/newsfirstlive-kannada/media/post_attachments/wp-content/uploads/2025/07/Prajwal_Revanna.jpg)
ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ತೀರ್ಪು ಪ್ರಜ್ವಲ್ ರೇವಣ್ಣ ಭವಿಷ್ಯದ ಪಾಲಿಗೆ ಮಹತ್ವ ಪಡೆದುಕೊಂಡಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು 4 ಕೇಸ್ಗಳು ದಾಖಲಾಗಿವೆ. ಈ 4 ಕೇಸ್ಗಳ ಪೈಕಿ ಈಗ ಮೊದಲ ಕೇಸ್ನ ತೀರ್ಪು ಇವತ್ತು ಪ್ರಕಟ ಆಗಲಿದೆ. ಪ್ರಕರಣ ಸಂಬಂಧ ಈಗಾಗಲೇ ವಾದ- ಪ್ರತಿವಾದ ಮುಗಿದಿದೆ. ಕೇಸ್ನಲ್ಲಿ ಸಾಕ್ಷ್ಯಗಳ ವಿಚಾರಣೆ ಕೂಡ ಕೋರ್ಟ್ ಆಲಿಸಿದೆ. ಬಳಿಕ ಕಾಯ್ದಿರಿಸಿರುವ ಕೇಸ್ ತೀರ್ಪನ್ನ ಇವತ್ತು ಕೋರ್ಟ್ ಪ್ರಕಟಿಸಲಿದೆ.
ಇದನ್ನೂ ಓದಿ: ನಿಮ್ಮ ಸ್ಥಾನದಿಂದ ಗೌರವ, ಪುರಸ್ಕಾರ ದೊರೆಯಬಹುದು.. ಕುಟುಂಬ ಇಷ್ಟ ಪಡುತ್ತದೆ; ಇಲ್ಲಿದೆ ಇಂದಿನ ಭವಿಷ್ಯ!
ಪ್ರಜ್ವಲ್ ರೇವಣ್ಣ ಪರ ತೀರ್ಪು ಬಂದರೆ..
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಇವತ್ತು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ ಆಗಲಿದೆ. ಒಂದ್ವೇಳೆ ಅಪರಾಧಿ ಎಂದು ತೀರ್ಪು ನೀಡಿದ್ರೆ, ದೊಡ್ಡ ಹಿನ್ನಡೆ ಆಗಲಿದೆ. ತೀರ್ಪು ಬಳಿಕ ಶಿಕ್ಷೆಯ ಪ್ರಮಾಣವನ್ನ ನ್ಯಾಯಾಲಯ ಪ್ರಕಟಿಸಬೇಕಾಗುತ್ತೆ. ಅಂದ್ರೆ ಶಿಕ್ಷೆಯ ಪ್ರಮಾಣದ ಬಗ್ಗೆಯೂ ಕೋರ್ಟ್ ವಾದ- ಪ್ರತಿವಾದವನ್ನ ಆಲಿಸಲಿದೆ. ಗರಿಷ್ಠ ಶಿಕ್ಷೆ ವಿಧಿಸಬೇಕು ಅಂತ ಪ್ರಾಸಿಕ್ಯೂಷನ್ ಪರ ವಕೀಲರ ವಾದ ಮಂಡಿಸಲಿದ್ದಾರೆ. ಕಡಿಮೆ ಶಿಕ್ಷೆ ನೀಡಿ ಅಂತ ಪ್ರಜ್ವಲ್ ರೇವಣ್ಣ ಪರ ವಕೀಲರು ಮನವಿ ಮಾಡುವ ಸಾಧ್ಯತೆ ಇದೆ. ಒಂದ್ವೇಳೆ ಪ್ರಜ್ವಲ್ ವಿರುದ್ಧ ತೀರ್ಪು ಬಂದ್ರೆ ಇಷ್ಟೆಲ್ಲಾ ಕೋರ್ಟ್ನಲ್ಲಿ ನಡೆಯಲಿದೆ.
ಇದನ್ನೂ ಓದಿ: ಡಿಕೆಶಿ ಹೊರಗಿಟ್ಟು CM ಸಭೆ; ಸಿದ್ದು ಎದುರಲ್ಲೇ ರಾಜಣ್ಣ- ಗುಬ್ಬಿ ಶಾಸಕ ಶ್ರೀನಿವಾಸ್ ಜಟಾಪಟಿ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ