/newsfirstlive-kannada/media/post_attachments/wp-content/uploads/2024/07/Accident-10-1.jpg)
ವಿಜಯಪುರ: ರಸ್ತೆ ಪಕ್ಕದ ಕಲ್ಲಿಗೆ ಕಾರು ಗುದ್ದಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬಸವನಬಾಗೇವಾಡಿ -ಇಂಗಳೇಶ್ವರ ಮಾರ್ಗ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಡೆಡ್ಲಿ ಆಕ್ಸಿಡೆಂಟ್ ಲೈವ್ ವಿಡಿಯೋ ಮೊಬೈಲ್​​ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತಡರಾತ್ರಿ ಕುಡಿದ ಮತ್ತಿನಲ್ಲಿ ಕಾರು ಚಲಿಸುವಾಗ ಅಪಘಾತವಾಗಿದೆ. ಅಪಘಾತದಲ್ಲಿ ಇಬ್ಬರಾದ ಮಲ್ಲು ಡೋಲಗೊಂಡ (32), ಪರಶು ಮಿಣಜಿಗಿ (26) ನರಳಾಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೇವಣಸಿದ್ಧ ಶೇಕಣ್ಣಿ (27) ಎಂಬಾತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
/newsfirstlive-kannada/media/post_attachments/wp-content/uploads/2024/07/car-Accident-8.jpg)
ಇದನ್ನೂ ಓದಿ: ಕೇದಾರನಾಥ ದೇವಸ್ಥಾನದಲ್ಲಿ 228kg ಚಿನ್ನ ನಾಪತ್ತೆ! ಈ ಗಂಭೀರ ಆರೋಪ ಮಾಡಿದ್ಯಾರು ಗೊತ್ತಾ?
ಜುಲೈ 8ರಂದು ರಾತ್ರಿ 10-32ಕ್ಕೆ ನಡೆದಿದ್ದ ಘಟನೆ ಇದಾಗಿದೆ. ಐವರು ಬಸವನಬಾಗೇವಾಡಿಯಿಂದ ಇಂಗಳೇಶ್ವರ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಕುಡಿದ ಮತ್ತಿನಲ್ಲಿ ಖುಷಿಯಲ್ಲಿ ತೇಲಾಡುತ್ತಿದ್ದರು. ಈ ವೇಳೆ ಆಕ್ಸಿಡೆಂಟ್ ಆಗಿದೆ. ಐವರ ಪೈಕಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಬದುಕುಳಿದಿದ್ದಾರೆ. ಮೃತರು ಇಂಗಳೇಶ್ವರ ಗ್ರಾಮದವರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ವಿಪರೀತ ಮಳೆ, ಹಳ್ಳದಂತಾದ ಬಸ್ ನಿಲ್ದಾಣ.. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬಸವನಬಾಗೇವಾಡಿಯಲ್ಲಿ ಎಣ್ಣೆ ಪಾರ್ಟಿ ಮಾಡಿಕೊಂಡು ರಾತ್ರಿ ಕಾರಿನಲ್ಲಿ ಇಂಗಳೇಶ್ವರ ಗ್ರಾಮಕ್ಕೆ ತೆರಳುತ್ತಿದ್ದರು. ಕಾರಿನ ಮುಂಭಾಗದ ಕುಳಿತು ಮಲ್ಲು ತನ್ನ ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದನು. ‘ಹೇಂಗಿದ್ದಿ ಹೆಂಗ್ಯಾದಿ ಕುಡುಕ ಕುಡುಕ ಅಂತ ಕರಿಯಬ್ಯಾಡ ನೀನ’ ಅನ್ನೋ ಲವ್ ಫೇಲ್ಯೂರ್ ಜಾನಪದ ಹಾಡು ಹಾಕಿಕೊಂಡು ಕಾರಿನಲ್ಲಿ ತೆರಳಿದ್ದರು.
ರಸ್ತೆ ಪಕ್ಕ ಕಲ್ಲಿಗೆ ಕಾರು ಗುದ್ದಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬಸವನಬಾಗೇವಾಡಿ -ಇಂಗಳೇಶ್ವರ ಮಾರ್ಗ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಡೆಡ್ಲಿ ಆಕ್ಸಿಡೆಂಟ್ ಲೈವ್ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.#Vijayapura#Accident#Livevideo#Drunkanddrivepic.twitter.com/a7QsbHLoyw
— Harshith Achrappady (@HAchrappady)
ರಸ್ತೆ ಪಕ್ಕ ಕಲ್ಲಿಗೆ ಕಾರು ಗುದ್ದಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬಸವನಬಾಗೇವಾಡಿ -ಇಂಗಳೇಶ್ವರ ಮಾರ್ಗ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಡೆಡ್ಲಿ ಆಕ್ಸಿಡೆಂಟ್ ಲೈವ್ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.#Vijayapura#Accident#Livevideo#Drunkanddrivepic.twitter.com/a7QsbHLoyw
— Harshith Achrappady (@HAchrappady) July 16, 2024
">July 16, 2024
ಕುಡಿದ ಮತ್ತಿನಲ್ಲಿ ಕಾರಿನಲ್ಲಿ ಹಾಡು ಹಾಕಿಕೊಂಡು ಐವರು ಖುಷಿಯಾಗಿ ತೆರಳುತ್ತಿದ್ದರು. ಆದರೆ ಓವರ್ ಸ್ಪೀಡ್ ನಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ವಿಡಿಯೋ ಮತ್ತು ನರಳಾಟದ ಆಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದೆ. ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us