/newsfirstlive-kannada/media/media_files/2025/09/03/darshan-and-dayanada-2025-09-03-18-01-54.jpg)
ಮತ್ತೆ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್
ಜೈಲಿನಲ್ಲಿ ಕನಿಷ್ಠ ಸೌಲಭ್ಯ ಸಿಕ್ಕಿಲ್ಲ ಎಂದು ನಟ ದರ್ಶನ್ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸೆಷನ್ಸ್ ಕೋರ್ಟ್ ಆದೇಶದ ನಂತರವೂ ಸೌಲಭ್ಯ ಸಿಕ್ಕಿಲ್ಲ ಎಂದು ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್​​ಗೆ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಜೈಲಿನಲ್ಲಿ ಕನಿಷ್ಠ ಸೌಲಭ್ಯವನ್ನೂ ನೀಡುತ್ತಿಲ್ಲ ಎಂದು ದೂರಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.
‘ಕಾರಿಡಾರ್​ನಲ್ಲಿ ವಾಕ್ ಮಾಡಲು ಮಾತ್ರ ಅಧಿಕಾರಿಗಳು ಅವಕಾಶ ನೀಡಿದ್ದಾರೆ’ . ಸೆಷನ್ಸ್ ಕೋರ್ಟ್ ಹೇಳಿದ್ದ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಸೆಷನ್ಸ್ ಕೋರ್ಟ್​ಗೆ ದರ್ಶನ್ ಪರ ವಕೀಲ ಎಸ್.ಸುನೀಲ್ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆಗೆ ಶಿಫಾರಸ್ಸು ಕೋರಿ ಮನವಿಯನ್ನು ಸೆಷನ್ಸ್ ಕೋರ್ಟ್ ಗೆ ಮಾಡಿಕೊಂಡಿದ್ದಾರೆ. ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ ಕೇಸ್ಗೆ ಶಿಫಾರಸ್ಸು ಮಾಡಿ ಎಂದು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
/filters:format(webp)/newsfirstlive-kannada/media/media_files/2025/08/22/bangalore-central-jail-2025-08-22-18-16-58.jpg)
ಜೈಲಾಧಿಕಾರಿಗಳಿಗೆ ಸೆಷನ್ಸ್ ಕೋರ್ಟ್ ಆದೇಶ ನೀಡಲು ವಕೀಲರು ಹೋಗಿದ್ದರು. ದರ್ಶನ್ ಪರ ವಕೀಲರು ಹೋಗಿದ್ದಾಗ ಸ್ಪಂದಿಸಿಲ್ಲ ಎಂದು ಅರ್ಜಿಯಲ್ಲಿ ಆರೋಪ ಮಾಡಲಾಗಿದೆ. ಕೋರ್ಟ್ ಆದೇಶದ ನಂತರವೂ ಹಾಸಿಗೆ, ದಿಂಬು ಸಿಕ್ಕಿಲ್ಲ ಎಂದು ಅರ್ಜಿ ಸಲ್ಲಿಕೆ ಮಾಡಲಾಗಿದೆ. ಜೈಲು ಮ್ಯಾನ್ಯುಯೆಲ್​​ನಲ್ಲಿರುವ ಕನಿಷ್ಠ ಸೌಲಭ್ಯವನ್ನೂ ಕೊಡುತ್ತಿಲ್ಲ ಎಂದು ಆರೋಪ ಮಾಡಲಾಗಿದೆ. ಸೆಷನ್ಸ್ ಕೋರ್ಟ್ ಆದೇಶವನ್ನು ಜೈಲು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us