ಬೆಂಗಳೂರಿನ ನೈಸ್ ರಸ್ತೆಯಲ್ಲಿ ಇಂದು ಎರಡು ಭೀಕರ ರಸ್ತೆ ಅಪಘಾತ
ಮಹೇಂದ್ರ XUV 700 ಕಾರಿಗೆ ಸ್ಕಾರ್ಪಿಯೋ ಕಾರು ಭಯಾನಕ ಡಿಕ್ಕಿ
ಮಳೆಯಿಂದಾಗಿ ನೈಸ್ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ವಾಹನಗಳು
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಇಂದು ಭೀಕರ ಸರಣಿ ಅಪಘಾತಗಳು ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ನೈಸ್ ಟೋಲ್ ಬಳಿ ಕಾರು, ಬಸ್, ಲಾರಿ ಮಧ್ಯೆ ಡಿಕ್ಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಈ ದುರಂತ ಘಟನೆ ಮಾಸುವ ಮುನ್ನವೇ ಇದೇ ನೈಸ್ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ನಡೆದಿದೆ.
ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. ಕಾರು, ಲಾರಿ, ಬಸ್ ಮಧ್ಯೆ ಭಯಾನಕ ಡಿಕ್ಕಿ; ಘೋರ ದುರಂತ!
ಬನ್ನೇರುಘಟ್ಟ ನೈಸ್ ರಸ್ತೆ ಟೋಲ್ ಬಳಿ ಎರಡು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಹೊಸೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಮೈಸೂರು ರಸ್ತೆ ಕಡೆಯಿಂದ ಬರುತ್ತಿದ್ದ ಮಹೇಂದ್ರ XUV 700 ಕಾರಿಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂಜೇಶ್(35), ವಿನೋದ್ (34) ಕುಮಾರ್(35) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರನ್ನು ರಾಮನಗರ ಮೂಲದವರು ಎಂದು ಗುರುತಿಸಲಾಗಿದೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತ ಆಗಿದ್ದು ಹೇಗೆ?
ಮಳೆಯಿಂದಾಗಿ ನೈಸ್ ರಸ್ತೆಯಲ್ಲಿ ವಾಹನಗಳಿಗೆ ನಿಯಂತ್ರಣ ತಪ್ಪಿದೆ. ಬನ್ನೇರುಘಟ್ಟ ನೈಸ್ ರಸ್ತೆ ಟೋಲ್ ಬಳಿ ಮಹೇಂದ್ರ XUV 700 ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಇದನ್ನೂ ಓದಿ: ಅಣ್ಣನನ್ನು ಭೇಟಿಯಾಗಲು ಜೈಲಿಗೆ ಬಂದ ತಮ್ಮ ದಿನಕರ್ ತೂಗುದೀಪ; ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಥ್
ಅಪಘಾತದ ಬಳಿಕ ವಾಹನದಲ್ಲಿ ಸಿಲುಕಿದ್ದವರನ್ನ ಸ್ಥಳೀಯರು ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ. ಬಳಿಕ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನ ಸವಾರರು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಇಂದು ಎರಡು ಭೀಕರ ರಸ್ತೆ ಅಪಘಾತ
ಮಹೇಂದ್ರ XUV 700 ಕಾರಿಗೆ ಸ್ಕಾರ್ಪಿಯೋ ಕಾರು ಭಯಾನಕ ಡಿಕ್ಕಿ
ಮಳೆಯಿಂದಾಗಿ ನೈಸ್ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ವಾಹನಗಳು
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಇಂದು ಭೀಕರ ಸರಣಿ ಅಪಘಾತಗಳು ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ನೈಸ್ ಟೋಲ್ ಬಳಿ ಕಾರು, ಬಸ್, ಲಾರಿ ಮಧ್ಯೆ ಡಿಕ್ಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಈ ದುರಂತ ಘಟನೆ ಮಾಸುವ ಮುನ್ನವೇ ಇದೇ ನೈಸ್ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ನಡೆದಿದೆ.
ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. ಕಾರು, ಲಾರಿ, ಬಸ್ ಮಧ್ಯೆ ಭಯಾನಕ ಡಿಕ್ಕಿ; ಘೋರ ದುರಂತ!
ಬನ್ನೇರುಘಟ್ಟ ನೈಸ್ ರಸ್ತೆ ಟೋಲ್ ಬಳಿ ಎರಡು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಹೊಸೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಮೈಸೂರು ರಸ್ತೆ ಕಡೆಯಿಂದ ಬರುತ್ತಿದ್ದ ಮಹೇಂದ್ರ XUV 700 ಕಾರಿಗೆ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂಜೇಶ್(35), ವಿನೋದ್ (34) ಕುಮಾರ್(35) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರನ್ನು ರಾಮನಗರ ಮೂಲದವರು ಎಂದು ಗುರುತಿಸಲಾಗಿದೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತ ಆಗಿದ್ದು ಹೇಗೆ?
ಮಳೆಯಿಂದಾಗಿ ನೈಸ್ ರಸ್ತೆಯಲ್ಲಿ ವಾಹನಗಳಿಗೆ ನಿಯಂತ್ರಣ ತಪ್ಪಿದೆ. ಬನ್ನೇರುಘಟ್ಟ ನೈಸ್ ರಸ್ತೆ ಟೋಲ್ ಬಳಿ ಮಹೇಂದ್ರ XUV 700 ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಇದನ್ನೂ ಓದಿ: ಅಣ್ಣನನ್ನು ಭೇಟಿಯಾಗಲು ಜೈಲಿಗೆ ಬಂದ ತಮ್ಮ ದಿನಕರ್ ತೂಗುದೀಪ; ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಥ್
ಅಪಘಾತದ ಬಳಿಕ ವಾಹನದಲ್ಲಿ ಸಿಲುಕಿದ್ದವರನ್ನ ಸ್ಥಳೀಯರು ರಕ್ಷಿಸಲು ಹರಸಾಹಸ ಪಟ್ಟಿದ್ದಾರೆ. ಬಳಿಕ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನ ಸವಾರರು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ