newsfirstkannada.com

BIG BREAKING: ಅತಿ ದೊಡ್ಡ ಎನ್‌ಕೌಂಟರ್‌.. ಟಾಪ್ ಮಾವೋವಾದಿ ನಾಯಕ ಸೇರಿ 29 ಮಂದಿ ಹತ್ಯೆ

Share :

Published April 16, 2024 at 8:03pm

    ಲೋಕಸಭಾ ಚುನಾವಣೆ ಸಮಯದಲ್ಲಿ ಕಂಡು ಕೇಳರಿಯದ ಕಾರ್ಯಾಚರಣೆ

    ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಒಟ್ಟು 29 ಮಾವೋವಾದಿಗಳ ಸಾವು

    ಎನ್‌ಕೌಂಟರ್‌ ಬಗ್ಗೆ ಪೊಲೀಸ್‌ ವರಿಷ್ಠಾಧಿಕಾರಿ ಕಲ್ಯಾಣ್ ಹೇಳಿದ್ದೇನು?

ನವದೆಹಲಿ: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಅತಿದೊಡ್ಡ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್‌ ದಾಳಿಯಲ್ಲಿ ಬಟ್ಟು 29 ಮಾವೋವಾದಿಗಳು ಬಲಿಯಾಗಿರುವ ವರದಿಯಾಗಿದೆ. ಲೋಕಸಭಾ ಚುನಾವಣೆಯ ಸಮಯದಲ್ಲಿ ನಡೆದಿರುವ ಕಂಡು ಕೇಳರಿಯದ ದೊಡ್ಡ ಕಾರ್ಯಾಚರಣೆ ಇದಾಗಿದೆ.

ಎನ್‌ಕೌಂಟರ್‌ನ ಗುಂಡಿನ ಚಕಮಕಿಯಲ್ಲಿ 3 ಮಂದಿ ಭದ್ರತಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದೆ. ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಕೂಡ ಹತನಾಗಿದ್ದಾನೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರೊಟಿ ಮತ್ತು ನಾನ್​ ಬೆಲೆಯನ್ನು ಗಣನೀಯವಾಗಿ ಇಳಿಕೆ ಮಾಡಿದೆ ಪಾಕ್​! ಆಹಾರ ಸಮಸ್ಯೆ ಎದುರಿಸುತ್ತಿದೆಯಾ?

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್‌ ವರಿಷ್ಠಾಧಿಕಾರಿ ಕಲ್ಯಾಣ್ ಎಲೆಸೆಲಾ, ಬಿನಗುಂದ ಮತ್ತು ಕೊರೊನಾರ್ ಗ್ರಾಮಗಳ ಮಧ್ಯೆ ಹಪಟೋಲಾ ಅರಣ್ಯದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ರಾಜ್ಯದ ಜಿಲ್ಲಾ ಮೀಸಲು ಪಡೆ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದೆ. ಕಾರ್ಯಚರಣೆಯು ಮುಂದವರೆದಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ನಕ್ಸಲ್ ನಾಯಕ ಶಂಕರ್ ರಾವ್ ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ಪೊಲೀಸರು ಮಾಹಿತಿ ನೀಡಿದ್ದರು. ಇದೀಗ ಎನ್‌ಕೌಂಟರ್‌ ದಾಳಿಯಲ್ಲಿ 29 ಮಾವೋವಾದಿಗಳು ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BIG BREAKING: ಅತಿ ದೊಡ್ಡ ಎನ್‌ಕೌಂಟರ್‌.. ಟಾಪ್ ಮಾವೋವಾದಿ ನಾಯಕ ಸೇರಿ 29 ಮಂದಿ ಹತ್ಯೆ

https://newsfirstlive.com/wp-content/uploads/2024/04/chhattisgarh-encounter.jpg

    ಲೋಕಸಭಾ ಚುನಾವಣೆ ಸಮಯದಲ್ಲಿ ಕಂಡು ಕೇಳರಿಯದ ಕಾರ್ಯಾಚರಣೆ

    ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಒಟ್ಟು 29 ಮಾವೋವಾದಿಗಳ ಸಾವು

    ಎನ್‌ಕೌಂಟರ್‌ ಬಗ್ಗೆ ಪೊಲೀಸ್‌ ವರಿಷ್ಠಾಧಿಕಾರಿ ಕಲ್ಯಾಣ್ ಹೇಳಿದ್ದೇನು?

ನವದೆಹಲಿ: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಅತಿದೊಡ್ಡ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್‌ ದಾಳಿಯಲ್ಲಿ ಬಟ್ಟು 29 ಮಾವೋವಾದಿಗಳು ಬಲಿಯಾಗಿರುವ ವರದಿಯಾಗಿದೆ. ಲೋಕಸಭಾ ಚುನಾವಣೆಯ ಸಮಯದಲ್ಲಿ ನಡೆದಿರುವ ಕಂಡು ಕೇಳರಿಯದ ದೊಡ್ಡ ಕಾರ್ಯಾಚರಣೆ ಇದಾಗಿದೆ.

ಎನ್‌ಕೌಂಟರ್‌ನ ಗುಂಡಿನ ಚಕಮಕಿಯಲ್ಲಿ 3 ಮಂದಿ ಭದ್ರತಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದೆ. ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಕೂಡ ಹತನಾಗಿದ್ದಾನೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಕಲ್ಯಾಣ್ ಎಲೆಸೆಲಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರೊಟಿ ಮತ್ತು ನಾನ್​ ಬೆಲೆಯನ್ನು ಗಣನೀಯವಾಗಿ ಇಳಿಕೆ ಮಾಡಿದೆ ಪಾಕ್​! ಆಹಾರ ಸಮಸ್ಯೆ ಎದುರಿಸುತ್ತಿದೆಯಾ?

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್‌ ವರಿಷ್ಠಾಧಿಕಾರಿ ಕಲ್ಯಾಣ್ ಎಲೆಸೆಲಾ, ಬಿನಗುಂದ ಮತ್ತು ಕೊರೊನಾರ್ ಗ್ರಾಮಗಳ ಮಧ್ಯೆ ಹಪಟೋಲಾ ಅರಣ್ಯದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ರಾಜ್ಯದ ಜಿಲ್ಲಾ ಮೀಸಲು ಪಡೆ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದೆ. ಕಾರ್ಯಚರಣೆಯು ಮುಂದವರೆದಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ನಕ್ಸಲ್ ನಾಯಕ ಶಂಕರ್ ರಾವ್ ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ಪೊಲೀಸರು ಮಾಹಿತಿ ನೀಡಿದ್ದರು. ಇದೀಗ ಎನ್‌ಕೌಂಟರ್‌ ದಾಳಿಯಲ್ಲಿ 29 ಮಾವೋವಾದಿಗಳು ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More