/newsfirstlive-kannada/media/post_attachments/wp-content/uploads/2024/08/Darshan-In-Court-Attend.jpg)
ಬೆಂಗಳೂರು: ಬಳ್ಳಾರಿ ಜೈಲಿನಲ್ಲಿರುವ ಆರೋಪಿ ನಂಬರ್ 2 ದರ್ಶನ್​ಗೆ ಈಗ ಹೊಸ ಚಿಂತೆ ಶುರುವಾಗಿದೆ. ನಾಳೆ ದರ್ಶನ್​ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಮತ್ತೆ ಕೋರ್ಟ್​ಗೆ ಹಾಜರಾಗಲಿದ್ದಾರೆ. ಇದರ ಮಧ್ಯೆ ದರ್ಶನ್​ಗೆ ಹಾಗೂ ಅವರ ಕುಟುಂಬಕ್ಕೆ ಬೇಲ್​ ವಿಚಾರದಲ್ಲಿ ಹೊಸ ಟೆನ್ಶನ್ ಶುರುವಾಗಿದೆ.
ಅತ್ತ ಪವಿತ್ರಾಗೌಡ ಸೇರಿದಂತೆ ಹಲವು ಆರೋಪಿಗಳು ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದ್ರೆ ದರ್ಶನ್ ಮಾತ್ರ ಜೈಲಿನಲ್ಲಿದ್ದು ಇಷ್ಟು ದಿನಗಳಾದ್ರೂ ಕೂಡ ಜಾಮೀನು ಅರ್ಜಿ ಸಲ್ಲಿಸಿರಲಿಲ್ಲ. ಚಾರ್ಜ್​ ಶೀಟ್​ ಪ್ರತಿ ಸಿಕ್ಕ ನಂತರವಷ್ಟೇ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ರೇಣುಕಾಸ್ವಾಮಿ ಕೇಸ್ಗೆ ಹೊಸ ಟ್ವಿಸ್ಟ್.. ದರ್ಶನ್ ಕಾಪಾಡಲು ಸರೆಂಡರ್ ಆಗಿದ್ದ A16 ಕೇಶವ ಸಿಕ್ಕಿದ್ದೇ ರೋಚಕ!
ಈಗಾಗಲೇ ದರ್ಶನ್ ಬೇಲ್ ವಿಚಾರವಾಗಿ ದರ್ಶನ್, ಪತ್ನಿ ಹಾಗೂ ಸಹೋದರ ದಿನಕರ್ ಜೊತೆ ಚರ್ಚೆ ಮಾಡಿದ್ದಾರೆ. ಇತ್ತೀಚೆಗೆ ಬಳ್ಳಾರಿ ಜೈಲಿಗೆ ಕುಟುಂಬ ಭೇಟಿ ನೀಡಿದ ಸಂದರ್ಭದಲ್ಲಿ ಚಾರ್ಜ್​​ಶೀಟ್​ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬಳ್ಳಾರಿ ಜೈಲಿನಲ್ಲಿಯೇ ದರ್ಶನ್ ಜಾಮೀನು ಅರ್ಜಿಗೆ ಸಹಿ ಮಾಡಿದ್ದಾರೆ. ಈಗಾಗಲೇ ಜಾಮೀನು ಅರ್ಜಿ ಸಲ್ಲಿಸಲು ವಕೀಲರು ಸಕಲ ಸಿದ್ಧತೆ ಮಾಡಿಕೊಂಡಿದ್ದು. ಎಸಿಎಂಎಂ ಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಗಣೇಶನ ಹಣದ ವಿಚಾರಕ್ಕೆ ಸೋದರನ ಜೀವನ ಮುಗಿಸಿದ, ರಥಚಕ್ರಕ್ಕೆ ಸಿಲುಕಿ ಯುವಕ ಸಾವು, ಪೊಲೀಸರ ಮೇಲೂ ಹಲ್ಲೆ
13ದಿನಗಳ ಕಸ್ಟಡಿ ಅಂತ್ಯ ನಾಳೆ ದರ್ಶನ್ ಭವಿಷ್ಯ ನಿರ್ಧಾರ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆರೋಪಿಯಾಗಿರುವ ದರ್ಶನ್​ ನಾಳೆಗೆ 13 ದಿನಗಳ ನ್ಯಾಯಾಂಗ ಬಂಧನ ಮುಗಿಯಲಿದೆ. ಬಳ್ಳಾರಿ ಜೈಲಿಂದ ಹೈ ಸೆಕ್ಯೂರಿಟಿ ಸೆಲ್​ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್​ಗೆ ದರ್ಶನ್ ಹಾಜರಾಗಲಿದ್ದಾರೆ. ಈಗಾಗಲೇ ನಾಳೆಯ ವಿಡಿಯೋ ಕಾನ್ಫರೆನ್ಸ್​ಗೆ ಜೈಲಾಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದು. ವಿಡಿಯೋ ಕಾನ್ಫರೆನ್ಸ್ ಹಾಲ್ ಬದಲಾಗಿ ಸೈ ಸೆಕ್ಯೂರಿಟಿ ಸೆಲ್​ನಿಂದಲೇ ಕೋರ್ಟ್​​ಗೆ ದರ್ಶನ್ ಹಾಜರಾಗಲಿದ್ದಾರೆ. ನಾಳೆ ದರ್ಶನ್ ಅವರ ಜೈಲು ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನಿಗಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ರೆ ಆರೋಪಿ ದರ್ಶನ್ ಅವರ ಕಾನೂನು ಹೋರಾಟದ ಹೊಸ ಅಧ್ಯಾಯ ಆರಂಭವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us