Breaking News: ರಾಯಚೂರಲ್ಲಿ ಹೃದಯ ವಿದ್ರಾವಕ ಘಟನೆ; ಜೆಸಿಬಿ ಹರಿದು ಸ್ಥಳದಲ್ಲೇ ಮೂವರು ಸಾವು

author-image
Harshith AS
Updated On
Breaking News: ರಾಯಚೂರಲ್ಲಿ ಹೃದಯ ವಿದ್ರಾವಕ ಘಟನೆ; ಜೆಸಿಬಿ ಹರಿದು ಸ್ಥಳದಲ್ಲೇ ಮೂವರು ಸಾವು

ಪ್ರಾತಿನಿಧಿಕ ಚಿತ್ರ

Advertisment
  • ಮಲಗಿದ್ದಲ್ಲೇ ಮಸಣ ಸೇರಿದ ಮೂವರು
  • ನಿದ್ರೆ ಜಾರಿದವರ ಮೇಲೆ ಓಡಾಡಿದ ಜೆಸಿಬಿ
  • ಜಮೀನಿನಲ್ಲೇ ಕಾದು ಕುಳಿತ್ತಿದ್ದ ಯಮ

ರಾಯಚೂರು: ಮಲಗಿದ್ದವರ ಮೇಲೆ ಜೆಸಿಬಿ ಹರಿದು ಮೂವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ನಿಲವಂಜಿಯಲ್ಲಿ ನಡೆದಿದೆ. ವಿಷ್ಣು (26), ಶಿವರಾಮ್ (28), ಬಲರಾಮ್(30) ಮೃತ ದುರ್ದೈವಿಗಳು.

ಜಮೀನಿನಲ್ಲಿ ಬೋರ್‌ವೆಲ್ ಕೊರೆದು ರಾತ್ರಿ ವೇಳೆ ಕಾಲುದಾರಿಯಲ್ಲಿ ಮೂವರು ಯುವಕರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ ಮೂವರು ಯುವಕರ ಮೇಲೆ ಹರಿದಿದೆ. ಪರಿಣಾಮ ಅಲ್ಲೇ ಉಸಿರು ಚೆಲ್ಲಿದ್ದಾರೆ. ಸಾವನ್ನಪ್ಪಿದವರು ಚತ್ತಿಸ್​ಗಢ ಮೂಲದವರು ಎಂದು ತಿಳಿದುಬಂದಿದೆ.

ಇನ್ನು ನಿಲವಂಜಿ ಗ್ರಾಮದ ಬಾಲಯ್ಯ ಎಂಬುವವರಿಗೆ ಸೇರಿದ ಜೆಸಿಬಿ ಇದಾಗಿದ್ದು, ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment