/newsfirstlive-kannada/media/post_attachments/wp-content/uploads/2024/09/TEAM-INDIA-1.jpg)
ಇತ್ತೀಚೆಗೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ ಬರೋಬ್ಬರಿ 8 ವಿಕೆಟ್ಗಳಿಂದ ಗೆದ್ದು ಬೀಗಿದೆ. ಈ ಮೂಲಕ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ 1-0 ಅಂತರದ ಮುನ್ನಡೆ ಸಾಧಿಸಿದೆ.
ಇನ್ನು, 2ನೇ ಟೆಸ್ಟ್ ಪಂದ್ಯವೂ ಪುಣೆಯಲ್ಲಿರೋ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಮ್ನಲ್ಲಿ ನಡೆಯಲಿದೆ. ಇದಕ್ಕೆ ಟೀಮ್ ಇಂಡಿಯಾ ಭರ್ಜರಿ ತಯಾರಿ ಮಾಡಿಕೊಂಡಿದೆ. ಅಕ್ಟೋಬರ್ 24ನೇ ತಾರೀಕಿನಿಂದ ಶುರುವಾಗೋ ಈ ಟೆಸ್ಟ್ ಪಂದ್ಯ 28ರ ವರೆಗೆ ನಡೆಯಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ಲೇಯಿಂಗ್ ಎಲೆವೆನ್ನಲ್ಲಿ ಮೇಜರ್ ಸರ್ಜರಿ ಆಗಲಿದೆ.
2ನೇ ಟೆಸ್ಟ್ನಿಂದ ಮೂವರಿಗೆ ಗೇಟ್ ಪಾಸ್
ಮೊದಲ ಟೆಸ್ಟ್ನಲ್ಲಿ ಹೀನಾಯ ಸೋಲಿನ ಬಳಿಕ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ಕೆ.ಎಲ್ ರಾಹುಲ್ ಹೆಚ್ಚು ಟೀಕೆಗೆ ಒಳಗಾಗಿದ್ದಾರೆ. ತವರಿನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸೋ ಮೂಲಕ ರಾಹುಲ್ ಹೆಚ್ಚು ನಿರಾಸೆ ಮೂಡಿಸಿದ್ರು. ಮೊದಲ ಇನ್ನಿಂಗ್ಸ್ನಲ್ಲಿ ಶೂನ್ಯಕ್ಕೆ ಔಟಾದ ಇವರು 2ನೇ ಇನ್ನಿಂಗ್ಸ್ನಲ್ಲಿ ಕೇವಲ 12 ರನ್ಗೆ ವಿಕೆಟ್ ಒಪ್ಪಿಸಿದ್ರು. ಹೀಗಾಗಿ ಇವರು 2ನೇ ಟೆಸ್ಟ್ ಪಂದ್ಯದಿಂದ ಔಟ್ ಆಗಬಹುದು.
ಬೆಂಗಳೂರು ಟೆಸ್ಟ್ನಲ್ಲಿ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಸಾಕಷ್ಟು ನಿರಾಸೆ ಮೂಡಿಸಿದ್ರು. ತನ್ನ ತವರು ಪಿಚ್ನಲ್ಲಿಯೂ ಸಿರಾಜ್ ವಿಕೆಟ್ ಪಡೆಯಲು ಪರದಾಡಿದ್ರು. ಮೊದಲ ಇನ್ನಿಂಗ್ಸ್ನಲ್ಲಿ 2 ವಿಕೆಟ್ ಪಡೆದ ಇವರು, 2ನೇ ಇನ್ನಿಂಗ್ಸ್ನಲ್ಲಿ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಇವರ ಬದಲಿಗೆ ಆಕಾಶ್ ದೀಪ್ಗೆ ಚಾನ್ಸ್ ನೀಡುವ ಸಾಧ್ಯತೆ ಇದೆ.
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ಕೊಟ್ರೂ ಕುಲದೀಪ್ ಹೆಚ್ಚು ಪ್ರಭಾವ ಬೀರಲಿಲ್ಲ. ಮೊದಲ ಇನ್ನಿಂಗ್ಸ್ನಲ್ಲಿ 3 ವಿಕೆಟ್ ಪಡೆದ್ರೂ ಇವರ ಎಕಾನಮಿಯಲ್ಲಿ 5ಕ್ಕಿಂತಲೂ ಹೆಚ್ಚು ರನ್ ಬಿಟ್ಟುಕೊಟ್ರು. ಇವರನ್ನು ಕೈ ಬಿಟ್ಟು, ಆಲ್ರೌಂಡರ್ ಅಕ್ಷರ್ ಪಟೇಲ್ಗೆ ಮಣೆ ಹಾಕೋ ಸಾಧ್ಯತೆ ಇದೆ.
ಇದನ್ನೂ ಓದಿ: ಟೀಮ್ ಇಂಡಿಯಾ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಕ್ಯಾಪ್ಟನ್.. ರೋಹಿತ್ ಶರ್ಮಾ ಏನಂದ್ರು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ