ಕಾಲೇಜು ಮುಗಿಸಿ ಈಜಲು ಹೋಗಿದ್ದ ವಿದ್ಯಾರ್ಥಿಗಳು
ನೇರ ಮನೆಗೆ ತೆರಳದೇ KRS ಹಿನ್ನೀರಿಗೆ ಹೋಗಿ ದುರಂತ
ಮೈಸೂರಿನ ಸಂತ ಜೋಸೆಫ್ ಕಾಲೇಜಿನ ಸ್ಟುಡೆಂಟ್ಸ್
ಮೈಸೂರು: ಕೃಷ್ಣಾ ರಾಜ ಸಾಗರ್ (KRS) ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿ ನಡೆದಿದೆ.
ಪ್ರವೀಣ್, ವರುಣ್, ಭರತ್ ಮೃತಪಟ್ಟ ವಿದ್ಯಾರ್ಥಿಗಳು. ಈ ಮೂವರು ಮೈಸೂರಿನ ಸಂತ ಜೋಸೆಫ್ ಕಾಲೇಜಿನಲ್ಲಿ BCA ವ್ಯಾಸಂಗ ಮಾಡುತ್ತಿದ್ದರು. ಸಾವನ್ನಪ್ಪಿದ ವಿದ್ಯಾರ್ಥಿಗಳು ತಾಲೂಕಿನ ರಾಮಕೃಷ್ಣ ನಗರ, ಪಡುವಾರಹಳ್ಳಿ, ಶ್ರೀರಂಗಪಟ್ಟಣದ ಬಲ್ಲೇನಹಳ್ಳಿ ಗ್ರಾಮಗಳಿಗೆ ಸೇರಿದವರಾಗಿದ್ದಾರೆ.
ನಿನ್ನೆ ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿಗಳು ಕೆಆರ್ಎಸ್ ಹಿನ್ನೀರಿನಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ನೀರಲ್ಲಿ ಆಟವಾಡುವಾಗ ನೀರಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮೈಸೂರಿನ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾಲೇಜು ಮುಗಿಸಿ ಈಜಲು ಹೋಗಿದ್ದ ವಿದ್ಯಾರ್ಥಿಗಳು
ನೇರ ಮನೆಗೆ ತೆರಳದೇ KRS ಹಿನ್ನೀರಿಗೆ ಹೋಗಿ ದುರಂತ
ಮೈಸೂರಿನ ಸಂತ ಜೋಸೆಫ್ ಕಾಲೇಜಿನ ಸ್ಟುಡೆಂಟ್ಸ್
ಮೈಸೂರು: ಕೃಷ್ಣಾ ರಾಜ ಸಾಗರ್ (KRS) ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿ ನಡೆದಿದೆ.
ಪ್ರವೀಣ್, ವರುಣ್, ಭರತ್ ಮೃತಪಟ್ಟ ವಿದ್ಯಾರ್ಥಿಗಳು. ಈ ಮೂವರು ಮೈಸೂರಿನ ಸಂತ ಜೋಸೆಫ್ ಕಾಲೇಜಿನಲ್ಲಿ BCA ವ್ಯಾಸಂಗ ಮಾಡುತ್ತಿದ್ದರು. ಸಾವನ್ನಪ್ಪಿದ ವಿದ್ಯಾರ್ಥಿಗಳು ತಾಲೂಕಿನ ರಾಮಕೃಷ್ಣ ನಗರ, ಪಡುವಾರಹಳ್ಳಿ, ಶ್ರೀರಂಗಪಟ್ಟಣದ ಬಲ್ಲೇನಹಳ್ಳಿ ಗ್ರಾಮಗಳಿಗೆ ಸೇರಿದವರಾಗಿದ್ದಾರೆ.
ನಿನ್ನೆ ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿಗಳು ಕೆಆರ್ಎಸ್ ಹಿನ್ನೀರಿನಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ನೀರಲ್ಲಿ ಆಟವಾಡುವಾಗ ನೀರಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮೈಸೂರಿನ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ