/newsfirstlive-kannada/media/post_attachments/wp-content/uploads/2024/03/Faf_Kohli_RCB.jpg)
ಇಂದು ಸನ್ರೈಸರ್ಸ್ ವಿರುದ್ದ ಆರ್ಸಿಬಿ ಮಹತ್ವದ ಪಂದ್ಯವನ್ನಾಡಳಿದೆ. ಈಗಾಗಲೇ 5 ಪಂದ್ಯಗಳಲ್ಲಿ ಸೋತಿರುವ ಆರ್ಸಿಬಿ ಇದೀಗ ಅಳಿವು ಉಳಿವಿನ ಲೆಕ್ಕಚಾರ ಆರಂಭಿಸಿದ್ದು ,ಆರ್ಸಿಬಿ ಪಾಲಿಗೆ ಗೆಲ್ಲಲೆಬೇಕಾದ ಅನಿವಾರ್ಯತೆ ಇದೆ.
ಗೆದ್ದರೆ ಪ್ಲೇ ಆಫ್ ಸೋತರೆ ಮನೆಗೆ ಎಂಬ ಪರಿಸ್ಥಿತಿಯಲ್ಲಿರುವ ಆರ್ಸಿಬಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈದರಬಾದ್ ಸನ್ರೈಸರ್ಸ್ ವಿರುದ್ದ ಸೆಣೆಸಾಡಲಿದೆ. ಫಾಫ್ ಡು ಪೆಸ್ಲಿ ಸಾರಥ್ಯದಲ್ಲಿ ಆರ್ಸಿಬಿ ಆಡಿರುವ 6 ಪಂದ್ಯಗಳ ಪೈಕಿ 5 ಪಂದ್ಯದಲ್ಲಿ ಸೋಲನ್ನ ಅನುಭವಿಸಿದೆ.
ಇನ್ನು 5 ಪಂದ್ಯಗಳಲ್ಲಿ 3 ಪಂದ್ಯವನ್ನ ಗೆದ್ದ ಸನ್ರೈಸರ್ಸ್ ತನ್ನ ಬ್ಯಾಟರ್ಗಳ ಮೇಲೆ ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದು , ಸನ್ ರೈಸರ್ಸ್ ಬ್ಯಾಟರ್ಗಳನ್ನು ಕಟ್ಟಿಹಾಕುವ ಸವಾಲು ಆರ್ಸಿಬಿ ಬೌಲರ್ಗಳ ಮುಂದಿದೆ.
ಇದನ್ನೂ ಓದಿ: ಪೆಟ್ರೋಲ್ ದರ ಏರಿಕೆಯಾಗುತ್ತಾ? ಭಾರತದಲ್ಲೂ ಸಂಚಲನ ಸೃಷ್ಟಿಸಿದ ಇಸ್ರೇಲ್-ಇರಾನ್ ದೇಶಗಳ ಸಂಘರ್ಷ!
ಕಾವಿಯ ಮಾರನ್ ಒಡೆತನದ ಹೈದರಾಬಾದ್ ತಂಡ ಈಗಾಗಲೇ ಐದು ಪಂದ್ಯ ಎದುರಿಸಿದ್ದು, 2 ಪಂದ್ಯ ಸೋತಿದೆ. ಆದರೂ ಸಹ ಪಾಯಿಂಟ್ ಟೇಬಲ್ನಲ್ಲಿ 4ನೇ ಸ್ಥಾನವನ್ನು ಪಡೆದುಕೊಂಡಿದೆ. ಅತ್ತ ಆರ್ಸಿಬಿ ಪಾಯಿಂಟ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ.
ಫ್ಯಾನ್ಸ್ ಒತ್ತಡ
ಸೋಲಿನ ಸುಳಿಯಲ್ಲಿ ಸುತ್ತುತ್ತಾ ಬಂದಿರುವ ಆರ್ಸಿಬಿಗೆ ಅಭಿಮಾನಿಗಳು ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದಾರೆ. ಇಂದಿನ ಪಂದ್ಯ ಕೂಡ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹೈದರಾಬಾದ್ ತಂಡವನ್ನು ಮಣ್ಣು ಮುಕ್ಕಿಸಬೇಕು ಎಂದು ಫ್ಯಾನ್ಸ್ ಒತ್ತಡ ಹೇರುತ್ತಿದ್ದಾರೆ. ಆದರೆ ಇದೆಲ್ಲ ಇಂದು ಸಾಧ್ಯವಾ ಎಂದು ಕಾದು ನೋಡಬೇಕಿದೆ. ಒಂದು ವೇಳೆ ಗೆದ್ದರೆ ಈ ಸಂತಸವನ್ನು ಅಭಿಮಾನಿಗಳು ವಿಭಿನ್ನವಾಗಿ ಸೆಲೆಬ್ರೇಟ್ ಮಾಡಲು ಸಿದ್ದರಿದ್ದಾರೆ. ಬಿರಿಯಾನಿ ಊಟ, ಪಟಾಕಿ ಸಿಡಿಸಿ ಸಂಭ್ರಮಿಸಲು ಕಾಯುತ್ತಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ