newsfirstkannada.com

10 ರಾಜ್ಯ 96 ಕ್ಷೇತ್ರಗಳಿಗೆ ಮತಹಬ್ಬ.. ಅದೃಷ್ಟದ ಅಗ್ನಿ ಪರೀಕ್ಷೆಯಲ್ಲಿ ಸ್ಟಾರ್ಸ್​..! ಯಾಱರು ಇದ್ದಾರೆ?

Share :

Published May 13, 2024 at 6:10am

Update May 12, 2024 at 10:22pm

    ಇಂದು 4ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ

    10 ರಾಜ್ಯಗಳ 96 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆ

    ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ

ಇಂದು ನಡೆಯಲಿರುವ ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶ ಸೇರಿ 96 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಒಟ್ಟು 1,717 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು ಕೇಂದ್ರ ಚುನಾವಣಾ ಆಯೋಗ ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಕ್ರಮ ಕೈಗೊಂಡಿದ್ದು ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ:ಹಾಸನ ಅಶ್ಲೀಲ ವಿಡಿಯೋ ಕೇಸ್​ಗೆ ಸ್ಫೋಟಕ ಟ್ವಿಸ್ಟ್.. ಮತ್ತೊಬ್ಬ ‘ಮಹಾನಾಯಕ’ನ ಹೆಸರು ಹೇಳಿದ ಆರೋಪಿ..

ಎಲ್ಲೆಲ್ಲಿ ಮತಹಬ್ಬ?

  • ನಾಳೆ ಆಂಧ್ರಪ್ರದೇಶದ 25 ಕ್ಷೇತ್ರಗಳು, ಬಿಹಾರದ 5 ಕ್ಷೇತ್ರಗಳು
  • ಜಮ್ಮುಕಾಶ್ಮೀರ 1 ಕ್ಷೇತ್ರ, ಜಾರ್ಖಂಡ್​ನ 4 ಲೋಕ ಕ್ಷೇತ್ರಗಳು
  • ಮಧ್ಯಪ್ರದೇಶದ 8 ಕ್ಷೇತ್ರಗಳು, ಮಹಾರಾಷ್ಟ್ರದ 11 ಕ್ಷೇತ್ರಗಳು
  • ಒಡಿಶಾದ 4 ಕ್ಷೇತ್ರಗಳು, ತೆಲಂಗಾಣದ 17 ಲೋಕ ಕ್ಷೇತ್ರಗಳು
  • ಉತ್ತರಪ್ರದೇಶದ 13 ಕ್ಷೇತ್ರಗಳು, ಪ.ಬಂಗಾಳದ 8 ಕ್ಷೇತ್ರಗಳು
  • ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ
  • ನಾಳೆ ಒಡಿಶಾದ 147 ಕ್ಷೇತ್ರಗಳಲ್ಲಿ ಒಂದೇ ಹಂತದ ಮತದಾನ

ಯಾಱರು ಸ್ಟಾರ್ ಅಭ್ಯರ್ಥಿಗಳು?

4ನೇ ಹಂತದಲ್ಲಿ ಸಂಸದೆ ಮೊಹುವಾ ಮೊಯಿತ್ರಾ ಟಿಎಂಸಿಯಿಂದ ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಸಂಸತ್​​ನಲ್ಲಿ ಪ್ರಶ್ನೆಗಾಗಿ ಹಣ ಕೇಳಿರುವ ಆರೋಪ ಎದುರಿಸ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ ಸಂಸದ ಅಧೀರ್ ರಂಜನ್​ ಚೌಧರಿ ಪಶ್ಚಿಮ ಬಂಗಾಳದ ಬೆಹರಾಮ್​ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇದೇ ಕ್ಷೇತ್ರದಲ್ಲಿ ಅಧೀರ್ ರಂಜನ್ ಚೌಧರಿ ಎದುರಾಳಿಯಾಗಿ ಟಿಎಂಸಿಯಿಂದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್​ ಸ್ಪರ್ಧೆ ಮಾಡಿದ್ದಾರೆ. ಬಾಲಿವುಡ್ ಹಿರಿಯ ನಟ, ಸಂಸದ ಶತ್ರುಘ್ನ ಸಿನ್ಹಾ ಟಿಎಂಸಿಯಿಂದ ಪಶ್ಚಿಮ ಬಂಗಾಳದ ಅಸಾನ್ಸೋಲ್​​ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ. ಇವರು ಬಿಹಾರ್ ಬಾಬು ಎಂದೇ ಪ್ರಸಿದ್ದಿಯಾಗಿದ್ದಾರೆ. ಮತ್ತೊಂದು ಪ್ರಮುಖ ರಾಜ್ಯ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್​​ ಕನೌಜ್​ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇತ್ತ ಆಂಧ್ರದ ಮಾಜಿ ಸಿಎಂ ವೈಎಸ್​ಆರ್​ ಪುತ್ರಿ ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಕಡಪ ಕ್ಷೇತ್ರದಿಂದ ಸಹೋದರ ಸಂಬಂಧಿ ಅವಿನಾಶ್ ರೆಡ್ಡಿ ವಿರುದ್ಧ ಸ್ಪರ್ಧೆ ಮಾಡಿದ್ದಾರೆ. ಅತ್ತ ತೆಲಂಗಾಣದ ಹೈದ್ರಾಬಾದ್​​ನಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸ್ಪರ್ಧೆ ಮಾಡಿದ್ದು ಇವರ ವಿರುದ್ಧ ಹಿಂದುತ್ವದ ಫೈರ್ ಬ್ರ್ಯಾಂಡ್ ಎಂದೇ ಖ್ಯಾತರಾಗಿರುವ ಮಾಧವಿ ಲತಾ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾರೆ. ಇನ್ನು ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಸಿಕಂದರಾಬಾದ್​ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ:Heat wave: ರಣ ಬಿಸಿಲಿಗೆ ಯಾರಾದರೂ ಪ್ರಜ್ಞೆತಪ್ಪಿ ಬಿದ್ದರೆ ಯಾವತ್ತೂ ಈ ತಪ್ಪು ಮಾಡಲೇಬೇಡಿ..!

4ನೇ ಹಂತದ ಲೋಕ ಮತೋತ್ಸವದಲ್ಲಿ ಘಟಾನುಘಟಿ ನಾಯಕರುಗಳು ಅದೃಷ್ಟಪರೀಕ್ಷೆಗಿಳಿದಿದ್ದು ಇವರೆಲ್ಲರ ರಾಜಕೀಯ ಭವಿಷ್ಯಕ್ಕೆ ಮತದಾರರ ಪ್ರಭುಗಳು ಮುದ್ರೆ ಒತ್ತಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

10 ರಾಜ್ಯ 96 ಕ್ಷೇತ್ರಗಳಿಗೆ ಮತಹಬ್ಬ.. ಅದೃಷ್ಟದ ಅಗ್ನಿ ಪರೀಕ್ಷೆಯಲ್ಲಿ ಸ್ಟಾರ್ಸ್​..! ಯಾಱರು ಇದ್ದಾರೆ?

https://newsfirstlive.com/wp-content/uploads/2024/05/ELCTIONS.jpg

    ಇಂದು 4ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ

    10 ರಾಜ್ಯಗಳ 96 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆ

    ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ

ಇಂದು ನಡೆಯಲಿರುವ ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶ ಸೇರಿ 96 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಒಟ್ಟು 1,717 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು ಕೇಂದ್ರ ಚುನಾವಣಾ ಆಯೋಗ ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಕ್ರಮ ಕೈಗೊಂಡಿದ್ದು ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ:ಹಾಸನ ಅಶ್ಲೀಲ ವಿಡಿಯೋ ಕೇಸ್​ಗೆ ಸ್ಫೋಟಕ ಟ್ವಿಸ್ಟ್.. ಮತ್ತೊಬ್ಬ ‘ಮಹಾನಾಯಕ’ನ ಹೆಸರು ಹೇಳಿದ ಆರೋಪಿ..

ಎಲ್ಲೆಲ್ಲಿ ಮತಹಬ್ಬ?

  • ನಾಳೆ ಆಂಧ್ರಪ್ರದೇಶದ 25 ಕ್ಷೇತ್ರಗಳು, ಬಿಹಾರದ 5 ಕ್ಷೇತ್ರಗಳು
  • ಜಮ್ಮುಕಾಶ್ಮೀರ 1 ಕ್ಷೇತ್ರ, ಜಾರ್ಖಂಡ್​ನ 4 ಲೋಕ ಕ್ಷೇತ್ರಗಳು
  • ಮಧ್ಯಪ್ರದೇಶದ 8 ಕ್ಷೇತ್ರಗಳು, ಮಹಾರಾಷ್ಟ್ರದ 11 ಕ್ಷೇತ್ರಗಳು
  • ಒಡಿಶಾದ 4 ಕ್ಷೇತ್ರಗಳು, ತೆಲಂಗಾಣದ 17 ಲೋಕ ಕ್ಷೇತ್ರಗಳು
  • ಉತ್ತರಪ್ರದೇಶದ 13 ಕ್ಷೇತ್ರಗಳು, ಪ.ಬಂಗಾಳದ 8 ಕ್ಷೇತ್ರಗಳು
  • ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ
  • ನಾಳೆ ಒಡಿಶಾದ 147 ಕ್ಷೇತ್ರಗಳಲ್ಲಿ ಒಂದೇ ಹಂತದ ಮತದಾನ

ಯಾಱರು ಸ್ಟಾರ್ ಅಭ್ಯರ್ಥಿಗಳು?

4ನೇ ಹಂತದಲ್ಲಿ ಸಂಸದೆ ಮೊಹುವಾ ಮೊಯಿತ್ರಾ ಟಿಎಂಸಿಯಿಂದ ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಸಂಸತ್​​ನಲ್ಲಿ ಪ್ರಶ್ನೆಗಾಗಿ ಹಣ ಕೇಳಿರುವ ಆರೋಪ ಎದುರಿಸ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ ಸಂಸದ ಅಧೀರ್ ರಂಜನ್​ ಚೌಧರಿ ಪಶ್ಚಿಮ ಬಂಗಾಳದ ಬೆಹರಾಮ್​ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇದೇ ಕ್ಷೇತ್ರದಲ್ಲಿ ಅಧೀರ್ ರಂಜನ್ ಚೌಧರಿ ಎದುರಾಳಿಯಾಗಿ ಟಿಎಂಸಿಯಿಂದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್​ ಸ್ಪರ್ಧೆ ಮಾಡಿದ್ದಾರೆ. ಬಾಲಿವುಡ್ ಹಿರಿಯ ನಟ, ಸಂಸದ ಶತ್ರುಘ್ನ ಸಿನ್ಹಾ ಟಿಎಂಸಿಯಿಂದ ಪಶ್ಚಿಮ ಬಂಗಾಳದ ಅಸಾನ್ಸೋಲ್​​ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ. ಇವರು ಬಿಹಾರ್ ಬಾಬು ಎಂದೇ ಪ್ರಸಿದ್ದಿಯಾಗಿದ್ದಾರೆ. ಮತ್ತೊಂದು ಪ್ರಮುಖ ರಾಜ್ಯ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್​​ ಕನೌಜ್​ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇತ್ತ ಆಂಧ್ರದ ಮಾಜಿ ಸಿಎಂ ವೈಎಸ್​ಆರ್​ ಪುತ್ರಿ ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಕಡಪ ಕ್ಷೇತ್ರದಿಂದ ಸಹೋದರ ಸಂಬಂಧಿ ಅವಿನಾಶ್ ರೆಡ್ಡಿ ವಿರುದ್ಧ ಸ್ಪರ್ಧೆ ಮಾಡಿದ್ದಾರೆ. ಅತ್ತ ತೆಲಂಗಾಣದ ಹೈದ್ರಾಬಾದ್​​ನಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸ್ಪರ್ಧೆ ಮಾಡಿದ್ದು ಇವರ ವಿರುದ್ಧ ಹಿಂದುತ್ವದ ಫೈರ್ ಬ್ರ್ಯಾಂಡ್ ಎಂದೇ ಖ್ಯಾತರಾಗಿರುವ ಮಾಧವಿ ಲತಾ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾರೆ. ಇನ್ನು ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಸಿಕಂದರಾಬಾದ್​ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ:Heat wave: ರಣ ಬಿಸಿಲಿಗೆ ಯಾರಾದರೂ ಪ್ರಜ್ಞೆತಪ್ಪಿ ಬಿದ್ದರೆ ಯಾವತ್ತೂ ಈ ತಪ್ಪು ಮಾಡಲೇಬೇಡಿ..!

4ನೇ ಹಂತದ ಲೋಕ ಮತೋತ್ಸವದಲ್ಲಿ ಘಟಾನುಘಟಿ ನಾಯಕರುಗಳು ಅದೃಷ್ಟಪರೀಕ್ಷೆಗಿಳಿದಿದ್ದು ಇವರೆಲ್ಲರ ರಾಜಕೀಯ ಭವಿಷ್ಯಕ್ಕೆ ಮತದಾರರ ಪ್ರಭುಗಳು ಮುದ್ರೆ ಒತ್ತಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More