Advertisment

ಮೀಟರ್ ಬಡ್ಡಿ ವ್ಯವಹಾರಕ್ಕೆ ಬೇಸತ್ತು ವ್ಯಕ್ತಿ ಸಾವು.. ಇಲಿ ಪಾಷಾಣ ಸೇವಿಸಿರುವ ಶಂಕೆ

author-image
AS Harshith
Updated On
ಮೀಟರ್ ಬಡ್ಡಿ ವ್ಯವಹಾರಕ್ಕೆ ಬೇಸತ್ತು ವ್ಯಕ್ತಿ ಸಾವು.. ಇಲಿ ಪಾಷಾಣ ಸೇವಿಸಿರುವ ಶಂಕೆ
Advertisment
  • ಮ್ಯೆಕಾನಿಕ್ ಕೆಲಸಮಾಡಿಕೊಂಡು ಜೀವನ ನಡೆಸುತ್ತಿದ್ದ ವ್ಯಕ್ತಿ
  • ಹಲವು ವ್ಯಕ್ತಿಗಳ ಬಳಿ ಬಡ್ಡಿಗೆ ಸಾಲ ಪಡೆದುಕೊಂಡಿದ್ದ
  • ಸಾಲಗಾರರ ಕಾಟ ತಡಿಲಾರದೇ ಮನನೊಂದು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಮೀಟರ್ ಬಡ್ಡಿ ವ್ಯವಹಾರಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪರ್ವೇಜ್ ಫಾಷ ( 38 ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

Advertisment

ಪರ್ವೇಜ್ ದೊಡ್ಡಬಳ್ಳಾಪುರ ನಗರದ ರೋಜಿಪುರ ಬಡಾವಣೆಯ ನಿವಾಸಿಯಾಗಿದ್ದು, ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಹಾವೇರಿ ಭೀಕರ ಅಪಘಾತದಲ್ಲಿ ರಾಷ್ಟ್ರೀಯ ಫುಟ್ಬಾಲ್ ತಂಡದ ನಾಯಕಿ ಸಾವು.. ಅಂಧ ಬಾಲಕಿ ಕನಸೇನಾಗಿತ್ತು ಗೊತ್ತಾ?

ಪರ್ವೇಜ್ ದೊಡ್ಡಬಳ್ಳಾಪುರ ನಗರದಲ್ಲಿ ಮ್ಯೆಕಾನಿಕ್ ಕೆಲಸಮಾಡಿಕೊಂಡು ಜೀವನ ನಡೆಸುತ್ತಿದ್ದರು.ಈ ಹಿಂದೆ ಹಲವು ವ್ಯಕ್ತಿ ಗಳ ಬಳಿ ಬಡ್ಡಿಗೆ ಸಾಲ ಪಡೆದುಕೊಂಡಿದ್ದರು. ಸಾಲಗಾರರ ಕಾಟ ತಡಿಯಲಾರದೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisment

ಪರ್ವೇಜ್ ಸಾಲ ತೀರಿಸಲು ದಿಕ್ಕು ದೋಚದೆ ಮೂರು ದಿನ ಊಟ ಬಿಟ್ಟಿದ್ದ ಎನ್ನಲಾಗಿದೆ. ನಂತರ ಅಂಗಡಿ ಮುಂದೆ ಸಾಲಗಾರರ ಕಾಟ ಹೆಚ್ಚಾಗಿ 23 ರಂದು ಮನೆಗೆ ಬಂದು ಬೆಳಗಿನ ಜಾವ ವಿಷ ಸೇವಿಸಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಹಾವೇರಿ: ಅಪಘಾತದಲ್ಲಿ ಸತ್ತವರಿಗೆ 15-20 ಲಕ್ಷ ಹಣ ಘೋಷಣೆ ಮಾಡಿ.. ಇಲ್ಲವಾದ್ರೆ ಅಂತ್ಯಕ್ರಿಯೆ ಮಾಡೊಲ್ಲ

ವಿಷ ಸೇವಿಸಿದ ಬಳಿಕ 4 ದಿನಗಳಿಂದ ಪರ್ವೇಜ್​ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಪರ್ವೇಜ್ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment