Advertisment

ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ; ಕಿಡಿಗೇಡಿ ಪೊಲೀಸರ ವಶಕ್ಕೆ

author-image
AS Harshith
Updated On
ಕುಡಿದ ಮತ್ತಿನಲ್ಲಿ ಟಿಪ್ಪು ಫೋಟೋಗೆ ಚಪ್ಪಲಿ ಹಾರ ಹಾಕಿದ್ನಂತೆ ಕಿಡಿಗೇಡಿ; ​​ಸಂಘ ಪರಿವಾರದ ನಂಟು ಇದೆಯಾ?
Advertisment
  • ರಾಯಚೂರಲ್ಲಿ ಜನವರಿ 31ನೇ ತಾರೀಖು ನಡೆದಿದ್ದ ಪ್ರಕರಣ
  • ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ವ್ಯಕ್ತಿ
  • ಉಗ್ರ ಹೋರಾಟ ಮಾಡಿ ಪ್ರತಿಭಟಿಸಿದ್ದ ಮುಸ್ಲಿಂ ಸಮುದಾಯ

ರಾಯಚೂರು: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆಸಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. 23 ವರ್ಷದ ಆಕಾಶ್​ ಈ ಕೃತ್ಯವೆಸಗಿದ್ದು ಪೊಲೀಸರು ಆತನನ್ನು ಅರೆಸ್ಟ್​ ಮಾಡಿದ್ದಾರೆ.

Advertisment

ಜನವರಿ 31ನೇ ತಾರೀಖು ಬೆಳಗ್ಗೆ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತಕ್ಕೆ ಆಕಾಶ್ ಚಪ್ಪಲಿ ಹಾರ ಹಾಕಿ ಎಸ್ಕೇಪ್ ಆಗಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಮುಸ್ಲಿಂ ಸಮುದಾಯದ ಜನ ಜಮಾಯಿಸಿದ್ದರು.

ಉಗ್ರ ಹೋರಾಟ ಮಾಡಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಬಳಿಕ 24 ಗಂಟೆಗಳ ಗಡುವು ನೀಡಿ ಪ್ರತಿಭಟನೆ ಕೈಬಿಡಲಾಗಿತ್ತು. ಸದ್ಯ ಕಿಡಿಗೇಡಿ ಆಕಾಶ್​ನ ಬಂಧನವಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment