ರಾಯಚೂರಲ್ಲಿ ಜನವರಿ 31ನೇ ತಾರೀಖು ನಡೆದಿದ್ದ ಪ್ರಕರಣ
ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ವ್ಯಕ್ತಿ
ಉಗ್ರ ಹೋರಾಟ ಮಾಡಿ ಪ್ರತಿಭಟಿಸಿದ್ದ ಮುಸ್ಲಿಂ ಸಮುದಾಯ
ರಾಯಚೂರು: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆಸಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. 23 ವರ್ಷದ ಆಕಾಶ್ ಈ ಕೃತ್ಯವೆಸಗಿದ್ದು ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ.
ಜನವರಿ 31ನೇ ತಾರೀಖು ಬೆಳಗ್ಗೆ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತಕ್ಕೆ ಆಕಾಶ್ ಚಪ್ಪಲಿ ಹಾರ ಹಾಕಿ ಎಸ್ಕೇಪ್ ಆಗಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಮುಸ್ಲಿಂ ಸಮುದಾಯದ ಜನ ಜಮಾಯಿಸಿದ್ದರು.
ಉಗ್ರ ಹೋರಾಟ ಮಾಡಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಬಳಿಕ 24 ಗಂಟೆಗಳ ಗಡುವು ನೀಡಿ ಪ್ರತಿಭಟನೆ ಕೈಬಿಡಲಾಗಿತ್ತು. ಸದ್ಯ ಕಿಡಿಗೇಡಿ ಆಕಾಶ್ನ ಬಂಧನವಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಾಯಚೂರಲ್ಲಿ ಜನವರಿ 31ನೇ ತಾರೀಖು ನಡೆದಿದ್ದ ಪ್ರಕರಣ
ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ವ್ಯಕ್ತಿ
ಉಗ್ರ ಹೋರಾಟ ಮಾಡಿ ಪ್ರತಿಭಟಿಸಿದ್ದ ಮುಸ್ಲಿಂ ಸಮುದಾಯ
ರಾಯಚೂರು: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆಸಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. 23 ವರ್ಷದ ಆಕಾಶ್ ಈ ಕೃತ್ಯವೆಸಗಿದ್ದು ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ.
ಜನವರಿ 31ನೇ ತಾರೀಖು ಬೆಳಗ್ಗೆ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತಕ್ಕೆ ಆಕಾಶ್ ಚಪ್ಪಲಿ ಹಾರ ಹಾಕಿ ಎಸ್ಕೇಪ್ ಆಗಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಮುಸ್ಲಿಂ ಸಮುದಾಯದ ಜನ ಜಮಾಯಿಸಿದ್ದರು.
ಉಗ್ರ ಹೋರಾಟ ಮಾಡಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಬಳಿಕ 24 ಗಂಟೆಗಳ ಗಡುವು ನೀಡಿ ಪ್ರತಿಭಟನೆ ಕೈಬಿಡಲಾಗಿತ್ತು. ಸದ್ಯ ಕಿಡಿಗೇಡಿ ಆಕಾಶ್ನ ಬಂಧನವಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ