೀಕ್ಷಿತ್ (10), ನಿತ್ಯಶ್ರೀ (12), ಕುಸುಮ (6) ಮೃತ ಮಕ್ಕಳಾಗಿದ್ದಾರೆ.
ಈ ಮೂರು ಮಕ್ಕಳು ಜಾನುವಾರುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡಲು ನೀರಿನಲ್ಲಿ ಇಳಿದಿದ್ದರು. ಆಟವಾಡುತ್ತಿದ್ದಾಗ ಕೆರೆಯಲ್ಲಿ ಮೂವರು ಮುಳುಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ