ನ್ಯೂಜಿಲೆಂಡ್​​ ವಿರುದ್ಧ ರೋಚಕ ಜಯ; ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಮೂವರು ಪ್ಲೇಯರ್ಸ್​ ಇವರೇ!

author-image
Ganesh Nachikethu
Updated On
ಟೀಮ್​ ಇಂಡಿಯಾಗೆ ಮತ್ತೊಂದು ಶಾಕ್​​: R ಅಶ್ವಿನ್​ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಸ್ಟಾರ್​ ಕ್ರಿಕೆಟರ್​
Advertisment
  • ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್!
  • ರೋಚಕ ಫೈನಲ್ ಪಂದ್ಯದಲ್ಲಿ ಗೆದ್ದು ಬೀಗಿದ ಟೀಮ್​ ಇಂಡಿಯಾ
  • 4 ವಿಕೆಟ್​ಗಳಿಂದ ಗೆದ್ದು ಚಾಂಪಿಯನ್​ ಆಗಿ ಹೊರಹೊಮ್ಮಿದ ಭಾರತ

ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಈ ರೋಚಕ ಪಂದ್ಯದಲ್ಲಿ ನ್ಯೂಜಿಲೆಂಡ್​​​ ವಿರುದ್ಧ 4 ವಿಕೆಟ್​ಗಳಿಂದ ಗೆದ್ದು ಬೀಗುವ ಮೂಲಕ ಟೀಮ್​ ಇಂಡಿಯಾ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

ದುಬೈನ ಇಂಟರ್​ ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ನ್ಯೂಜಿಲೆಂಡ್ 252 ರನ್‌ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಟೀಮ್​ ಇಂಡಿಯಾ 49 ಓವರ್​​ನಲ್ಲೇ 6 ವಿಕೆಟ್​ ಕಳೆದುಕೊಂಡು ಗೆಲುವಿನ ನಗೆ ಬೀರಿದೆ.

ಫೈನಲ್ ಪಂದ್ಯದ ಗೆಲುವಿಗೆ ಟೀಮ್ ಇಂಡಿಯಾಗೆ ಆನೇಕ ಆಟಗಾರರು ಕೊಡುಗೆ ನೀಡಿದರು. ಈ ಪೈಕಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಮೂವರು ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ.

publive-image

ಅಬ್ಬರಿಸಿದ ಕ್ಯಾಪ್ಟನ್​ ರೋಹಿತ್​ ಶರ್ಮಾ

ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಮೊದಲ ಪ್ಲೇಯರ್​​​ ಕ್ಯಾಪ್ಟನ್​ ರೋಹಿತ್​ ಶರ್ಮಾ. ಇವರು 83 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 76 ರನ್ ಬಾರಿಸಿದರು. ರೋಹಿತ್​ ನೀಡಿದ ಉತ್ತಮ ಆರಂಭದಿಂದಲೇ ಭಾರತ ಗೆಲ್ಲಲು ಸಾಧ್ಯವಾಗಿದ್ದು.

ಸೈಲೆಂಟ್​ ಹೀರೋ ಅಯ್ಯರ್​​

ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಭಾರತ ತಂಡದ ಪರ ಸ್ಥಿರ ಪ್ರದರ್ಶನ ನೀಡಿದವರು ಶ್ರೇಯಸ್ ಅಯ್ಯರ್. ಫೈನಲ್ ಪಂದ್ಯದಲ್ಲೂ ಅಯ್ಯರ್ ತಮ್ಮ ಅದ್ಭುತ ಆಟದ ಮೂಲಕ ಎಲ್ಲರ ಗಮನ ಸೆಳೆದರು. ಅಯ್ಯರ್ 62 ಎಸೆತಗಳಲ್ಲಿ 2 ಬೌಂಡಿರಿ ಮತ್ತು 2 ಸಿಕ್ಸರ್ ನೆರವಿನಿಂದ 48 ರನ್‌ಗಳನ್ನು ಕಲೆ ಹಾಕಿದರು.

ಮೋಡಿ ಮಾಡಿದ ಕುಲ್ದೀಪ್​​

ಕುಲ್ದೀಪ್​ ಯಾದವ್​ ತನ್ನ ಸ್ಪಿನ್ ಬೌಲಿಂಗ್ ಮೂಲಕ ನ್ಯೂಜಿಲೆಂಡ್ ಬ್ಯಾಟರ್ಸ್​ ಅನ್ನು ಕಟ್ಟಿ ಹಾಕಿದರು. ರಚಿನ್ ರವೀಂದ್ರ ಮತ್ತು ಕೇನ್ಸ್ ವಿಲಿಯಮ್ಸನ್ ವಿಕೆಟ್​ ತೆಗೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಇವರು ತಮ್ಮ 10 ಓವರ್‌ಗಳಲ್ಲಿ ನೀಡಿದ್ದು ಕೇವಲ 40 ರನ್​.

ಇದನ್ನೂ ಓದಿ:ಭಾರತ ತಂಡದ ಮಾನ ಕಾಪಾಡಿದ ಕನ್ನಡಿಗ; ಕೆ.ಎಲ್​ ರಾಹುಲ್​​ ಅವರನ್ನು ಹಾಡಿಹೊಗಳಿದ ರೋಹಿತ್​ ಶರ್ಮಾ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment