ಇವತ್ತು ಲಂಕಾ ವಿರುದ್ಧ ಮೂರನೇ ಟಿ-20 ಪಂದ್ಯ ನಡೆಯಲಿದೆ
2-0 ಅಂತರದಿಂದ ಗೆದ್ದು ಸರಣಿ ವಶಪಡಿಸಿಕೊಂಡಿರುವ ಭಾರತ
ಕೊನೆ ಪಂದ್ಯದಲ್ಲಿ ಟೀಂ ಇಂಡಿಯಾಗೆ ಟಕ್ಕರ್ ಕೊಡಲು ಲಂಕಾ ಪ್ಲಾನ್
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯವು ಇವತ್ತು ನಡೆಯಲಿದೆ. ಈಗಾಗಲೇ ಎರಡು ಪಂದ್ಯಗಳಲ್ಲಿ ಗೆದ್ದುಕೊಂಡಿರುವ ಸೂರ್ಯ ಕುಮಾರ್ ಯಾದವ್ ಪಡೆ, ಸರಣಿಯನ್ನು ವಶ ಮಾಡಿಕೊಂಡಿದೆ. ಸರಣಿ ಕ್ಲೀನ್ಸ್ವೀಪ್ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ ಮತ್ತೊಂದು ಗೆಲುವಿನ ಉತ್ಸಾಹದಲ್ಲಿದೆ. ಇತ್ತ ಆತೀಥೆಯ ಲಂಕಾ ಪಡೆ ಹೇಗಾದರೂ ಮಾಡಿ ಪಂದ್ಯವನ್ನು ಗೆದ್ದು ಟಕ್ಕರ್ ಕೊಡಬೇಕು ಅನ್ನೋ ಲೆಕ್ಕಾಚಾರದಲ್ಲಿದೆ.
ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಸೋನಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೇರಪ್ರಸಾರ ಇರಲಿದೆ. ಟೀಂ ಇಂಡಿಯಾದ ಮುಖ್ಯಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ವಹಿಸಿಕೊಂಡ ಮೇಲೆ ತಂಡದಲ್ಲಿ ಅನೇಕ ಬದಲಾವಣೆಗಳನ್ನು ತರುತ್ತಿದ್ದಾರೆ.
ಸೂರ್ಯ ಕುಮಾರ್ ಯಾದವ್ಗೆ ನಾಯಕತ್ವ ಪಟ್ಟ ಕಟ್ಟಿರುವ ಗಂಭೀರ್, ಪ್ಲೇಯಿಂಗ್-11ನಲ್ಲೂ ಭಾರೀ ಬದಲಾವಣೆ ಮಾಡ್ತಿದ್ದಾರೆ. ಎರಡನೇ ಟಿ-20 ಪಂದ್ಯದಲ್ಲಿ ಗಿಲ್ ಬದಲಿಗೆ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಲಾಗಿತ್ತು. ಆದರೆ ಸಂಜು ಸ್ಯಾಮ್ಸನ್ ಬ್ಯಾಟಿಂಗ್ನಲ್ಲಿ ಫೇಲ್ ಆಗಿರೋದ್ರಿಂದ ಇವತ್ತಿನ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಗೋದು ಡೌಟ್. ಇನ್ನು ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ಲೇಯಿಂಗ್-11 ನಲ್ಲಿ ಭಾರೀ ಬದಲಾವಣೆಯ ನಿರೀಕ್ಷೆ ಇದೆ. ಬೆಂಚ್ನಲ್ಲಿ ಕೂತಿರುವ ಕೆಲವು ಯಂಗ್ ಪ್ಲೇಯರ್ಸ್ಗೆ ಆಡುವ ನಿರೀಕ್ಷೆ ಇದೆ.
ಇದನ್ನೂ ಓದಿ:MS ಧೋನಿ ಅಭಿಮಾನಿಗಳಿಗೆ ಕೊನೆಗೂ ಸಿಕ್ಕೇಬಿಡ್ತು ಗುಡ್ನ್ಯೂಸ್..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇವತ್ತು ಲಂಕಾ ವಿರುದ್ಧ ಮೂರನೇ ಟಿ-20 ಪಂದ್ಯ ನಡೆಯಲಿದೆ
2-0 ಅಂತರದಿಂದ ಗೆದ್ದು ಸರಣಿ ವಶಪಡಿಸಿಕೊಂಡಿರುವ ಭಾರತ
ಕೊನೆ ಪಂದ್ಯದಲ್ಲಿ ಟೀಂ ಇಂಡಿಯಾಗೆ ಟಕ್ಕರ್ ಕೊಡಲು ಲಂಕಾ ಪ್ಲಾನ್
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯವು ಇವತ್ತು ನಡೆಯಲಿದೆ. ಈಗಾಗಲೇ ಎರಡು ಪಂದ್ಯಗಳಲ್ಲಿ ಗೆದ್ದುಕೊಂಡಿರುವ ಸೂರ್ಯ ಕುಮಾರ್ ಯಾದವ್ ಪಡೆ, ಸರಣಿಯನ್ನು ವಶ ಮಾಡಿಕೊಂಡಿದೆ. ಸರಣಿ ಕ್ಲೀನ್ಸ್ವೀಪ್ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ ಮತ್ತೊಂದು ಗೆಲುವಿನ ಉತ್ಸಾಹದಲ್ಲಿದೆ. ಇತ್ತ ಆತೀಥೆಯ ಲಂಕಾ ಪಡೆ ಹೇಗಾದರೂ ಮಾಡಿ ಪಂದ್ಯವನ್ನು ಗೆದ್ದು ಟಕ್ಕರ್ ಕೊಡಬೇಕು ಅನ್ನೋ ಲೆಕ್ಕಾಚಾರದಲ್ಲಿದೆ.
ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಸೋನಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೇರಪ್ರಸಾರ ಇರಲಿದೆ. ಟೀಂ ಇಂಡಿಯಾದ ಮುಖ್ಯಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ವಹಿಸಿಕೊಂಡ ಮೇಲೆ ತಂಡದಲ್ಲಿ ಅನೇಕ ಬದಲಾವಣೆಗಳನ್ನು ತರುತ್ತಿದ್ದಾರೆ.
ಸೂರ್ಯ ಕುಮಾರ್ ಯಾದವ್ಗೆ ನಾಯಕತ್ವ ಪಟ್ಟ ಕಟ್ಟಿರುವ ಗಂಭೀರ್, ಪ್ಲೇಯಿಂಗ್-11ನಲ್ಲೂ ಭಾರೀ ಬದಲಾವಣೆ ಮಾಡ್ತಿದ್ದಾರೆ. ಎರಡನೇ ಟಿ-20 ಪಂದ್ಯದಲ್ಲಿ ಗಿಲ್ ಬದಲಿಗೆ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಲಾಗಿತ್ತು. ಆದರೆ ಸಂಜು ಸ್ಯಾಮ್ಸನ್ ಬ್ಯಾಟಿಂಗ್ನಲ್ಲಿ ಫೇಲ್ ಆಗಿರೋದ್ರಿಂದ ಇವತ್ತಿನ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಗೋದು ಡೌಟ್. ಇನ್ನು ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ಲೇಯಿಂಗ್-11 ನಲ್ಲಿ ಭಾರೀ ಬದಲಾವಣೆಯ ನಿರೀಕ್ಷೆ ಇದೆ. ಬೆಂಚ್ನಲ್ಲಿ ಕೂತಿರುವ ಕೆಲವು ಯಂಗ್ ಪ್ಲೇಯರ್ಸ್ಗೆ ಆಡುವ ನಿರೀಕ್ಷೆ ಇದೆ.
ಇದನ್ನೂ ಓದಿ:MS ಧೋನಿ ಅಭಿಮಾನಿಗಳಿಗೆ ಕೊನೆಗೂ ಸಿಕ್ಕೇಬಿಡ್ತು ಗುಡ್ನ್ಯೂಸ್..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ