/newsfirstlive-kannada/media/post_attachments/wp-content/uploads/2025/03/Rajat-Vinay-release-from-jail.jpg)
ಬೆಂಗಳೂರು: ಮಚ್ಚಾ.. ಮಚ್ಚು ಹಿಡಿಯೋ ಅಂತ ರೀಲ್ಸ್ ಮಾಡಿದ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ಕಿಶನ್ ಅವರು ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಇಂದು ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ರಜತ್ ಹಾಗೂ ವಿನಯ್ ಇಬ್ಬರು ಒಟ್ಟಿಗೆ ರಿಲೀಸ್ ಆದರು.
ಅಂದು ಮಚ್ಚು ಹಿಡಿದು ಜೈಲಿಗೆ ಹೋದವರು ಇಂದು ಕೈಯಲ್ಲಿ ಬ್ಯಾಗ್ ಹಿಡಿದು ಒಟ್ಟಿಗೆ ಹೆಜ್ಜೆ ಹಾಕಿದರು.
ಇದನ್ನೂ ಓದಿ: ಬ್ಯಾಗ್ ಹಿಡಿದು, ಆ್ಯಪಲ್ ತಿನ್ನುತ್ತ ಜೈಲಿನಿಂದ ಹೊರಬಂದ ವಿನಯ್, ರಜತ್ ಕಿಶನ್..!
ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಿಗ್ಬಾಸ್ ಮಾಜಿ ಸ್ಪರ್ಧಿಗಳ ಮೇಲೆ ಬಸವೇಶ್ವರ ನಗರ ಠಾಣೆ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ FIR ಹಾಕಿದ್ದರು.
ಬಳಿಕ ವಿಚಾರಣೆಗೆ ಬರುವಂತೆ ಪೊಲೀಸರು ಸೂಚನೆ ಕೊಟ್ಟಿದ್ದರು. ಆದರೆ ಆರೋಪಿಗಳು ಫೈಬರ್ ಮಚ್ಚು ನೀಡಿ ಪ್ರಕರಣದ ದಿಕ್ಕು ತಪ್ಪಿಸಿದ್ದರು.
ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಫೈಬರ್ ಮಚ್ಚು ಕೊಟ್ಟು ತನಿಖೆಯ ದಾರಿ ತಪ್ಪಿಸೋ ಯತ್ನ ಮಾಡಲಾಗಿತ್ತು.
ಸಾಕ್ಷ್ಯ ನಾಶ ಯತ್ನದ ಆರೋಪದಲ್ಲಿ ಬಸವೇಶ್ವರ ನಗರ ಪೊಲೀಸರು ಮತ್ತೆ ರಜತ್, ವಿನಯ್ ಇಬ್ಬರನ್ನು ಅರೆಸ್ಟ್ ಮಾಡಿದ್ದರು.
ನಿನ್ನೆ ಈ ರೀಲ್ಸ್ ಪ್ರಕರಣದಲ್ಲಿ ಇಬ್ಬರಿಗೂ 24ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಜಾಮೀನು ಆದೇಶ ಪ್ರತಿ ಸರಿಯಾದ ಸಮಯಕ್ಕೆ ತಲುಪದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ರಜತ್, ವಿನಯ್ ಬಿಡುಗಡೆ ಸಾಧ್ಯವಾಗಿರಲಿಲ್ಲ.
ಆರೋಪಿಗಳ ಜಾಮೀನು ಪ್ರಕ್ರಿಯೆಗಳು ಮುಗಿದಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಜೈಲಿನಿಂದ ರಿಲೀಸ್ ಆದ ರಜತ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಆದರೆ ವಿನಯ್ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.
ಸರ್.. ಮಾತಾಡೋಣ ಎಲ್ಲರೂ ಸೇರ್ಕೊಂಡು ಮಾತಾಡೋಣ. ಎಲ್ರೂ ತುಂಬಾ ಸಪೋರ್ಟ್ ಮಾಡಿದ್ದೀರ. ಎಲ್ರೂ ಸೇರಿ ಮಾತಾಡೋಣ ಎಂದು ಹೇಳಿ ವಿನಯ್ ಪರಪ್ಪನ ಅಗ್ರಹಾರದಿಂದ ಹೊರಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ