Advertisment

ಇಂದು ಸಚಿವ ಸಂಪುಟ ಸಭೆ.. ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯಕ್ಕೆ ಮುಂದಾದ ಸಿದ್ದರಾಮಯ್ಯ ಸರ್ಕಾರ

author-image
AS Harshith
Updated On
ಇಂದು ಸಚಿವ ಸಂಪುಟ ಸಭೆ.. ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯಕ್ಕೆ ಮುಂದಾದ ಸಿದ್ದರಾಮಯ್ಯ ಸರ್ಕಾರ
Advertisment
  • ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ
  • ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆ
  • ರಾಜ್ಯಪಾಲರ ನಡೆ ವಿರುದ್ಧ ರಾಜ್ಯ ​​ಸರ್ಕಾರ ಖಂಡನೆ

ಇಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ.

Advertisment

ಇಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ‘ಆತನ ಕಾಲು ಮುರಿಯಿರಿ, ಖಾಸಗಿ ಅಂಗಕ್ಕೆ ಹೊಡೆಯಿರಿ’.. ಕೋಪಗೊಂಡ ಯುಜ್ವೇಂದ್ರ ಚಹಾಲ್

publive-image

ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ರವರು ಕುಮಾರಸ್ವಾಮಿ, ನಿರಾಣಿ, ಜೊಲ್ಲೆ ಹಾಗೂ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರವಾಗಿ ಇಂದು ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ತನಿಖಾ ಸಂಸ್ಥೆಗಳು ಮನವಿ ಮಾಡಿದ್ದರೂ ಇನ್ನೂ ಅನುಮತಿ ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಲು ಮುಂದಾಗಿದ್ದಾರೆ.

Advertisment

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಶುರುವಾಯ್ತು ಮತ್ತೊಂದು ತಲೆನೋವು.. ಈ ವರ್ಷದಿಂದಲೇ PG ಕೋರ್ಸ್​ಗಳಿಗೂ CET ಪರೀಕ್ಷೆ ನಡೆಸೋ ಸಾಧ್ಯತೆ

ಕಳೆದ ವರ್ಷ ಕುಮಾರಸ್ವಾಮಿ ವಿರುದ್ಧ ಚಾರ್ಜ್ ಷೀಟ್ ಸಲ್ಲಿಸಲು ಅನುಮತಿ ನೀಡುವಂತೆ ಲೋಕಾಯುಕ್ತರಿಂದ ಮನವಿ ಸಲ್ಲಿಸಲಾಗಿತ್ತು. ಆದರೆ ಈ ವಿಚಾರವಾಗಿ ಹತ್ತು ತಿಂಗಳಾದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ ಎಂದು ಕಾಂಗ್ರೆಸ್​​ ಕಿಡಿಕಾರಿದೆ.

ಇದನ್ನೂ ಓದಿ: ಬೆಂಗಳೂರಿನ ಸ್ಮಶಾನದಲ್ಲೊಂದು ನಶಾ ಲೋಕ.. ರುದ್ರಭೂಮಿಯಲ್ಲಿ ಗಾಂಜಾ ಗಿಡ ಬೆಳೆದ ಕಿರಾತಕರು

Advertisment

ಇದೀಗ ರಾಜ್ಯಪಾಲರು ತಾರತಮ್ಯ ಮಾಡುತ್ತಿದ್ದಾರೆಂದು ಸಂಪುಟದಲ್ಲಿ ನಿರ್ಣಯ ಮಾಡಲಿದ್ದಾರೆ. ಕಳೆದ ಸಂಪುಟದಲ್ಲೂ ರಾಜ್ಯಪಾಲರ ನಡೆ ವಿರುದ್ಧ ರಾಜ್ಯ ಕಾಂಗ್ರೆಸ್​​ ಸರ್ಕಾರ ನಿರ್ಣಯ ಕೈಗೊಂಡಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment